AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಅಣತಿಯಂತೆ ಪಿಎಫ್​ಐ ಮೇಲೆ ಪೊಲೀಸರ ದಾಳಿ: ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಆಕ್ರೋಶ

ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಪ್ರಶ್ನಿಸಿದರು.

ಕೇಂದ್ರದ ಅಣತಿಯಂತೆ ಪಿಎಫ್​ಐ ಮೇಲೆ ಪೊಲೀಸರ ದಾಳಿ: ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಆಕ್ರೋಶ
ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್
TV9 Web
| Edited By: |

Updated on: Sep 27, 2022 | 11:40 AM

Share

ಕಲಬುರ್ಗಿ: ಕರ್ನಾಟಕದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿರುವುದನ್ನು ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಖಂಡಿಸಿದರು. ಟಿವಿ9ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ಪೊಲೀಸರು ದಾಳಿ ಮಾಡಿದ್ದಾರೆ. ಪ್ರತಿಭಟನೆ ಮಾಡಬಹುದು ಎನ್ನುವ ಕಾರಣಕ್ಕೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ನಡೆಸಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಪ್ರಶ್ನಿಸಿದರು.

ಭಾರತದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಆರ್​​ಎಸ್​ಎಸ್. ಬಿಜೆಪಿಯಲ್ಲೇ ಹೆಚ್ಚು ಉಗ್ರರು ಇದ್ದಾರೆ. ಪ್ರತಿಭಟನೆ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು. ಆ ಹಕ್ಕನ್ನು ಇವರು ಹತ್ತಿಕ್ಕುತ್ತಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ಮಾಡಿ, ಕೇಸ್ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಬಿಜೆಪಿ ಮತ್ತು ಆರ್​ಎಸ್​ಎಸ್​ನವರು ತಾವು ಕಳ್ಳರು, ಪರರನ್ನು ನಂಬರು ಎಂಬಂತೆ ವರ್ತಿಸುತ್ತಿದ್ದಾರೆ. ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದಾಗ ಕಾರದ ಪುಡಿ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮನೆಗಳಲ್ಲಿ ಕಾರದ ಪುಡಿ ಇಡುವ ಬದಲು, ಸೆಗಣಿ ಇಡ್ತಾರಾ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮತ್ತು ಸಂಬಂಧಿತ ಸಂಘಟನೆಗಳು ದೇಶದ ಭಾವೈಕ್ಯತೆಗೆ ಅಪಾಯ ತಂದೊಡ್ಡುವ ಚಟುವಟಿಕೆ ನಡೆಸುತ್ತಿವೆ. ಆದರೆ ಎಂದಿಗೂ ಈ ಸಂಘಟನೆಗಳ ಮೇಲೆ ದಾಳಿ ನಡೆದಿಲ್ಲ. ಆರ್‌ಎಸ್‌ಎಸ್ ಮತ್ತು ಅದರ ಪರಿವಾರದ ಸಂಘಟನೆಗಳಾದ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆಗಳ ನಾಯಕರ ಬಳಿ ಆಯುಧಗಳಿವೆ. ಆದರೂ ಅವರ ಮೇಲೆ ಎಂದಿಗೂ ಎನ್‌ಐಎ ದಾಳಿ ಮಾಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದರು.

ಎಸ್​ಡಿಪಿಐ ಮೇಲೆ ದಾಖಲಾಗಿದ್ದ ಶೇ 98ರಷ್ಟು ಪ್ರಕರಣಗಳನ್ನು ನ್ಯಾಯಾಲಯಗಳು ಖುಲಾಸೆಗೊಳಿಸಿವೆ. ಮಲೆಗಾಂವ್ ಸೇರಿದಂತೆ ಹಲವು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರ್​ಎಸ್​ಎಸ್​ ಹೆಸರು ಕೇಳಿಬಂದಿದೆ ಆದರೂ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳನ್ನು ಹಣಿಯುತ್ತಿದೆ ಎಂದು ದೂರಿದರು.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ