AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಸುರಪುರ ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನ ಹಿನ್ನೆಲೆ ಅಂತಿಮ ದರ್ಶನ ಪಡೆಯಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಆಗಮಿಸಿದರು. ವಿಮಾನ ನಿಲ್ದಾಣದ ಬಳಿ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಸಾಧ್ಯತೆ ಬಗ್ಗೆ ಮಾತನಾಡಿದ ಖರ್ಗೆ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸುಳ್ಳು, ನೇರ ಮತದಾನ ನಡೆಯಲಿದೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ ಎಂದ ಮಲ್ಲಿಕಾರ್ಜುನ ಖರ್ಗೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 26, 2024 | 2:27 PM

Share

ಕಲಬುರಗಿ, ಫೆ.26: ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Elections) ಕಾಂಗ್ರೆಸ್​ಗೆ ಅಡ್ಡ ಮತದಾನ ಭೀತಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ (Mallikarjun Kharge) ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸುಳ್ಳು, ನೇರ ಮತದಾನ ನಡೆಯಲಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್ ಸಂಪೂರ್ಣ ನಾಶ ಆಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್‌ ಹೇಳಿಕೆ ವಿಚಾರವಾಗಿ ಮಾತನಾಡಿದ ಖರ್ಗೆ, ಅವರು ವಿರೋಧ ಪಕ್ಷದವರಿದ್ದಾರೆ. ಏನು ಬೇಕಾದರೂ ಹೇಳುತ್ತಾರೆ. ಎಸ್​ಪಿ, ಆಮ್ ಆದ್ಮಿ ಪಕ್ಷ, ಝಾರ್ಖಂಡ್, ಬಿಹಾರದಲ್ಲಿ ನಮ್ಮ ಮೈತ್ರಿ ಘೋಷಣೆಯಾಗಿದೆ. ಹೊಂದಾಣಿಕೆ ಆಗಬೇಕಿದೆ ಎಂದರು.

ಇದನ್ನೂ ಓದಿ: Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ಪ್ರಜಾಪ್ರಭುತ್ವದಲ್ಲಿ ಅಹಂನಿಂದ ಮಾತಾಡಿದರೆ ಜನ ಅವರಿಗೆ ಪಾಠ ಕಲಿಸುತ್ತಾರೆ. ಕಲಬುರಗಿಗೆ ಬಂದು ಚವ್ಹಾಣ್‌ ಏನೇನೋ ಮಾತಾಡಿ ಹೋಗುವುದಲ್ಲ. 371 ಜೆ ಈ ಭಾಗಕ್ಕೆ ತಂದಿದ್ದೇವೆ, ರಾಜ್ಯ ಸರ್ಕಾರ ಐದು ಸಾವಿರ ಕೋಟಿ ಕೊಡುತ್ತಿದೆ. ಕೆಕೆಆರ್​ಡಿಬಿಗೆ 10 ಸಾವಿರ ಕೋಟಿ ಕೊಡಿಸಲು ಹೇಳಿ ಚವ್ಹಾಣ್​ಗೆ. ಸುಮ್ಮನೆ ಮಾತಾಡಿ ಹೋಗುವುದಲ್ಲ. ನಮ್ಮ ಅಸ್ಥಿತ್ವವೇ ನಿಮಗೆ ಗೊತ್ತಿಲ್ಲ ಅಂದರೆ ನಮಗ್ಯಾಕೆ ಟೀಕೆ ಮಾಡುತ್ತೀರಾ? ನಾವು ಶಕ್ತಿ ಶಾಲಿ ಇದ್ದೇವೆ ಅಂತಾ ಅವರಿಗೆ ಗೊತ್ತಿಲ್ಲ ಎಂದರು.

ರಾಜ ವೆಂಕಟಪ್ಪ ನಿಧನಕ್ಕೆ ಖರ್ಗೆ ಸಂತಾಪ

ಸುರಪುರ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ್ ವಿಧಿವಶ ಹಿನ್ನಲೆ ಅಂತಿಮ ದರ್ಶನ ಪಡೆಯಲು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ರಾಜಾವೆಂಕಟಪ್ಪ ನಾಯಕ್‌ ಅವರನ್ನ ಕಳೆದುಕೊಂಡಿರುವುದು ನನಗೆ ಅತೀವ ದುಖಃವಾಗಿದೆ ಎಂದರು.

ಯಾವುದೇ ಚುನಾವಣೆ ಇರಲಿ, ನನ್ನನ್ನ ಬಿಟ್ಟು ವೆಂಕಟಪ್ಪನಾಯಕ್ ಪ್ರಚಾರ ಮಾಡುತ್ತಿರಲಿಲ್ಲ. ನಾನು ಹೇಳುತ್ತಿರುವ ಮಾತನ್ನ ಅವರು ಚಾಚುತಪ್ಪದೇ ಮಾಡುತ್ತಿದ್ದರು. ನಾನು ಯಾವಗಲೂ ರಾಜಾವೆಂಕಟಪ್ಪ ನಾಯಕ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದೇನೆ, ಮುಂದೆಯು ನಿಲ್ಲುತ್ತೇನೆ. ರಾಜಾವೆಂಕಟಪ್ಪರನ್ನ ಲೋಕಸಭೆ ಚುನಾವಣೆಗೆ ನಿಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ ದುರ್ದೈವ, ರಾಜಾವೆಂಕಟಪ್ಪ ನಾಯಕ್‌ ಅವರ ಆಕಸ್ಮಿಕ ಸಾವಾಗಿದೆ. ವೆಂಕಟಪ್ಪನಾಯಕ್‌ ಅವರನ್ನ ಕಳೆದುಕೊಂಡ ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ದೇವರು ನೀಡಲಿ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ನಾನು ಸುರಪುರಕ್ಕೆ ತೆರಳಲಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?