AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳ ಹಿಡಿದ ಕಲಬುರಗಿ ಜನರ ಕನಸಿನ ಕೂಸು: 10 ವರ್ಷದಿಂದ ನೆನೆಗುದಿಗೆ ಬಿದ್ದ ರಾಜೀವ್ ಗಾಂಧಿ ಥೀಮ್ ಪಾರ್ಕ್

kalaburagi Rajiv Gandhi Theme Park: ಕಲಬುರಗಿ ಜನರು ಕನಸಿನ ಯೋಜನೆಯಾದ ರಾಜೀವ್ ಗಾಂಧಿ ಥೀಮ್ ಪಾರ್ಕ್ ನಿರ್ಮಾಣ ಕಾರ್ಯ 10 ವರ್ಷಗಳಿಂದ ಸ್ಥಗಿತಗೊಂಡಿದೆ. 2014ರಲ್ಲಿ ಆರಂಭವಾದ ಈ ಯೋಜನೆ ಕಳಪೆ ಕಾಮಗಾರಿಯಿಂದ ಅರ್ಧಕ್ಕೆ ನಿಂತಿದ್ದು, ಇಂದಿಗೂ ಆರಂಭಗೊಂಡಿಲ್ಲ. ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿರುವ ಪಾರ್ಕ್‌ ಪೂರ್ಣಗೊಳಿಸುವಂತೆ ಆಗ್ರಹ ಕೇಳಿಬಂದಿದೆ.

ಹಳ್ಳ ಹಿಡಿದ ಕಲಬುರಗಿ ಜನರ ಕನಸಿನ ಕೂಸು: 10 ವರ್ಷದಿಂದ ನೆನೆಗುದಿಗೆ ಬಿದ್ದ ರಾಜೀವ್ ಗಾಂಧಿ ಥೀಮ್ ಪಾರ್ಕ್
ರಾಜೀವ್ ಗಾಂಧಿ ಥೀಮ್ ಪಾರ್ಕ್Image Credit source: tv9 kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 09, 2026 | 4:42 PM

Share

ಕಲಬುರಗಿ, ಆಗಸ್ಟ್​ 09: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ (kalaburagi) ನಗರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಎಲ್ಲ ವಯೋಮಾನದವರಿಗೆ ಒಂದೇ ಸೂರಿನಡಿ ಮನರಂಜನೆ ನೀಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದ ಬೃಹತ್ ‘ರಾಜೀವ್ ಗಾಂಧಿ ಥೀಮ್ ಪಾರ್ಕ್’ (Rajiv Gandhi Theme Park) ಯೋಜನೆ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯರ ಕನಸಿನ ಕೂಸಾಗಿದ್ದ ಈ ಪಾರ್ಕ್, ಇದೀಗ ಹಳ್ಳ ಹಿಡಿದಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

18 ಎಕರೆಯಲ್ಲಿ 9 ಕೋಟಿ ರೂ ವೆಚ್ಚದ ಯೋಜನೆ

ಕಲಬುರಗಿ ನಗರದ ಧರಿಯಾಪುರ ಕೋಟನೂರ್ ಬಡಾವಣೆಯ 18 ಎಕರೆ ವಿಶಾಲ ಪ್ರದೇಶದಲ್ಲಿ 2014ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ 9 ಕೋಟಿ ರೂ ವೆಚ್ಚದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಯೋಜಿಸಲಾಗಿತ್ತು.

ಇದನ್ನೂ ಓದಿ: ನೆರೆಯಲ್ಲಿ ಶವಸಂಸ್ಕಾರದ ಹರಸಾಹಸ: ಹರಿವ ನದಿಯಲ್ಲೇ ಟ್ರ್ಯಾಕ್ಟರ್ ಓಡಿಸಿ ಅಂತ್ಯಕ್ರಿಯೆ ನೆರವೇರಿಸಿದ ಜನರು

ಈ ಪೈಕಿ 3 ಕೋಟಿ ರೂ ಹಣ ಮಂಜೂರಾಗಿದ್ದು, ಕಾಮಗಾರಿಯ ಜವಾಬ್ದಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಯೋಜನೆಯ ಪ್ರಕಾರ 7ಡಿ ಥಿಯೇಟರ್, ಫನ್ ಕಾಂಪ್ಲೆಕ್ಸ್, ಮಕ್ಕಳ ವಸತಿ, ಕೀಟಗಳ ಮನೆ ಹಾಗೂ ಮತ್ಸ್ಯಾಗಾರಗಳನ್ನು ಒಳಗೊಂಡ ಅತ್ಯಾಧುನಿಕ ಉದ್ಯಾನವನವನ್ನು ಒಂದೆರಡು ವರ್ಷಗಳಲ್ಲೇ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಿತ್ತು.

ಕಳಪೆ ಕಾಮಗಾರಿ, ಸ್ಥಗಿತಗೊಂಡ ಕೆಲಸ

2014-15ರಲ್ಲಿ ಆರಂಭಗೊಂಡ ಕಾಮಗಾರಿಯು ಆರಂಭದಲ್ಲೇ ತೀವ್ರ ಕಳಪೆಯಿಂದ ಕೂಡಿದ್ದರಿಂದ ಕೆಲಸವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ 10 ವರ್ಷಗಳು ಕಳೆದರೂ ಕಾಮಗಾರಿಯನ್ನು ಪುನರಾರಂಭಿಸಲು ಯಾವುದೇ ಕ್ರಮಕೈಗೊಂಡಿಲ್ಲ. ಪರಿಣಾಮವಾಗಿ ಪಾರ್ಕ್‌ನಲ್ಲಿದ್ದ ನಾಲ್ಕು ಹೈಮಾಸ್ಟ್ ದೀಪಗಳು, ಆರು ಕಾರಂಜಿಗಳು, ಕಾಂಪೌಂಡ್ ಗೋಡೆಗಳು ಒಡೆದು ಹೋಗಿದ್ದು, ಕಬ್ಬಿಣದ ಗೇಟ್‌ಗಳು ತುಕ್ಕು ಹಿಡಿದಿವೆ. ಜೊತೆಗೆ ಸುತ್ತಲಿನ ಸ್ಟ್ರೀಟ್ ಲೈಟ್‌ಗಳು ಹಾಳಾಗಿದ್ದು, ಅರ್ಧಕ್ಕೆ ನಿಂತ ಕಟ್ಟಡಗಳು ದನದ ಕೊಟ್ಟಿಗೆಗಳಂತಾಗಿವೆ.

ಅನೈತಿಕ ಚಟುವಟಿಕೆ ತಾಣ; ಸಾರ್ವಜನಿಕರ ಆಕ್ರೋಶ

ಹಸಿರು ಉದ್ಯಾನವನದಿಂದ ಕಂಗೊಳಿಸಬೇಕಿದ್ದ ಈ ಪಾರ್ಕ್​​ನಲ್ಲಿ ಇಂದು ಎಲ್ಲೆಂದರಲ್ಲಿ ಮುಳ್ಳು ಕಂಟಿಗಳು, ಜಾಲಿ ಗಿಡಗಳು ಬೆಳೆದು ನಿಂತಿವೆ. ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಪ್ಯಾಕೆಟ್‌ಗಳು ಬಿದ್ದಿದ್ದು, ಕತ್ತಲಾಗುತ್ತಿದ್ದಂತೆ ಪುಂಡಪೋಕರಿಗಳ ತಾಣವಾಗುತ್ತಿದೆ. ಎಮ್ಮೆ-ದನಗಳು ಮೇಯುವ ಸ್ಥಳವಾಗಿ ಮಾರ್ಪಟ್ಟಿದೆ.

Klb

 

ಇದನ್ನೂ ಓದಿ: “ನಮ್ಮ ಶಾಲೆಗೆ ರಸ್ತೆ ಮಾಡಿಸಿಕೊಡಿ”: ಯಡ್ರಾಮಿಯಲ್ಲಿ ಅಧಿಕಾರಿಗಳ ವಿರುದ್ಧ ಶಾಲಾ ಮಕ್ಕಳ ಆಕ್ರೋಶ

ಸಾರ್ವಜನಿಕರ ತೆರಿಗೆ ಹಣ ಅರೆಬರೆ ಕಾಮಗಾರಿಯಿಂದಾಗಿ ಪೋಲಾಗುತ್ತಿದ್ದು, ಈ ಕುರಿತು ಜನರು ಹಲವು ಬಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಗಿತಗೊಂಡಿರುವ ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಿ ಪೂರ್ಣಗೊಳಿಸಬೇಕು ಎಂದು ಕಲಬುರಗಿ ನಿವಾಸಿಗಳು ತೀವ್ರವಾಗಿ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ