AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PWD JE ಪರೀಕ್ಷೆಯಲ್ಲಿ ಅಕ್ರಮ ವಿಚಾರ; ವಿಡಿಯೋ ಸಮೇತ ಸಾಕ್ಷಿ ಸಿಕ್ಕರೂ ತನಿಖೆಗೆ ಮುಂದಾಗದ ಸರ್ಕಾರ

ಅವಧಿಗೂ ಮೊದಲೇ ಜೆಇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತು. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿ ಪರೀಕ್ಷೆ ಅಭ್ಯರ್ಥಿಗಳಿಗೆ ಉತ್ತರ ಹೇಳಿಕೊಡುತ್ತಿದ್ದ. ಇಷ್ಟೆಲ್ಲಾ ಸಾಕ್ಷಿ ಇದ್ದರೂ ಈವರೆಗೂ ಸರ್ಕಾರ ತನಿಖೆಗೆ ವಹಿಸಿಲ್ಲ.

PWD JE ಪರೀಕ್ಷೆಯಲ್ಲಿ ಅಕ್ರಮ ವಿಚಾರ; ವಿಡಿಯೋ ಸಮೇತ ಸಾಕ್ಷಿ ಸಿಕ್ಕರೂ ತನಿಖೆಗೆ ಮುಂದಾಗದ ಸರ್ಕಾರ
ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಉತ್ತರ ಹೇಳಿಕೊಡುತ್ತಿದ್ದಾನೆ.
TV9 Web
| Edited By: sandhya thejappa|

Updated on:Apr 25, 2022 | 11:32 AM

Share

ಕಲಬುರಗಿ: ಲೋಕೋಪಯೋಗಿ ಇಲಾಖೆಯ ಜೆಇ (PWD JE) ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ನಿನ್ನೆ ವಿಡಿಯೋ ಸಮೇತ ಬಯಲಾಗಿದೆ. ವಿಡಿಯೋ ಸಮೇತ ಸಾಕ್ಷಿ ಸಿಕ್ಕರೂ ಸರ್ಕಾರ (Government) ಮಾತ್ರ ತನಿಖೆಗೆ ಮುಂದಾಗಿಲ್ಲ. KPSC ಹಗರಣಗಳು ಹೊರಬಂದರೆ ಅನೇಕರಿಗೆ ಕಂಟಕ ಎದುರಾಗುವ ಸಾಧ್ಯತೆಯಿದ್ದು, ಸರ್ಕಾರದ ಮೇಲೆ ಪ್ರಭಾವಿಗಳು ಒತ್ತಡ ಹಾಕುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಳೆದ ಡಿಸೆಂಬರ್ 13ರಂದು PWD ಇಲಾಖೆಯ ಜೆಇ ಪರೀಕ್ಷೆ ನಡೆದಿತ್ತು. ಪರೀಕ್ಷೆ ಅಭ್ಯರ್ಥಿಗಳಿಗೆ ವ್ಯಕ್ತಿ ಲಾಡ್ಜ್​ನಲ್ಲಿ ಕುಳಿತು ಉತ್ತರ ಹೇಳಿಕೊಡುತ್ತಿದ್ದ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಅವಧಿಗೂ ಮೊದಲೇ ಜೆಇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತು. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿ ಪರೀಕ್ಷೆ ಅಭ್ಯರ್ಥಿಗಳಿಗೆ ಉತ್ತರ ಹೇಳಿಕೊಡುತ್ತಿದ್ದ. ಇಷ್ಟೆಲ್ಲಾ ಸಾಕ್ಷಿ ಇದ್ದರೂ ಈವರೆಗೂ ಸರ್ಕಾರ ತನಿಖೆಗೆ ವಹಿಸಿಲ್ಲ.

ಪರೀಕ್ಷೆ ವೇಳೆ ಸಿಕ್ಕಿ ಬಿದ್ದಿದ್ದ ಅಭ್ಯರ್ಥಿ: ಇನ್ನು ಬೆಂಗಳೂರಿನ ಸೇಂಟ್ ಜಾನ್ಸ್ ಪ್ರೌಢಶಾಲೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ ಕಲಬುರಗಿ ಜಿಲ್ಲೆಯ ಅಫಜಲಪುರ ನಿವಾಸಿ ವೀರಣ್ಣ ಎನ್ನುವ ಅಭ್ಯರ್ಥಿ ಪರೀಕ್ಷೆ ಬರೆಯಲು ಹೋಗಿದ್ದ. ಆದರೆ ಪರೀಕ್ಷೆ ಬರೆಯಲು ಹೋದಾಗ ವೀರಣ್ಣ ಸಿಕ್ಕಿಬಿದ್ದಿದ್ದ. ವೀರಣ್ಣ ರುದ್ರಗೌಡ ಪಾಟೀಲ್ ಮತ್ತು ಮಂಜುನಾಥ ಮೇಳಕುಂದಿ ತಂಡದ ಜೊತೆ ಡೀಲ್ ಮಾಡಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಆನ್ ಮಾಡಲು ಹೋಗಿ ಪರೀಕ್ಷಾ ಮೇಲ್ವಿಚಾರಕರ ಬಳಿ ಸಿಕ್ಕಿ ಬಿದ್ದಿದ್ದ. ಆಗ ಶಾಲೆ ಸಿಬ್ಬಂದಿ ವೀರಣ್ಣ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರುದ್ರಗೌಡ ಪಾಟೀಲ್ ಮತ್ತು ನೀರಾವರಿ ಇಲಾಖೆ ಇಂಜನೀಯರ್ ಮಂಜುನಾಥ ಮೇಳಕುಂದಿ ಅವರನ್ನು ವಿಚಾರಣೆ ಮಾಡಿದ್ದರು. ಈ ಪ್ರಕರಣದಲ್ಲಿ ಮಂಜುನಾಥ ಮೇಳಕುಂದಿ ಬಂಧಿತನಾಗಿದ್ದ. ಆದರೆ ನಂತರ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಆತನ ಹೆಸರು ಕೈಬಿಟ್ಟಿದ್ದರು. ಮಂಜುನಾಥ ಮೇಳಕುಂದಿ, ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಕೂಡಾ ಆರೋಪಿಯಾಗಿದ್ದಾನೆ. ಕಳೆದ ಹದಿನೈದು ದಿನಗಳಿಂದ ಈತ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ

Adani Power: ಅದಾನಿ ಸಮೂಹದಲ್ಲಿ 1 ಲಕ್ಷ ಕೋಟಿ ರೂ. ಬಂಡವಾಳ ಮೌಲ್ಯ ದಾಟಿದ ಆರನೇ ಸಂಸ್ಥೆ ಅದಾನಿ ಪವರ್

‘ಡಾ. ರಾಜ್​ಕುಮಾರ್​ ಬಗ್ಗೆ ಅವರ ತಂದೆ ನುಡಿದಿದ್ರು ಭವಿಷ್ಯ’: ಅಚ್ಚರಿಯ ಘಟನೆ ಮೆಲುಕು ಹಾಕಿದ ರಾಘಣ್ಣ

Published On - 11:23 am, Mon, 25 April 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ