AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ಪ್ರಕರಣ: ಶಾಲಾ ಮುಖ್ಯ ಶಿಕ್ಷಕಿ ಅಮಾನತು

ಕಲಬುರಗಿ ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಚಿಣಮಗೇರಾ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನ 1.30 ರ ಊಟದ ಸಮಯದಲ್ಲಿ ವಿದ್ಯಾರ್ಥಿನಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದ ಘಟನೆ ನಡೆದಿದ್ದು, ಇದೀಗ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಕಲಬುರಗಿ: ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ಪ್ರಕರಣ: ಶಾಲಾ ಮುಖ್ಯ ಶಿಕ್ಷಕಿ ಅಮಾನತು
ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 17, 2023 | 5:30 PM

Share

ಕಲಬುರಗಿ, ನ.17: ಬಿಸಿಯೂಟದ ಸಾಂಬರ್ ಪಾತ್ರೆಗೆ ಎರಡನೇ ತರಗತಿಯ ಮಹಾಂತಮ್ಮ ಎಂಬ ವಿದ್ಯಾರ್ಥಿನಿ (Student) ಬಿದ್ದು ಗಂಭೀರ ಗಾಯಗೊಂಡ ಘಟನೆ ನಿನ್ನೆ(ನ.16) ಕಲಬುರಗಿ ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಚಿಣಮಗೇರಾ ಶಾಲೆಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಿಣಮಗೇರಾ ಶಾಲೆಯ ಮುಖ್ಯಶಿಕ್ಷಕಿ ಹಾಗೂ ಸಹಶಿಕ್ಷಕನನ್ನು ಅಮಾನತು ಮಾಡಿ ಕಲಬುರಗಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದರ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಶಿಕ್ಷಕಿ ಲಾಲಬಿ ನಾದಾಫ್ ಹಾಗೂ ಸಹಶಿಕ್ಷಕ ರಾಜು ಚವ್ಹಾಣ ಅಮಾನತುಗೊಂಡವರು.

ಘಟನೆ ವಿವರ

ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಬಾಲಕಿ. ಅದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನ 1.30 ರ ಊಟದ ಸಮಯದಲ್ಲಿ ವಿದ್ಯಾರ್ಥಿನಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾಳೆ. ತೀವ್ರ ಗಾಯಗಳಾಗಿದ್ದ ಮಹಾಂತಮ್ಮನನ್ನು ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಶಾಲಾ ಶಿಕ್ಷಕರ ನಿರ್ಲಕ್ಷ ಆರೋಪ

ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ

ಮಕ್ಕಳು ಅಡುಗೆ ಕೋಣೆಯತ್ತ ಬರದಂತೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ಆದರೆ, ಇಲ್ಲಿ ಮಾತ್ರ ಇಬ್ಬರ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿ ಆಯಾ ತಪ್ಪಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದು, ತೀವ್ರ ತರದ ಸುಟ್ಟ ಗಾಯಗಳೊಂದಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾಳೆ. ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮದಿಂದಲೇ ಬಾಲಕಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದಾಳೆಂದು ಪೋಷಕರು ಆರೋಪ ಮಾಡಿದ್ದರು. ಅದರಂತೆ ಶಿಕ್ಷಕರ ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿಯೋರ್ವಳು ಸಾಂಬಾರ್ ಪಾತ್ರೆಗೆ ಬಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ಅಮಾನತುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.