AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಅಣತಿಯಂತೆ ಪಿಎಫ್​ಐ ಮೇಲೆ ಪೊಲೀಸರ ದಾಳಿ: ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಆಕ್ರೋಶ

ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಪ್ರಶ್ನಿಸಿದರು.

ಕೇಂದ್ರದ ಅಣತಿಯಂತೆ ಪಿಎಫ್​ಐ ಮೇಲೆ ಪೊಲೀಸರ ದಾಳಿ: ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಆಕ್ರೋಶ
ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 27, 2022 | 11:40 AM

Share

ಕಲಬುರ್ಗಿ: ಕರ್ನಾಟಕದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿರುವುದನ್ನು ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಖಂಡಿಸಿದರು. ಟಿವಿ9ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ಪೊಲೀಸರು ದಾಳಿ ಮಾಡಿದ್ದಾರೆ. ಪ್ರತಿಭಟನೆ ಮಾಡಬಹುದು ಎನ್ನುವ ಕಾರಣಕ್ಕೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ನಡೆಸಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಪ್ರಶ್ನಿಸಿದರು.

ಭಾರತದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಆರ್​​ಎಸ್​ಎಸ್. ಬಿಜೆಪಿಯಲ್ಲೇ ಹೆಚ್ಚು ಉಗ್ರರು ಇದ್ದಾರೆ. ಪ್ರತಿಭಟನೆ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು. ಆ ಹಕ್ಕನ್ನು ಇವರು ಹತ್ತಿಕ್ಕುತ್ತಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ಮಾಡಿ, ಕೇಸ್ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಬಿಜೆಪಿ ಮತ್ತು ಆರ್​ಎಸ್​ಎಸ್​ನವರು ತಾವು ಕಳ್ಳರು, ಪರರನ್ನು ನಂಬರು ಎಂಬಂತೆ ವರ್ತಿಸುತ್ತಿದ್ದಾರೆ. ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದಾಗ ಕಾರದ ಪುಡಿ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮನೆಗಳಲ್ಲಿ ಕಾರದ ಪುಡಿ ಇಡುವ ಬದಲು, ಸೆಗಣಿ ಇಡ್ತಾರಾ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮತ್ತು ಸಂಬಂಧಿತ ಸಂಘಟನೆಗಳು ದೇಶದ ಭಾವೈಕ್ಯತೆಗೆ ಅಪಾಯ ತಂದೊಡ್ಡುವ ಚಟುವಟಿಕೆ ನಡೆಸುತ್ತಿವೆ. ಆದರೆ ಎಂದಿಗೂ ಈ ಸಂಘಟನೆಗಳ ಮೇಲೆ ದಾಳಿ ನಡೆದಿಲ್ಲ. ಆರ್‌ಎಸ್‌ಎಸ್ ಮತ್ತು ಅದರ ಪರಿವಾರದ ಸಂಘಟನೆಗಳಾದ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆಗಳ ನಾಯಕರ ಬಳಿ ಆಯುಧಗಳಿವೆ. ಆದರೂ ಅವರ ಮೇಲೆ ಎಂದಿಗೂ ಎನ್‌ಐಎ ದಾಳಿ ಮಾಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದರು.

ಎಸ್​ಡಿಪಿಐ ಮೇಲೆ ದಾಖಲಾಗಿದ್ದ ಶೇ 98ರಷ್ಟು ಪ್ರಕರಣಗಳನ್ನು ನ್ಯಾಯಾಲಯಗಳು ಖುಲಾಸೆಗೊಳಿಸಿವೆ. ಮಲೆಗಾಂವ್ ಸೇರಿದಂತೆ ಹಲವು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರ್​ಎಸ್​ಎಸ್​ ಹೆಸರು ಕೇಳಿಬಂದಿದೆ ಆದರೂ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳನ್ನು ಹಣಿಯುತ್ತಿದೆ ಎಂದು ದೂರಿದರು.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?