AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಿಗೂಢ ಸದ್ದು, ಭೂಮಿ ಕಂಪಿಸಿದ ಅನುಭವ; ಮನೆಯಿಂದ ಆಚೆಗೆ ಓಡಿದ ಜನ

ಗಡಿಕೇಶ್ವರ, ಹೊಸಳ್ಳಿ, ಕೆರಳ್ಳಿ ಸೇರಿದಂತೆ ಕೆಲ ಗ್ರಾಮದಲ್ಲಿ ಭೂ ಕಂಪನ ಅನುಭವ ಆಗಿದ್ದು, ಜನರು ಲಘು ಭೂಕಂಪನ ಆಗಿದೆ ಎಂದೇ ಭಾವಿಸಿದ್ದಾರೆ. ಆದರೆ, ಗಡಿಕೇಶ್ವರದಲ್ಲಿ ಭಾರೀ ಸದ್ದು ಕೇಳಿ ಬಂದಿದ್ದರೆ, ಸೇಡಂ ಪಟ್ಟಣದ ಕೆಲವೆಡೆ ಕೂಡಾ ಲಘು ಭೂಕಂಪನದ ಅನುಭವ ಆಗಿದೆ.

ಕಲಬುರಗಿಯಲ್ಲಿ ನಿಗೂಢ ಸದ್ದು, ಭೂಮಿ ಕಂಪಿಸಿದ ಅನುಭವ; ಮನೆಯಿಂದ ಆಚೆಗೆ ಓಡಿದ ಜನ
ಸದ್ದು ಕೇಳಿ ಬಂದ ಗ್ರಾಮದ ಒಂದು ದೃಶ್ಯ
Follow us
TV9 Web
| Updated By: Skanda

Updated on:Aug 20, 2021 | 10:11 PM

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಭೂಮಿ ಒಳಗಿಂದ ಭಾರೀ ಸದ್ದು ಕೇಳಿಬಂದಿದ್ದು ಜನರು ಆತಂಕಗೊಂಡಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ 2 ಬಾರಿ ಸದ್ದು ಕೇಳಿ ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ್ದು, ಭಾರೀ ಸದ್ದಿನಿಂದಾಗಿ ಜನರು ಬೆದರಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ, ಹೊಸಳ್ಳಿ, ಕೆರಳ್ಳಿ ಸೇರಿ ಕೆಲ ಗ್ರಾಮಗಳಲ್ಲಿ ಸದ್ದು ಕೇಳಿದೆ. ಗಡಿಕೇಶ್ವರದಲ್ಲಿ ಬೆಳಗ್ಗೆ ಕೂಡ ಭಾರೀ ಶಬ್ದ ಕೇಳಿ ಬಂದಿದ್ದು, ಕೆಲವೆಡೆ ಭೂಕಂಪನದ ಅನುಭವವೂ ಆಗಿದೆ.

ಗಡಿಕೇಶ್ವರ, ಹೊಸಳ್ಳಿ, ಕೆರಳ್ಳಿ ಸೇರಿದಂತೆ ಕೆಲ ಗ್ರಾಮದಲ್ಲಿ ಭೂ ಕಂಪನ ಅನುಭವ ಆಗಿದ್ದು, ಜನರು ಲಘು ಭೂಕಂಪನ ಆಗಿದೆ ಎಂದೇ ಭಾವಿಸಿದ್ದಾರೆ. ಆದರೆ, ಗಡಿಕೇಶ್ವರದಲ್ಲಿ ಭಾರೀ ಸದ್ದು ಕೇಳಿ ಬಂದಿದ್ದರೆ, ಸೇಡಂ ಪಟ್ಟಣದ ಕೆಲವೆಡೆ ಕೂಡಾ ಲಘು ಭೂಕಂಪನದ ಅನುಭವ ಆಗಿದೆ.

ಭೂಮಿಯಿಂದ ಸದ್ದು ಬರುತ್ತಿದ್ದಂತೆಯೇ ಜನರು ಹೆದರಿ ಹೊರಗೆ ಓಡಿ ಬಂದಿದ್ದು, ಏನೋ ಸ್ಫೋಟಿಸುತ್ತಿದೆ ಎಂದು ಕೆಲವರು ಭಾವಿಸಿದ್ದಾರೆ. ಭೂಕಂಪ, ಸ್ಫೋಟ ಹೀಗೆ ಯಾವ ಕಾರಣವೆಂದು ನಿಖರವಾಗಿ ತಿಳಿದು ಬರದ ಕಾರಣ ಎಲ್ಲರೂ ಆತಂಕಿತರಾಗಿದ್ದು, ಇತ್ತೀಚೆಗೆ ಅಲ್ಲಲ್ಲಿ ಇಂತಹ ಸದ್ದು ಮರುಕಳಿಸುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಗ್ರಾಮಸ್ಥರು ಹೇಳುವಂತೆ ಸಂಜೆ 7 ಗಂಟೆ ಸುಮಾರಿಗೆ ಎರಡೆರೆಡು ಭಾರೀ ಸ್ಫೋಟದ ರೀತಿಯ ಸದ್ದು ಕೇಳಿದೆ. ಕೆಲವರಿಗೆ ಭೂಮಿ ಕಂಪಿಸುತ್ತಿದೆ ಎಂದೆನಿಸಿದ ಕಾರಣ ಮನೆಗಳಿಂದ ತಕ್ಷಣವೇ ಹೊರಗೆ ಓಡೋಡಿ ಬಂದಿದ್ದಾರೆ. ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ, ಹೊಸಳ್ಳಿ, ಕೆರಳ್ಳಿ ಸೇರಿ ಕೆಲ ಗ್ರಾಮಗಳಲ್ಲಿ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ನೆರೆಯ ತೆಲಂಗಾಣದ ವಿಕಾರಬಾದ್‌ನಲ್ಲಿ ಲಘು ಭೂಕಂಪನ ಆಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.9ರಷ್ಟು ದಾಖಲಾಗಿದೆ. ತೆಲಂಗಾಣದ ವಿಕಾರಬಾದ್‌ನಲ್ಲಿ ಲಘು ಭೂಕಂಪನ ಹಿನ್ನೆಲೆ, ಕಲಬುರಗಿ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನದ ಅನುಭವ ಆಗಿದೆ ಎನ್ನಲಾಗಿದ್ದು, ಜಿಲ್ಲೆಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಫೋಟದ ಸದ್ದು, ಕಿಟಕಿ, ಬಾಗಿಲು ಅಲುಗಾಡಿದ ಅನುಭವ; ಕಾರಣ ನಿಗೂಢ! 

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

(Secret sound in Kalaburagi makes people scared some doubts it is earthquake)

Published On - 8:33 pm, Fri, 20 August 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ