AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲೂ ಸಿಐಡಿ ತನಿಖೆ ವೇಳೆ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ಮಾಧ್ಯಮದವರ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: Rakesh Nayak Manchi|

Updated on: Nov 11, 2023 | 7:14 PM

Share

ಕಲಬುರಗಿ, ನ.11: ಕೆಇಎ (KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್ (R.D.Patil)​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಎರಡನೇ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರೂ ಈತನ ಧಿಮಾಕು, ದರ್ಪ ಕಡಿಮೆಯಾಗಿಲ್ಲ.

ಸ್ಥಳ ಮಹಜರು ನಡೆಸುವ ನಿಟ್ಟಿನಲ್ಲಿ ಇಂದು ಪೊಲೀಸರು ಆರ್​ಡಿ ಪಾಟೀಲ್​ನನ್ನು ಕೊರೆದೊಯ್ಯುತ್ತಿದ್ದರು. ಈ ವೇಳೆ ಮಾಧ್ಯಮದವರನ್ನು ಕಂಡು ಆಕ್ರೋಶಗೊಂಡ ಆರ್​ಡಿ ಪಾಟೀಲ್, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ನಾಲಿಗೆ ಹರಿಬಿಟ್ಟು ಧಿಮಾಕು ತೋರಿಸಿದ್ದಾನೆ.

ಇದನ್ನೂ ಓದಿ: KEA ಪರೀಕ್ಷೆಯಲ್ಲಿ ಅಕ್ರಮ ಕೇಸ್: ಆರ್​ಡಿ ಪಾಟೀಲ್ ಮತ್ತೊಂದು ಸ್ಫೋಟಕ ವಿಡಿಯೋ ಬಹಿರಂಗ

ಪೊಲೀಸರ ಕೈಗೆ ಲಾಕ್ ಆದರೂ ಆರ್​ಡಿ ಪಾಟೀಲ್ ಧಿಮಾಕು ಕಮ್ಮಿ ಆಗಿಲ್ಲ. ಈ ಹಿಂದೆ ನಡೆದ ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ತನಿಖೆ ನಡೆಯುತ್ತಿದ್ದಾಗಲೂ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ. ಕಂಬಿ ಎಣಿಸಿದ್ದರೂ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ದರ್ಪ, ಧಿಮಾಕು ಕಡಿಮೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More