ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ

ಕರ್ನಾಟಕದ ನಾನಾ ಭಾಗಗಳಲ್ಲಿ ಸಣ್ಣ ಪುಟ್ಟ ಕಳ್ಳತನ ಪ್ರಕರಣಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ಇದರ ಮಧ್ಯ ಒಂದಲ್ಲ ಒಂದು ದೊಡ್ಡ ಮಟ್ಟದ ದರೋಡೆಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದರೋಡೆಕೋರರ ಗ್ಯಾಂಗ್​​ ಬ್ಯಾಂಕ್ ಹಾಗೂ ಎಂಟಿಎಂಗಳೇ ಟಾರ್ಗೆಟ್ ಆಗಿವೆ. ಇತ್ತೀಚೆಗೆ ಬೀದರ್​ನಲ್ಲಿ ಇಬ್ಬರಿಗೂ ಶೂಟ್​ ಮಾಡಿ ಎಟಿಎಂ ಹಣ ದೋಚಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಬ್ಯಾಂಕ್​ ದರೋಡೆಯಾಗಿತ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಎಟಿಎಂ ದರೋಡೆಯಾಗಿದೆ.

ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ
Kalaburagi Atm Robbery
Edited By:

Updated on: Apr 09, 2025 | 3:12 PM

ಕಲಬುರಗಿ, (ಏಪ್ರಿಲ್ 09): ಕರ್ನಾಟಕದಲ್ಲಿ (Karnataka) ದರೋಡೆ ಪ್ರಕರಣಗಳು (robbery Cases) ಹೆಚ್ಚಾಗುತ್ತಲೇ ಇವೆ. ಮಂಗಳೂರು, ಬೀದರ್ ಬ್ಯಾಂಕಿನ ಹಣ ದರೋಡೆ ಬೆನ್ನಲ್ಲೇ ಇದೀಗ ಖದೀಮರು ಕಲಬುರಗಿಯಲ್ಲಿ ಎಸ್‌ಬಿಐ ಎಂಟಿಎಂಗೆ ಕನ್ನ ಹಾಕಿದ್ದಾರೆ. ಹೌದು..​ ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ (ATM) 18 ಲಕ್ಷ ರೂ. ಕದ್ದೊಯ್ದಿರುವ ಘಟನೆ ಕಲಬುಗರಿಯ (Kalaburagi) ಪೂಜಾರಿ ಚೌಕ್‌ನಲ್ಲಿ(Ramanagara) ನಡೆದಿದೆ. ಗುರುತು ಸಿಗಬಾರದು ಎಂದು ಕಿರಾತಕರು ಮೊದಲಿಗೆ ಸಿಸಿಕ್ಯಾಮರಾಗೆ ಬ್ಲ್ಯಾಕ್‌ ಸ್ಪ್ರೇ ಮಾಡಿ ಬಳಿಕ ಎಟಿಎಂ ಲಾಕರ್ ಕಟ್ ಮಾಡಿ ಬರೋಬ್ಬರಿ 18 ಲಕ್ಷ ರೂ. ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಕಲಬುರಗಿಯಲ್ಲಿ ಏಪ್ರಿಲ್ 9ರ ನಸುಕಿನ ಜಾವ 3 ಗಂಟೆ ಸುಮಾರಿಗೆ ಹರಿಯಾಣದ ಮೂಲದ ಗ್ಯಾಂಗ್ ಎಟಿಎಂಗೆ ನುಗ್ಗಿದೆ. ಮೊದಲಿಗೆ ಸಿಸಿಕ್ಯಾಮರಾಗೆ ಸ್ಪ್ರೇ ಮಾಡಿದ್ದಾರೆ. ಬಳಿಕ ಲಾಕರ್‌ ಅನ್ನ ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಬರೋಬ್ಬರಿ 18 ಲಕ್ಷ ರೂಪಾಯಿ ದೋಚಿದ್ದಾರೆ.

ಇದನ್ನೂ ಓದಿ: ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ

ಮೊದಲಿಗೆ ತಡರಾತ್ರಿ 2.18ಕ್ಕೆ ಕಾರೊಂದು ಪಾಸ್ ಆಗಿದೆ. ಅದಾಗಿ 48 ನಿಮಿಷದಲ್ಲೇ ಎಂಟಿಎಂ ಕಳ್ಳತನವಾಗಿದೆ. ಹೀಗಾಗಿ ಇದೇ ಕಾರಿನಲ್ಲಿ ಖದೀಮರು ಬಂದಿರುವ ಶಂಕೆ ವ್ಯಕ್ತವಾಗಿದೆ. ಎಟಿಎಂನಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದ್ದನ್ನ ಗಮನಿಸಿ ಎಟಿಎಂಗೆ ನುಗ್ಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಕಾರಿನ ನಂಬರ್ ಟ್ರೇಸ್ ಮಾಡುತ್ತಿದ್ದಾರೆ.

ಇದನ್ನೂ ಓದಿ
ಮಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ: ಸ್ಫೋಟಕ ಮಾಹಿತಿ ಬಹಿರಂಗ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ATM ದರೋಡೆಕೋರರ ಸುಳಿವು ಕೊಟ್ಟವರಿಗೆ ಭಾರೀ ಬಹುಮಾನ ಘೋಷಣೆ
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರ ಸಾವು

ಬೀದರ್‌ನಲ್ಲಿ ಹಾಡಹಗಲೇ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲೂ ಎಂಟಿಎಂ ಕಳ್ಳತನವಾಗಿದೆ. ಇದಲ್ಲದೇ ಮಂಗಳೂರಿನ ಬ್ಯಾಂಕ್​ ಅನ್ನು ಸಹ ದರೋಡೆ ಮಾಡಲಾಗಿತ್ತು. ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆದ್ರೆ, ಬೀದರ್​​ ಎಂಟಿಎಂ ಹಣ ದರೋಡೆಕೋರರು ಇದುವರೆಗೂ ಪತ್ತೆಯಾಗಿಲ್ಲ. ಇದರ ಬೆನ್ನಲ್ಲೇ ಕಲಬುರಗಿಯಲ್ಲೂ ಸಹ ಎಟಿಎಂ ಕಳ್ಳತನವಾಗಿದೆ. ಎಟಿಎಂ ಹಾಗೂ ಬ್ಯಾಂಕ್​​ಗಳನ್ನೇ ಟಾರ್ಗೆಟ್​​ ಮಾಡಿ ಈ ಕೃತ್ಯ ಎಸಗುತ್ತಿರುವುದು ನೋಡಿದ್ರೆ ಒಂದೇ ಗ್ಯಾಂಗ್​​ ಇರಬಹುದು ಎನ್ನಿಸುತ್ತಿದೆ. ಅದು ಉತ್ತರ ಭಾರತ ಗ್ಯಾಂಗ್​ ಮೇಲೆಯೇ ಅನುಮಾನಗಳು ವ್ಯಕ್ತವಾಗುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Wed, 9 April 25

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us