AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ನೇಮಕಾತಿ ಅಕ್ರಮ; ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್​ಗೆ ಬಿಗ್ ರಿಲೀಫ್

ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್​​ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್​ನ ಕಲಬುರಗಿ ಪೀಠದ ಮಂಗಳವಾರ ಆದೇಶ ನೀಡಿದೆ.

ಪಿಎಸ್ಐ ನೇಮಕಾತಿ ಅಕ್ರಮ; ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್​ಗೆ ಬಿಗ್ ರಿಲೀಫ್
ರುದ್ರಗೌಡ ಪಾಟೀಲ್​
ಗಣಪತಿ ಶರ್ಮಾ
|

Updated on: Apr 18, 2023 | 6:54 PM

Share

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್​​  (Rudragowda Patil)​ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್​ನ ಕಲಬುರಗಿ ಪೀಠದ ಮಂಗಳವಾರ ಆದೇಶ ನೀಡಿದೆ. ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರಗಿ ಮತ್ತು ರಾಜ್ಯದ ವಿವಿಧಡೆ ಪಾಟೀಲ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಈ ಮಧ್ಯೆ, ಕಲಬುರಗಿ ನಗರದ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪಾಟೀಲ್​ಗೆ ಜಾಮೀನು ಮಂಜೂರು ಮಾಡಲಾಗಿದೆ.

ಸಿಐಡಿ ಅಧಿಕಾರಿಗಳಿಗೆ ತಳ್ಳಿ ಓಡಿಹೋಗಿದ್ದ ಆರೋಪದ ಮೇಲೆ ರುದ್ರಗೌಡ ಪಾಟೀಲ್ ಅನ್ನು ಬಂಧಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ರುದ್ರಗೌಡ ಪಾಟೀಲ್ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿದ್ದರು. ಸೋಮವಾರವಷ್ಟೇ ಅಫಜಲಪುರ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಲು ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆ ಪ್ರಚಾರದ ಸಮಯದಲ್ಲಿಯೇ ಜಾಮೀನು ದೊರೆತಿರುವುದು ಮತ್ತು ಪ್ರಕರಣಗಳ ವಿಚಾರಣೆಗೆ ತಡೆ ದೊರೆತಿರುವುದರಿಂದ ರುದ್ರಗೌಡ ಪಾಟೀಲ್ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಜೈಲಿನಿಂದಲೇ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ

ನ್ಯಾಯಾಲಯದ ಅನುಮತಿ ಪಡೆದು ಸೋಮವಾರ ಜೈಲಿನಿಂದಲೇ ಪೊಲೀಸ್ ಭದ್ರತೆಯಲ್ಲಿ ತೆರಳಿ ಅಫಜಲಪುರ ತಹಶಿಲ್ದಾರ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಜನರು ಹಾಜರಾಗಿದ್ದರು.

ಇದನ್ನೂ ಓದಿ: ಚುನಾವಣೆ ಅಖಾಡಕ್ಕಿಳಿದ PSI ಅಕ್ರಮ ಪ್ರಮುಖ ಆರೋಪಿ: ಪೊಲೀಸ್​ ಭದ್ರತೆಯಲ್ಲಿಯೇ ಆಗಮಿಸಿ ನಾಮಪತ್ರ ಸಲ್ಲಿಸಿದ ರುದ್ರಗೌಡ ಪಾಟೀಲ್

ರುದ್ರಗೌಡ ಪಾಟೀಲ್​ ಗ್ರಾಮ ಪಂಚಾಯತ್ ಸದಸ್ಯ, ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳುವ ಮೂಲಕ ಆಗಾಗ ಸುದ್ದಿಯಲ್ಲಿದ್ದರು. ಅಲ್ಲದೆ ಕ್ಷೇತ್ರದ ತುಂಬೆಲ್ಲಾ ಓಡಾಡಿಕೊಂಡು ತಮ್ಮ ಸಮುದಾಯ ಸೇರಿದಂತೆ ಕ್ಷೇತ್ರದಲ್ಲಿ ಯುವ ಪಡೆ ಕಟ್ಟಿಕೊಂಡು ಚುನಾವಣೆಗೆ ಅಖಾಡ ಸಿದ್ದಮಾಡಿಕೊಂಡಿದ್ದರು. ಈ ಸಮಯದಲ್ಲಿಯೇ ಪಿಎಸ್ಐ ಕೇಸ್ ಉರುಳು ರುದ್ರಗೌಡ್ ಪಾಟೀಲ್​​ಗೆ ಸುತ್ತಿಕೊಂಡಿತ್ತು. ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಹೆಸರು ಕೇಳಿಬಂದಿದ್ದದರಿಂದ, ಸಿಐಡಿ ಅಧಿಕಾರಿಗಳು ರುದ್ರಗೌಡ್​ರನ್ನು ಬಂಧಿಸಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ