AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್

12,000 ರೂ. ಲಂಚ ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ಅದೇ ರೀತಿಯಾಗಿ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಭೂಮಾಪಕ, ಉಡುಪಿಯಲ್ಲಿ ಲಂಚ ಪಡೆಯುವಾಗ ನಾಡಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್
ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 31, 2023 | 8:23 PM

Share

ಕಲಬುರಗಿ, ಆಗಸ್ಟ್​ 31: 12,000 ರೂ. ಲಂಚ (bribe) ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಆರ್​ಐ ರಾಜಶೇಖರ್​ ಬಲೆಗೆ ಬಿದ್ದಿರುವ ಅಧಿಕಾರಿಗಳು. ಜಮೀನಿಗೆ ಕೃಷಿಯೇತರ ಪ್ರಮಾಣಪತ್ರ ನೀಡಲು ಮೆಹಬೂಬ್ ಪಟೇಲ್​​ ಎನ್ನುವವರಿಂದ 12,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಹೆಬೂಬ್ ಪಟೇಲ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ಲಂಚ ಪಡೆಯುವಾಗ ಬಂಧಿಸಿದ್ದಾರೆ.

ಕಂದಾಯ ಇಲಾಖೆಯ ಸರ್ವೇಯರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಭೂಮಾಪಕ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ರಮೇಶಪ್ಪ ಬಲೆಗೆ ಬಿದ್ದ ಭೂಮಾಪಕ. ಜಮೀನಿನ ಸರ್ವೆಗಾಗಿ ರೈತ ಹೊನ್ನಪ್ಪ ಎನ್ನುವವರಿಂದ ₹1 ಲಕ್ಷ ರೂ. ಲಂಚ ಕೇಳಿದ್ದು, ಮುಂಗಡವಾಗಿ 3,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಇದನ್ನೂ ಓದಿ: Davanagere News: ನಗರ ಸಭೆ ಸದಸ್ಯೆಯ ಬಳಿಕ ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊಬ್ಬ ಅಧಿಕಾರಿ

ಉಡುಪಿಯಲ್ಲಿ ಸಹ ಲಂಚ ಪಡೆಯುವಾಗ ನಾಡಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರುನಲ್ಲಿ ನಡೆದಿದೆ. ನಿಜಾಮುದ್ದಿನ್ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ. ಸಂತತಿ ನಕ್ಷೆ ಸಿದ್ದಪಡಿಸಲು ನಿನ್ನೆ ನಾಲ್ಕು ಸಾವಿರ ರೂ. ಪಡೆದಿದ್ದು, ಇಂದು ಬಾಕಿ 1 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Lokayukta Raid: ಮುಂದುವರಿದ ಭ್ರಷ್ಟರ ಬೇಟೆ, ಲಂಚಕ್ಕೆ ಕೈಯೊಡ್ಡುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸದ್ಯ ನಾಡ ಕಚೇರಿ ಸಿಬ್ಬಂದಿ ನಿಜಾಮುದ್ದಿನ್ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದ‌ ಎಂದು ಮಾಹಿತಿ ಸಿಕ್ಕಿದೆ ಲೋಕಯುಕ್ತ ಡಿವೈಎಸ್ಪಿ ಕೆಸಿ ಪ್ರಕಾಶ್, ಇನ್ಸ್ಪೆಕ್ಟರ್ ರಫೀಕ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್