AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sheikh Tajuddin Junaidi: ಕಲಬುರ್ಗಿಯ ಸೂಫಿ ಸಂತ ಶೇಖ್ ತಾಜುದ್ದೀನ್ ಜುನೈದಿ ನಿಧನ

ತಾಜ್ ಬಾಬಾ ಎಂದೇ ಖ್ಯಾತರಾಗಿದ್ದ ಇವರು, ಅಪಾರ ಅನುಯಾಯಿಗಳನ್ನು ಹೊಂದಿದ್ದರು.

Sheikh Tajuddin Junaidi: ಕಲಬುರ್ಗಿಯ ಸೂಫಿ ಸಂತ ಶೇಖ್ ತಾಜುದ್ದೀನ್ ಜುನೈದಿ ನಿಧನ
ಸೂಫಿ ಸಂತ ಶೇಖ್ ತಾಜುದ್ದೀನ್ ಜುನೈದಿ ನಿಧನ
TV9 Web
| Edited By: |

Updated on:Aug 12, 2022 | 10:40 AM

Share

ಕಲಬುರ್ಗಿ: ದೇಶದ ಮುಂಚೂಣಿ ಸೂಫಿ ಸಂತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹಝರತ್ ಶೇಖ್ ತಾಜುದ್ದೀನ್ ಜುನೈದಿ (Sheikh Tajuddin Junaidi) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ (ಆಗಸ್ಟ್ 12) ಮುಂಜಾನೆ ಮೃತಪಟ್ಟರು. ತಾಜ್ ಬಾಬಾ ಎಂದೇ ಖ್ಯಾತರಾಗಿದ್ದ ಇವರು, ಅಪಾರ ಅನುಯಾಯಿಗಳನ್ನು ಹೊಂದಿದ್ದರು. ಜುಮಾ ನಮಾಝ್​ ಬಳಿಕ ಕಲಬುರ್ಗಿಯ ಜುನೈದೇ ದರ್ಬಾರ್​ನಲ್ಲಿ ದಫನ್ ಕಾರ್ಯ ನಡೆಯಲಿದೆ. ಸುನ್ನಿಗಳ ಅಧ್ಯಾತ್ಮಿಕ ಮಾರ್ಗದರ್ಶಕರು ಎಂದೇ ಇವರು ಹೆಸರುವಾಸಿಯಾಗಿದ್ದರು.

ತಾಜುದ್ದೀನ್ ಜುನೈದಿ ನಿಧನಕ್ಕೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ಮುಸ್ಲಿಂ ಸಮುದಾಯದಲ್ಲಿ ಅಧ್ಯಾತ್ಮ, ಶಿಕ್ಷಣ, ಸಮಾಜಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಶ್ರೀಯುತರು, ಕಲಬುರಗಿಯಲ್ಲಿ ಹುಟ್ಟಿದರೂ, ಕೋಲಾರವನ್ನು ತಮ್ಮ ಸೇವಾನೆಲೆಯನ್ನಾಗಿ ಮಾಡಿಕೊಂಡಿದ್ದರು. ಹಝ್ರತ್‌ ಶೈಖ್‌ ತಾಜುದ್ದೀನ್‌ ಜುನೈದೀ ಅವರು ನಮ್ಮನ್ನಗಲಿರುವುದು ಅಪಾರ ದುಃಖ ಉಂಟು ಮಾಡಿದೆ’ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ಶ್ರೀ ಜುನೈದಿ ಅವರು ಹಾಕಿಕೊಟ್ಟ ಸೇವಾಮಾರ್ಗ ಎಲ್ಲರಿಗೂ ಪ್ರೇರಣೆಯಾಗಲಿ ಹಾಗೂ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ದಯಪಾಲಿಸಲಿ ಮತ್ತೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಶಿಷ್ಯಕೋಟಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಎಚ್​ಡಿಕೆ ಹೇಳಿದ್ದಾರೆ.

Published On - 10:40 am, Fri, 12 August 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ