AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಕಿಂಗ್ ಪಿನ್ಗಳ ಜೊತೆ ಸಂಪರ್ಕ ಹೊಂದಿರುವವರಿಗೂ ಸಂಕಷ್ಟ ಶುರು

ತಲೆ ಮರೆಸಿಕೊಂಡಿರೋ ದಿವ್ಯಾ ಹಾಗರಗಿ ಜೊತೆ ಈ ಹಿಂದೆ ಸಂಪರ್ಕ ದಲ್ಲಿದ್ದವರಿಗೆ ವಿಚಾರಣೆ ಮಾಡಲಾಗಿತ್ತು. ಈಗ ಬೇರೆ ಬೇರೆ ಸ್ಥಳಗಳಿಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ. ಅಕ್ರಮದ ಬಗ್ಗೆ, ಹಣಕಾಸಿನ ವ್ಯವಹಾರದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಕಿಂಗ್ ಪಿನ್ಗಳ ಜೊತೆ ಸಂಪರ್ಕ ಹೊಂದಿರುವವರಿಗೂ ಸಂಕಷ್ಟ ಶುರು
ಪೊಲೀಸ್ ಠಾಣೆ ಸೆಲ್​ನಲ್ಲಿರುವ ಕಿಂಗ್​ಪಿನ್​ಗಳು
TV9 Web
| Edited By: |

Updated on: Apr 28, 2022 | 7:30 AM

Share

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ(PSI Recruitment Scam) ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಮಾಡಿದವರ ಜೊತೆ ಸಂಪರ್ಕ ಹೊಂದಿದವರಿಗೆ ಸಂಕಷ್ಟ ಎದುರಾಗಿದೆ. ಕಿಂಗ್ ಪಿನ್ಗಳ ಜೊತೆ ಸಂಪರ್ಕ ಹೊಂದಿರೋರನ್ನ ಸಿಐಡಿ ವಿಚಾರಣೆ ನಡೆಸುತ್ತಿದೆ. ತಲೆ ಮರೆಸಿಕೊಂಡಿರೋ ದಿವ್ಯಾ ಹಾಗರಗಿ ಜೊತೆ ಈ ಹಿಂದೆ ಸಂಪರ್ಕ ದಲ್ಲಿದ್ದವರಿಗೆ ವಿಚಾರಣೆ ಮಾಡಲಾಗಿತ್ತು. ಈಗ ಬೇರೆ ಬೇರೆ ಸ್ಥಳಗಳಿಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ. ಅಕ್ರಮದ ಬಗ್ಗೆ, ಹಣಕಾಸಿನ ವ್ಯವಹಾರದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಕ್ರಮದಲ್ಲಿ ಭಾಗಿಯಾಗಿದ್ರೆ, ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ರೆ ಅವರಿಗೆ ಸಂಕಷ್ಟ ಶುರುವಾಗಲಿದೆ. ಇನ್ನು ಈಗಾಗಲೇ ಆರೋಪಿಗಳು ಪರಾರಿಯಾಗಲು ಸಹಾಯ ಮಾಡಿದ್ದ ಕೆಲವರನ್ನು ಸಿಐಡಿ ಬಂಧಿಸಿದೆ.

ಪ್ರಕರಣದ ಮತ್ತೋರ್ವ ಕಿಂಗ್ಪಿನ್ ಮಂಜುನಾಥ ನಾಪತ್ತೆ ಪ್ರಕರಣದ ಮತ್ತೋರ್ವ ಕಿಂಗ್ಪಿನ್, ಕಲಬುರಗಿ ನೀರಾವರಿ ಇಲಾಖೆಯಲ್ಲಿ ಎಇ ಆಗಿರುವ ಮಂಜುನಾಥ ಮೇಳಕುಂದಿ ನಾಪತ್ತೆಯಾಗಿದ್ದಾರೆ. ಎಂಟೆಕ್ ಪದವೀಧರರಾಗಿರುವ ಮಂಜುನಾಥ ಪರೀಕ್ಷಾ ಅಕ್ರಮಕ್ಕೆ ಎಲೆಕ್ಟ್ರಾನಿಕ್ ಡಿವೈಸ್ ತರಿಸುತ್ತಿದ್ದರು. ಎಲೆಕ್ಟ್ರಾನಿಕ್ ಡಿವೈಸ್ ಬಳಸುವುದರಲ್ಲಿ ಪರಿಣತಿ ಹೊಂದಿದ್ದ ಮಂಜುನಾಥ ನಾಪತ್ತೆಯಾಗಿದ್ದು ಪತ್ತೆಯಾದರೆ ಅಕ್ರಮದ ಸಾಕಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ಈ ಹಿಂದೆ ಬಳಸಿದ್ದ ಡಿವೈಸ್ಗಳು ಇವೆಯಾ, ನಾಶಮಾಡಿದ್ದಾರಾ? ಎಂಬ ಬಗ್ಗೆ ಮಾಹಿತಿ ಸಿಗಲಿದೆ. ಮಂಜುನಾಥ ಸಾಕ್ಷ್ಯನಾಶ ಮಾಡಲು ಹತ್ತಾರು ತಂತ್ರ ಉಪಯೋಗಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ನಾಪತ್ತೆಯಾಗಿರೋ ದಿವ್ಯಾ & ಗ್ಯಾಂಗ್ ಗಾಗಿ ಸಿಐಡಿ ಹುಡುಕಾಟ ಪ್ರಕರಣದ ಮುಖ್ಯ ಕಿಗ್ ಪಿನ್ ದಿವ್ಯಾ & ಗ್ಯಾಂಗ್ ನಾಪತ್ತೆಯಾಗಿದ್ದು ಸಿಐಡಿ ಹುಡುಕಾಟದಲ್ಲಿ ತೊಡಗಿದೆ. ಮಾಹಿತಿ ಸಿಕ್ಕಲೆಲ್ಲಾ ಹೋಗಿ ಹುಡುಕಾಟ ನಡೆಸುತ್ತಿದ್ದಾರೆ. ಕಲಬುರಗಿ ಯಿಂದ ಕಾಶ್ಮೀರದವರಗೆ ತಲಾಶ್ ನಡೆಯುತ್ತಿದೆ. ಸಿಐಡಿಗೆ ಕೆಲವರಿಂದ ಈಶಾನ್ಯ ರಾಜ್ಯಗಳತ್ತ ಹೋಗಿರೋ ಬಗ್ಗೆ ಮಾಹಿತಿ ಸಿಕ್ಕಿದೆ. ನರ್ಸಿಂಗ್ ಕಾಲೇಜು, ಸಲೂನ್ ಸೇರಿದಂತೆ ಅನೇಕ ಬಿಜಿನೆಸ್ ಮಾಡುತ್ತಿದ್ದ ದಿವ್ಯಾ ಹಾಗರಗಿಗೆ ಈಶಾನ್ಯ ರಾಜ್ಯಗಳಲ್ಲಿ ಕೆಲ ಪರಿಚಿತರು ಇದ್ದಾರೆ. ದಿವ್ಯಾ ಹಾಗರಗಿ ಈಶಾನ್ಯ ರಾಜ್ಯಗಳಿಂದ ಅನೇಕ ಕಾರ್ಮಿಕರನ್ನು ಕರೆತಂದಿದ್ದರು. ಹೀಗಾಗಿ ಅದೇ ಸೇಫ್ ಜಾಗ ಅಂತ ಆ ಕಡೆ ಹೋಗಿರೋ ಅನುಮಾನ ವ್ಯಕ್ತವಾಗಿದೆ. ಆದ್ರೆ ಸದ್ಯ ದಿವ್ಯ ಹಾಗರಗಿಗಾಗಿ ಎಲ್ಲಡೆ ತಲಾಶ್ ನಡೆದಿದೆ. ಆರೋಪಿಗಳ ಬಂಧನಕ್ಕಿಂತ ಸಾಕ್ಷಿ ಸಂಗ್ರಹ ಮುಖ್ಯ. ಸಾಕ್ಷಿ ನಾಶವಾದ್ರೆ ಸಿಗೋದಿಲ್ಲಾ, ಆರೋಪಿಗಳನ್ನು ತಿಂಗಳ ನಂತರವಾದ್ರು ಬಂಧಿಸಬಹುದು. ಆರೋಪಿಗಳ ಪತ್ತೆ ಜೊತೆ ಅವರ ಅಕ್ರಮದ ಜನ್ಮ ಜಾಲಾಡುತ್ತಿದ್ದೇವೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.

11 ಅಭ್ಯರ್ಥಿಗಳ ಪೈಕಿ ಇಲ್ಲಿವರಗೆ 7 ಅಭ್ಯರ್ಥಿಗಳ ಬಂಧನ ಅಕ್ರಮದ ಕೇಂದ್ರ ಸ್ಥಾನ ಜ್ಞಾನಜೋತಿ ಇಂಗ್ಲಿಷ್ ಶಾಲೆಯಲ್ಲಿ ಪರೀಕ್ಷೆ ಬರೆದಿದ್ದ 11 ಅಭ್ಯರ್ಥಿಗಳ ಆಯ್ಕೆಯಾಗಿದೆ. ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ 11 ಜನರ ಹೆಸರಿದೆ. ಈ 11 ಅಭ್ಯರ್ಥಿಗಳ ಪೈಕಿ ಇಲ್ಲಿವರಗೆ 7 ಅಭ್ಯರ್ಥಿಗಳ ಬಂಧನವಾಗಿದೆ. ಏಳು ಜನರು ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದರು. ಉಳಿದ ನಾಲ್ವರ ಬಗ್ಗೆ ಸಿಐಡಿ ಮಾಹಿತಿ ಸಂಗ್ರಹಿಸುತ್ತಿದೆ. ನಾಲ್ವರಲ್ಲಿ ಇಬ್ಬರು ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾರೆ. ನಾಪತ್ತೆಯಾಗಿರೋ ಇನ್ನಿಬ್ಪರಿಗಾಗಿ ಸಿಐಡಿ ಹುಡುಕಾಡುತ್ತಿದೆ.

ಇದನ್ನೂ ಓದಿ: ರಣರಂಗವಾದ ಗೀತಂ ವಿವಿ; 6ನೇ ಮಹಡಿಯಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು, ವಿದ್ಯಾರ್ಥಿಗಳಿಂದ ಕಾಲೇಜು ಧ್ವಂಸ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು