AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಅಣತಿಯಂತೆ ಪಿಎಫ್​ಐ ಮೇಲೆ ಪೊಲೀಸರ ದಾಳಿ: ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಆಕ್ರೋಶ

ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಪ್ರಶ್ನಿಸಿದರು.

ಕೇಂದ್ರದ ಅಣತಿಯಂತೆ ಪಿಎಫ್​ಐ ಮೇಲೆ ಪೊಲೀಸರ ದಾಳಿ: ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್ ಆಕ್ರೋಶ
ಎಸ್​ಡಿಪಿಐ ನಾಯಕ ಭಾಸ್ಕರ್ ಪ್ರಸಾದ್
TV9 Web
| Edited By: |

Updated on: Sep 27, 2022 | 11:40 AM

Share

ಕಲಬುರ್ಗಿ: ಕರ್ನಾಟಕದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿರುವುದನ್ನು ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಖಂಡಿಸಿದರು. ಟಿವಿ9ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ಪೊಲೀಸರು ದಾಳಿ ಮಾಡಿದ್ದಾರೆ. ಪ್ರತಿಭಟನೆ ಮಾಡಬಹುದು ಎನ್ನುವ ಕಾರಣಕ್ಕೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ನಡೆಸಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಪ್ರಶ್ನಿಸಿದರು.

ಭಾರತದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಆರ್​​ಎಸ್​ಎಸ್. ಬಿಜೆಪಿಯಲ್ಲೇ ಹೆಚ್ಚು ಉಗ್ರರು ಇದ್ದಾರೆ. ಪ್ರತಿಭಟನೆ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು. ಆ ಹಕ್ಕನ್ನು ಇವರು ಹತ್ತಿಕ್ಕುತ್ತಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ಮಾಡಿ, ಕೇಸ್ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಬಿಜೆಪಿ ಮತ್ತು ಆರ್​ಎಸ್​ಎಸ್​ನವರು ತಾವು ಕಳ್ಳರು, ಪರರನ್ನು ನಂಬರು ಎಂಬಂತೆ ವರ್ತಿಸುತ್ತಿದ್ದಾರೆ. ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದಾಗ ಕಾರದ ಪುಡಿ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮನೆಗಳಲ್ಲಿ ಕಾರದ ಪುಡಿ ಇಡುವ ಬದಲು, ಸೆಗಣಿ ಇಡ್ತಾರಾ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮತ್ತು ಸಂಬಂಧಿತ ಸಂಘಟನೆಗಳು ದೇಶದ ಭಾವೈಕ್ಯತೆಗೆ ಅಪಾಯ ತಂದೊಡ್ಡುವ ಚಟುವಟಿಕೆ ನಡೆಸುತ್ತಿವೆ. ಆದರೆ ಎಂದಿಗೂ ಈ ಸಂಘಟನೆಗಳ ಮೇಲೆ ದಾಳಿ ನಡೆದಿಲ್ಲ. ಆರ್‌ಎಸ್‌ಎಸ್ ಮತ್ತು ಅದರ ಪರಿವಾರದ ಸಂಘಟನೆಗಳಾದ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆಗಳ ನಾಯಕರ ಬಳಿ ಆಯುಧಗಳಿವೆ. ಆದರೂ ಅವರ ಮೇಲೆ ಎಂದಿಗೂ ಎನ್‌ಐಎ ದಾಳಿ ಮಾಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದರು.

ಎಸ್​ಡಿಪಿಐ ಮೇಲೆ ದಾಖಲಾಗಿದ್ದ ಶೇ 98ರಷ್ಟು ಪ್ರಕರಣಗಳನ್ನು ನ್ಯಾಯಾಲಯಗಳು ಖುಲಾಸೆಗೊಳಿಸಿವೆ. ಮಲೆಗಾಂವ್ ಸೇರಿದಂತೆ ಹಲವು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರ್​ಎಸ್​ಎಸ್​ ಹೆಸರು ಕೇಳಿಬಂದಿದೆ ಆದರೂ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳನ್ನು ಹಣಿಯುತ್ತಿದೆ ಎಂದು ದೂರಿದರು.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್