AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಜಿಲ್ಲೆಯ ಹಲವೆಡೆ ಭೂಕಂಪ ವಿಚಾರ; ಪರಿಶೀಲನೆ ನಡೆಸಲು ಭೂವಿಜ್ಞಾನಿಗಳ ತಂಡ ಭೇಟಿ

Kalaburagi Earthquake: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಕಂಪ ಭಯ ಹಿನ್ನೆಲೆಯಲ್ಲಿ ಜನರು ಮನೆ ತೊರದು ಬೇರಡೆ ಹೋಗುತ್ತಿದ್ದಾರೆ. ಸಂಬಂಧಿಕರ ಬೇರೆ ಬೇರೆ ಗ್ರಾಮಗಳಿಗೆ ಜನ ತೆರಳಿದ್ದಾರೆ.

ಕಲಬುರಗಿ: ಜಿಲ್ಲೆಯ ಹಲವೆಡೆ ಭೂಕಂಪ ವಿಚಾರ; ಪರಿಶೀಲನೆ ನಡೆಸಲು ಭೂವಿಜ್ಞಾನಿಗಳ ತಂಡ ಭೇಟಿ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Oct 13, 2021 | 5:50 PM

Share

ಕಲಬುರಗಿ: ಜಿಲ್ಲೆಯ ಹಲವೆಡೆ ಪದೇಪದೆ ಭೂಕಂಪ ವಿಚಾರಕ್ಕೆ ಸಂಬಂಧಿಸಿ ಪರಿಶೀಲನೆ ನಡೆಸಲು ಭೂಕಂಪ ಪೀಡಿತ ಗ್ರಾಮಗಳಿಗೆ ಭೂವಿಜ್ಞಾನಿಗಳ ತಂಡ ಭೇಟಿ ನೀಡಿದ್ದಾರೆ. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದಿಂದ ಪರಿಶೀಲನೆ ಮಾಡಲಾಗಿದೆ. ಕಿರಿಯ ಭೂವಿಜ್ಞಾನಿ ರಮೇಶ್ ದಿಕ್ಬಾಲ್, ವೈಜ್ಞಾನಿಕ ಸಹಾಯಕ ಸಂತೋಷ್ ಸೇರಿ ಆರು ಜನರು ಭೇಟಿ ಮಾಡಿದ್ದಾರೆ. ಗಡಿಕೇಶ್ವರ, ಹಲಚೇರಾ, ಹೊಸಳ್ಳಿ ಸೇರಿ ಕೆಲ ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಭೂಕಂಪದ ಕೇಂದ್ರ ಬಿಂದುವಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾಳಗಿ, ಚಿಂಚೋಳಿ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಭೂಕಂಪನ ಆಗಿತ್ತು. ಕಳೆದ ಕೆಲವು ದಿನಗಳಲ್ಲಿ ಕೆಲವು ಬಾರಿ ಭೂಕಂಪನ ಉಂಟಾಗಿತ್ತು. ಇದರಿಂದ ಜನರು ಬಹಳಷ್ಟು ಆತಂಕಕ್ಕೆ ಒಳಗಾಗಿದ್ದರು. ಗಡಿಕೇಶ್ವರ ಗ್ರಾಮದಲ್ಲಿ ನಿರಂತರವಾಗಿ ಭೂಕಂಪನ ಹಿನ್ನೆಲೆ ಸ್ಥಳೀಯ ಜನರು ಗ್ರಾಮ ತೊರೆದು ಹೋಗಲು ಶುರುಮಾಡಿದ್ದಾರೆ. ಇಂದು ಕೂಡಾ ಜನರು ಗ್ರಾಮ ತೊರೆದು ಹೋಗುತ್ತಿರುವ ದೃಶ್ಯ ಕಂಡುಬಂದಿತ್ತು. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಕಂಪ ಭಯ ಹಿನ್ನೆಲೆಯಲ್ಲಿ ಜನರು ಮನೆ ತೊರದು ಬೇರಡೆ ಹೋಗುತ್ತಿದ್ದಾರೆ. ಸಂಬಂಧಿಕರ ಬೇರೆ ಬೇರೆ ಗ್ರಾಮಗಳಿಗೆ ಜನ ತೆರಳಿದ್ದಾರೆ.

ಕಳೆದ ಒಂದು ವಾರದಿಂದ ಕಲಬುರಗಿ ಜಿಲ್ಲೆಯ ಜನರು ಭಯದಲ್ಲಿಯೇ ಬದಕುತ್ತಿದ್ದಾರೆ. ಯಾವಾಗ ಏನಾಗುತ್ತೋ ಎನ್ನುವ ಆತಂಕ ಈ ಗ್ರಾಮಗಳ ಜನರನ್ನು ಕಾಡುತ್ತಿದೆ. ಕೆಲವರು ಮನೆಯೊಳಗೆ ಇರಲು ಭಯ ಪಡುತ್ತಿದ್ದರೆ, ಇನ್ನು ಕೆಲವರು ಗ್ರಾಮಗಳನ್ನು ಬಿಟ್ಟು ಸಂಬಂಧಿಕರ ಮನೆಗಳಿಗೆ ಹೋಗುತ್ತಿದ್ದಾರೆ. ಇದಕ್ಕೆ ಕಾರಣ ಮೇಲಿಂದ ಮೇಲೆ ಸಂಭವಿಸುತ್ತಿರುವ ಲಘು ಭೂಕಂಪನ ಮತ್ತು ಭೂಮಿಯಿಂದ ಬರುತ್ತಿರುವ ಭಾರಿ ಸದ್ದು.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಇನ್ನು ಕಳೆದ ರಾತ್ರಿ ಜಿಲ್ಲೆಯ ಕಾಳಗಿ, ಚಿಂಚೋಳಿ, ಸೇಡಂ, ಶಹಬಾದ್ ತಾಲೂಕಿನಲ್ಲಿ ನೂರಕ್ಕೂ ಹೆಚ್ಚು ಹಳ್ಳಿಯಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಗಡಿಕೇಶ್ವರ ಬಳಿ 4.1 ತೀರ್ವತೆಯ ಭೂಕಂಪನವಾಗಿರೋದು ದಾಖಲಾಗಿದೆ. ಇದೀಗ ಘಟನೆ ಸಂಬಂಧ ಪರಿಶೀಲನೆ ನಡೆಸಲು ಭೂವಿಜ್ಞಾನಿಗಳ ತಂಡ ಕಲಬುರಗಿಗೆ ಭೇಟಿ ಕೊಟ್ಟಿದೆ.

ಇದನ್ನೂ ಓದಿ:Kalaburagi Earthquake: ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗಲೇ ಭೂಮಿಯಿಂದ ಕೇಳಿ ಬಂದ ಭಾರಿ ಸದ್ದು 

ಇದನ್ನೂ ಓದಿ: Kalaburagi Earthquake: ಕಲಬುರಗಿ: ಭೂಕಂಪನ ಹೆಚ್ಚಾದರೆ ಪುನರ್ವಸತಿ ವ್ಯವಸ್ಥೆಗೆ ಸಿದ್ಧತೆ: ಸಂಸದ ಡಾ.ಉಮೇಶ್ ಜಾಧವ್

Published On - 5:41 pm, Wed, 13 October 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!