AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಸುರಪುರ ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನ ಹಿನ್ನೆಲೆ ಅಂತಿಮ ದರ್ಶನ ಪಡೆಯಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಆಗಮಿಸಿದರು. ವಿಮಾನ ನಿಲ್ದಾಣದ ಬಳಿ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಸಾಧ್ಯತೆ ಬಗ್ಗೆ ಮಾತನಾಡಿದ ಖರ್ಗೆ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸುಳ್ಳು, ನೇರ ಮತದಾನ ನಡೆಯಲಿದೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ ಎಂದ ಮಲ್ಲಿಕಾರ್ಜುನ ಖರ್ಗೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 26, 2024 | 2:27 PM

Share

ಕಲಬುರಗಿ, ಫೆ.26: ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Elections) ಕಾಂಗ್ರೆಸ್​ಗೆ ಅಡ್ಡ ಮತದಾನ ಭೀತಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ (Mallikarjun Kharge) ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸುಳ್ಳು, ನೇರ ಮತದಾನ ನಡೆಯಲಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್ ಸಂಪೂರ್ಣ ನಾಶ ಆಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್‌ ಹೇಳಿಕೆ ವಿಚಾರವಾಗಿ ಮಾತನಾಡಿದ ಖರ್ಗೆ, ಅವರು ವಿರೋಧ ಪಕ್ಷದವರಿದ್ದಾರೆ. ಏನು ಬೇಕಾದರೂ ಹೇಳುತ್ತಾರೆ. ಎಸ್​ಪಿ, ಆಮ್ ಆದ್ಮಿ ಪಕ್ಷ, ಝಾರ್ಖಂಡ್, ಬಿಹಾರದಲ್ಲಿ ನಮ್ಮ ಮೈತ್ರಿ ಘೋಷಣೆಯಾಗಿದೆ. ಹೊಂದಾಣಿಕೆ ಆಗಬೇಕಿದೆ ಎಂದರು.

ಇದನ್ನೂ ಓದಿ: Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ಪ್ರಜಾಪ್ರಭುತ್ವದಲ್ಲಿ ಅಹಂನಿಂದ ಮಾತಾಡಿದರೆ ಜನ ಅವರಿಗೆ ಪಾಠ ಕಲಿಸುತ್ತಾರೆ. ಕಲಬುರಗಿಗೆ ಬಂದು ಚವ್ಹಾಣ್‌ ಏನೇನೋ ಮಾತಾಡಿ ಹೋಗುವುದಲ್ಲ. 371 ಜೆ ಈ ಭಾಗಕ್ಕೆ ತಂದಿದ್ದೇವೆ, ರಾಜ್ಯ ಸರ್ಕಾರ ಐದು ಸಾವಿರ ಕೋಟಿ ಕೊಡುತ್ತಿದೆ. ಕೆಕೆಆರ್​ಡಿಬಿಗೆ 10 ಸಾವಿರ ಕೋಟಿ ಕೊಡಿಸಲು ಹೇಳಿ ಚವ್ಹಾಣ್​ಗೆ. ಸುಮ್ಮನೆ ಮಾತಾಡಿ ಹೋಗುವುದಲ್ಲ. ನಮ್ಮ ಅಸ್ಥಿತ್ವವೇ ನಿಮಗೆ ಗೊತ್ತಿಲ್ಲ ಅಂದರೆ ನಮಗ್ಯಾಕೆ ಟೀಕೆ ಮಾಡುತ್ತೀರಾ? ನಾವು ಶಕ್ತಿ ಶಾಲಿ ಇದ್ದೇವೆ ಅಂತಾ ಅವರಿಗೆ ಗೊತ್ತಿಲ್ಲ ಎಂದರು.

ರಾಜ ವೆಂಕಟಪ್ಪ ನಿಧನಕ್ಕೆ ಖರ್ಗೆ ಸಂತಾಪ

ಸುರಪುರ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ್ ವಿಧಿವಶ ಹಿನ್ನಲೆ ಅಂತಿಮ ದರ್ಶನ ಪಡೆಯಲು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ರಾಜಾವೆಂಕಟಪ್ಪ ನಾಯಕ್‌ ಅವರನ್ನ ಕಳೆದುಕೊಂಡಿರುವುದು ನನಗೆ ಅತೀವ ದುಖಃವಾಗಿದೆ ಎಂದರು.

ಯಾವುದೇ ಚುನಾವಣೆ ಇರಲಿ, ನನ್ನನ್ನ ಬಿಟ್ಟು ವೆಂಕಟಪ್ಪನಾಯಕ್ ಪ್ರಚಾರ ಮಾಡುತ್ತಿರಲಿಲ್ಲ. ನಾನು ಹೇಳುತ್ತಿರುವ ಮಾತನ್ನ ಅವರು ಚಾಚುತಪ್ಪದೇ ಮಾಡುತ್ತಿದ್ದರು. ನಾನು ಯಾವಗಲೂ ರಾಜಾವೆಂಕಟಪ್ಪ ನಾಯಕ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದೇನೆ, ಮುಂದೆಯು ನಿಲ್ಲುತ್ತೇನೆ. ರಾಜಾವೆಂಕಟಪ್ಪರನ್ನ ಲೋಕಸಭೆ ಚುನಾವಣೆಗೆ ನಿಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ ದುರ್ದೈವ, ರಾಜಾವೆಂಕಟಪ್ಪ ನಾಯಕ್‌ ಅವರ ಆಕಸ್ಮಿಕ ಸಾವಾಗಿದೆ. ವೆಂಕಟಪ್ಪನಾಯಕ್‌ ಅವರನ್ನ ಕಳೆದುಕೊಂಡ ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ದೇವರು ನೀಡಲಿ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ನಾನು ಸುರಪುರಕ್ಕೆ ತೆರಳಲಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್