AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬದಲಾವಣೆ ವಿಚಾರ‌ವಾಗಿ ಮತ್ತೋರ್ವ ಸ್ವಾಮೀಜಿ ಎಂಟ್ರಿ; ಬದಲಾವಣೆ ಸಮಯ ಬಂದ್ರೆ ಲಿಂಗಾಯತ ನಾಯಕರಿಗೆ ನೀಡ್ಬೇಕು!

ಕಾಂಗ್ರೆಸ್​ ಪಾಳಯದಲ್ಲಿ ಈಗಾಗಲೇ ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ಶುರುವಾಗಿದ್ದು, ಅದರಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿದ್ದರಾಮಯ್ಯ ಬದಲಾವಣೆ ಕುರಿತು ಮಾತನಾಡಿದ್ದರು. ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಇದಕ್ಕೆ ಧ್ವನಿಗೂಡಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರ‌ವಾಗಿ ಮತ್ತೋರ್ವ ಸ್ವಾಮೀಜಿ ಎಂಟ್ರಿ; ಬದಲಾವಣೆ ಸಮಯ ಬಂದ್ರೆ ಲಿಂಗಾಯತ ನಾಯಕರಿಗೆ ನೀಡ್ಬೇಕು!
ರಂಭಾಪುರಿ ಪೀಠದ ಜಗದ್ಗುರು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 29, 2024 | 4:24 PM

Share

ಕಲಬುರಗಿ, ಜೂ.29: ಕಾಂಗ್ರೆಸ್​(Congress)ನಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ವಿಚಾರ ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು(Rambhaapuri Jagadguru Swamiji) ಈ ಕುರಿತು ಪ್ರತಿಕ್ರಿಯಿಸಿದ್ದು, ‘ಒಕ್ಕಲಿಗ ಸಮುದಾಯದ ಚಂದ್ರಶೇಖರಶ್ರೀ ಸಿಎಂ ಸಮ್ಮುಖದಲ್ಲೇ ಬದಲಾವಣೆ ಬಗ್ಗೆ ಮಾತನಾಡಿದ್ದು ವಿಪರ್ಯಾಸ ಎಂದಿದ್ದಾರೆ. ಇಂದು(ಶನಿವಾರ) ಕಲಬುರಗಿ(Kalaburagi) ನಗರದಲ್ಲಿ ಮಾತನಾಡಿದ ಅವರು, ಬದಲಾವಣೆ ಸಮಯ ಬಂದ್ರೆ ‘ಕೈ’ ಹೈಕಮಾಂಡ್ ಉದಾಸೀನತೆ ತೋರದೇ ವೀರಶೈವ ಲಿಂಗಾಯತ ನಾಯಕರಿಗೆ ನೀಡಬೇಕು ಎಂದಿದ್ದಾರೆ.

‘ಸಿಎಂ ಸ್ಥಾನ ನೀಡಲು ಅಗದಿದ್ದರೇ ಉಪಮುಖ್ಯಮಂತ್ರಿ ಆದರೂ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು, ಇಲ್ಲದಿದ್ದರೇ ಸರ್ಕಾರದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸಿದ್ದರಾಮಯ್ಯ ಅವರು ಯೋಗ್ಯರಿದ್ದರೆ ಸಿಎಂ ಸ್ಥಾನದಲ್ಲಿ ಅವರನ್ನೇ ಮುಂದುವರಿಸಿ ಎಂದು ಹೇಳಿದರು.

ಇದನ್ನೂ ಓದಿ:ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದ ಚಂದ್ರಶೇಖರಶ್ರೀ

ಇದೇ ಜೂ.27 ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ‘ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು, ‘ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್​​ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದಿದ್ದರು. ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಇದಕ್ಕೆ ಧ್ವನಿಗೂಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Sat, 29 June 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು