AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

ಆರ್​ಎಸ್​ಎಸ್ ನಿಷೇಧಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದಾರೆ. ಆದರೆ, ಅವರ ತವರು ಜಿಲ್ಲೆ ಕಲಬುರಗಿಯಲ್ಲೇ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಒಡೆತನದ ಶಾಲೆಯಲ್ಲೇ ಆರ್​ಎಸ್​ಎಸ್ ಬೈಠಕ್ ಹಾಗೂ ಪಥಸಂಚಲನ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸದ್ಯ, ಪಾಟೀಲ್ ಅವರು ಶಾಲೆಯಲ್ಲಿ ಅನುಮತಿ ಕೊಟ್ಟ ಬಗ್ಗೆ ಸಮರ್ಥಿಸಿಕೊಳ್ಳುವ ಮಾತುಗಳನ್ನಾಡಿದ್ದರೂ, ಆರ್​​ಎಸ್​​ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!
ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 13, 2025 | 11:36 AM

Share

ಕಲಬುರಗಿ, ಅಕ್ಟೋಬರ್ 13: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕರ್ನಾಟಕದಲ್ಲಿ ಆರ್​ಎಸ್​ಎಸ್ ಅನ್ನು (RSS) ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ, ಅವರದೇ ತವರು ಜಿಲ್ಲೆ ಕಲಬುರಗಿಯಲ್ಲಿ, ಅವರದೇ ಪಕ್ಷದ ಶಾಸಕ ಎಂವೈ ಪಾಟೀಲ್ (MY Patil) ಒಡೆತನದ ಶಾಲೆಯಲ್ಲಿ ಭಾನುವಾರ ಸಂಜೆ ಆರ್​ಎಸ್​ಎಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲದೆ, ಶಾಲೆಯ ಆವರಣದಲ್ಲಿ ಆರ್​ಎಸ್​ಎಸ್ ಪಥಸಂಚಲನ ಕೂಡ ನಡೆದಿದೆ. ಅಫಜಲಪುರ ಕಾಂಗ್ರೆಸ್ (Congress) ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ನಡೆದಿದೆ.

ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​​ಎಸ್​​ಎಸ್ ಪಥಸಂಚಲನ ನಡೆಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಾಲೆ ಸಾರ್ವಜನಿಕರ ಸ್ವತ್ತು. ಇಲ್ಲಿಯವರೆಗೆ ಎಲ್ಲಾ ಪಕ್ಷದವರಿಗೆ ಕಾರ್ಯಕ್ರಮ ಮಾಡಿಕೊಡಲು ಜಾಗ ಕೊಟ್ಟಿದ್ದೇವೆ. ನಮ್ಮದು ದ್ರಾವಿಡ, ಬುಡಕಟ್ಟು ಮನಸ್ಥಿತಿ. ಆದರೆ, ಆರ್​​ಎಸ್​ಎಸ್ ಅವರನ್ನು ಆರ್ಯ ಸಮಾಜ ಪರಿಕಲ್ಪನೆ ಇದೆ. ಆರ್​​ಎಸ್​ಎಸ್ ಮೂಲ ಉದ್ದೇಶವೇ ಬೇರೆ. ಅವರು ನಡೆದುಕೊಳ್ಳುತ್ತಿರುವ ರೀತಿಯೇ ಬೇರೆ ಎಂದರು.

ಆರ್​​ಎಸ್​ಎಸ್ ನಿಷೇಧ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಆರ್​​ಎಸ್​ಎಸ್ ಚಟುವಟಿಕೆ ನಿಷೇಧ ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಪ್ರತಿಕ್ರಿಯಿಸಿದ್ದು, ಅದಕ್ಕೆ ಯಾವುದೇ ಆಕ್ಷೇಪವಿಲ್ಲ. ಆರ್​​ಎಸ್​ಎಸ್ ಸಂಘಟನೆ ಉದ್ದೇಶ ಸರಿಯಲ್ಲ. ಅವರಲ್ಲೂ ಸ್ವಾತಂತ್ರ್ಯಕ್ಕೆ ಬಲಿಯಾದವರು ಒಬ್ಬರೋ ಇಬ್ಬರೋ ಇರಬಹುದು. ಆರ್​​ಎಸ್​​ಎಸ್​​ನವರು ಲಾಠಿ ಬಿಟ್ಟು ತಿರಂಗಾ ಬಾವುಟ ಹಿಡಿಯಲಿ. ಅವರು ತಿರಂಗಾ ಬಾವುಟ ಹಿಡಿದ್ರೆ ನಾವು ಸ್ವಾಗತ ಮಾಡುತ್ತೇವೆ. ಅದು ಬಿಟ್ಟು ಲಾಠಿ ಹಿಡಿದು ಪಥಸಂಚಲನ ಮಾಡಿದರೆ ಖಂಡಿಸುತ್ತೇವೆ ಎಂದಿದ್ದಾರೆ.

ಶಾಲೆ ಆವರಣದಲ್ಲಿ ಆರ್​​ಎಸ್​ಎಸ್ ಪಥಸಂಚಲನ: ವಿಡಿಯೋ

ಆರ್​​ಎಸ್​ಎಸ್ ಯಾಕೆ ಕೇಂದ್ರ ಕಚೇರಿ ಮೇಲೆ ತಿರಂಗಾ ಬಾವುಟ ಹಾರಿಸಲ್ಲ? ಅದು ದೇಶ ಕಟ್ಟುವ ಸಂಘಟನೆ ಅಲ್ಲ, ಬದಲಾಗಿ ದೇಶ ಒಡೆಯುವ ಸಂಘಟನೆ ಎಂದು ಎಂವೈ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: RSS ಚಟುವಟಿಕೆ ನಿಷೇಧಕ್ಕೆ ಮನವಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಬರೆದ ಪತ್ರದಲ್ಲೇನಿದೆ?

ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಘದ ಪಥಸಂಚಲನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಂಘಟದ ಚಟುವಟಿಕೆಗಳ ನಿಷೇಧಕ್ಕೆ ಮನವಿ ಮಾಡಿದ್ದಾರೆ. ಆದರೆ, ಅದೇ ಸಮಯದಲ್ಲಿ ಅವರದೇ ಪಕ್ಷದ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರ್​​ಎಸ್​ಎಸ್ ಕಾರ್ಯಕ್ರಮ ನಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು