AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್

12,000 ರೂ. ಲಂಚ ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ಅದೇ ರೀತಿಯಾಗಿ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಭೂಮಾಪಕ, ಉಡುಪಿಯಲ್ಲಿ ಲಂಚ ಪಡೆಯುವಾಗ ನಾಡಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್
ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 31, 2023 | 8:23 PM

Share

ಕಲಬುರಗಿ, ಆಗಸ್ಟ್​ 31: 12,000 ರೂ. ಲಂಚ (bribe) ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಆರ್​ಐ ರಾಜಶೇಖರ್​ ಬಲೆಗೆ ಬಿದ್ದಿರುವ ಅಧಿಕಾರಿಗಳು. ಜಮೀನಿಗೆ ಕೃಷಿಯೇತರ ಪ್ರಮಾಣಪತ್ರ ನೀಡಲು ಮೆಹಬೂಬ್ ಪಟೇಲ್​​ ಎನ್ನುವವರಿಂದ 12,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಹೆಬೂಬ್ ಪಟೇಲ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ಲಂಚ ಪಡೆಯುವಾಗ ಬಂಧಿಸಿದ್ದಾರೆ.

ಕಂದಾಯ ಇಲಾಖೆಯ ಸರ್ವೇಯರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಭೂಮಾಪಕ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ರಮೇಶಪ್ಪ ಬಲೆಗೆ ಬಿದ್ದ ಭೂಮಾಪಕ. ಜಮೀನಿನ ಸರ್ವೆಗಾಗಿ ರೈತ ಹೊನ್ನಪ್ಪ ಎನ್ನುವವರಿಂದ ₹1 ಲಕ್ಷ ರೂ. ಲಂಚ ಕೇಳಿದ್ದು, ಮುಂಗಡವಾಗಿ 3,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಇದನ್ನೂ ಓದಿ: Davanagere News: ನಗರ ಸಭೆ ಸದಸ್ಯೆಯ ಬಳಿಕ ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊಬ್ಬ ಅಧಿಕಾರಿ

ಉಡುಪಿಯಲ್ಲಿ ಸಹ ಲಂಚ ಪಡೆಯುವಾಗ ನಾಡಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರುನಲ್ಲಿ ನಡೆದಿದೆ. ನಿಜಾಮುದ್ದಿನ್ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ. ಸಂತತಿ ನಕ್ಷೆ ಸಿದ್ದಪಡಿಸಲು ನಿನ್ನೆ ನಾಲ್ಕು ಸಾವಿರ ರೂ. ಪಡೆದಿದ್ದು, ಇಂದು ಬಾಕಿ 1 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Lokayukta Raid: ಮುಂದುವರಿದ ಭ್ರಷ್ಟರ ಬೇಟೆ, ಲಂಚಕ್ಕೆ ಕೈಯೊಡ್ಡುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸದ್ಯ ನಾಡ ಕಚೇರಿ ಸಿಬ್ಬಂದಿ ನಿಜಾಮುದ್ದಿನ್ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದ‌ ಎಂದು ಮಾಹಿತಿ ಸಿಕ್ಕಿದೆ ಲೋಕಯುಕ್ತ ಡಿವೈಎಸ್ಪಿ ಕೆಸಿ ಪ್ರಕಾಶ್, ಇನ್ಸ್ಪೆಕ್ಟರ್ ರಫೀಕ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!