AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ

ಮಾಜಿ MLC ಅಲ್ಲಮಪ್ರಭು ಪಾಟೀಲ್ ಸೇರಿ ಅನೇಕರು ಮಹಾಂತೇಶ್ ಪಾಟೀಲ್​ಗೆ ಸತ್ಕಾರ ಮಾಡಿ ಜೈಲಿನಿಂದ ಹೊರ ಬಂದಿದ್ದಕ್ಕೆ ಸಂಭ್ರಮಾಚರಣೆ ಮಾಡಿದ್ದಾರೆ.

PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ
ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಸತ್ಕಾರ
TV9 Web
| Edited By: ಆಯೇಷಾ ಬಾನು|

Updated on:Dec 17, 2022 | 10:16 AM

Share

ಕಲಬುರಗಿ: 545 PSI ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಆರೋಪಿ ಮಹಾಂತೇಶ್ ಪಾಟೀಲ್​ಗೆ ಜಾಮೀನು ಸಿಕ್ಕಿದೆ. ‘ಕೈ’ ಮುಖಂಡ ಮಹಾಂತೇಶ್ ನಿನ್ನೆ(ಡಿ.17) ಜೈಲಿನಿಂದ ಮನೆಗೆ ಬಂದಿದ್ದಾರೆ. ಈ ಹಿನ್ನೆಲೆ ಕೆಲ ಕಾಂಗ್ರೆಸ್ ಮುಖಂಡರು ಮಹಾಂತೇಶ್ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ಜಾಮೀನಿನ ಮೇಲೆ ಹೊರಗೆ ಬರ್ತಿದ್ದಂತೆ ಮಹಾಂತೇಶ್​ಗೆ ಅತಿಥಿ ಸತ್ಕಾರ ನಡೆದಿದೆ.

ಮಾಜಿ MLC ಅಲ್ಲಮಪ್ರಭು ಪಾಟೀಲ್ ಸೇರಿ ಅನೇಕರು ಮಹಾಂತೇಶ್ ಪಾಟೀಲ್​ಗೆ ಸತ್ಕಾರ ಮಾಡಿ ಜೈಲಿನಿಂದ ಹೊರ ಬಂದಿದ್ದಕ್ಕೆ ಸಂಭ್ರಮಾಚರಣೆ ಮಾಡಿದ್ದಾರೆ. ಕಲಬುರಗಿ ನಗರದಲ್ಲಿರುವ ಆರೋಪಿ ಮಹಾಂತೇಶ್ ಪಾಟೀಲ್ ಮನೆಯಲ್ಲಿ ಸಂಭ್ರಮ ಜೋರಾಗಿದೆ. ಇನ್ನು ಮಹಾಂತೇಶ್ ಪಾಟೀಲ್ ಸಹೋದರ ರುದ್ರಗೌಡ ಪಾಟೀಲ್ ಇಡಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಅಕ್ರಮವಾಗಿ ಪಿಎಸ್​ಐ ಪರೀಕ್ಷೆ ಬರೆಯಲು ಸಹಾಯ ಮಾಡಿದ ಆರೋಪದ ಮೇಲೆ ಏಪ್ರಿಲ್​ನಲ್ಲಿ ಮಹಾಂತೇಶ್ ಪಾಟೀಲ್​ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಡಿ.15ರಂದು ಕಲಬುರಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿ: PSI Recruitment Scam: ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

PSI Recruitment Scam: ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣ (PSI Recruitment Scam) ಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ಎಸ್​ಐ ಹಗರಣದ ಪ್ರಮುಖ ಆರೋಪಿಗೆ ಜಾಮೀನು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್​ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದ ರಚನಾಗೆ ಜಾಮೀನು ಸಿಕ್ಕಿದೆ. ಆರೋಪಿಗಳ ಪರ ವಕೀಲ ಶ್ಯಾಮ್​ಸುಂದರ್​ ಅವರು ವಾದ ಮಾಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Sat, 17 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ