AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sheikh Tajuddin Junaidi: ಕಲಬುರ್ಗಿಯ ಸೂಫಿ ಸಂತ ಶೇಖ್ ತಾಜುದ್ದೀನ್ ಜುನೈದಿ ನಿಧನ

ತಾಜ್ ಬಾಬಾ ಎಂದೇ ಖ್ಯಾತರಾಗಿದ್ದ ಇವರು, ಅಪಾರ ಅನುಯಾಯಿಗಳನ್ನು ಹೊಂದಿದ್ದರು.

Sheikh Tajuddin Junaidi: ಕಲಬುರ್ಗಿಯ ಸೂಫಿ ಸಂತ ಶೇಖ್ ತಾಜುದ್ದೀನ್ ಜುನೈದಿ ನಿಧನ
ಸೂಫಿ ಸಂತ ಶೇಖ್ ತಾಜುದ್ದೀನ್ ಜುನೈದಿ ನಿಧನ
TV9 Web
| Edited By: |

Updated on:Aug 12, 2022 | 10:40 AM

Share

ಕಲಬುರ್ಗಿ: ದೇಶದ ಮುಂಚೂಣಿ ಸೂಫಿ ಸಂತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹಝರತ್ ಶೇಖ್ ತಾಜುದ್ದೀನ್ ಜುನೈದಿ (Sheikh Tajuddin Junaidi) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ (ಆಗಸ್ಟ್ 12) ಮುಂಜಾನೆ ಮೃತಪಟ್ಟರು. ತಾಜ್ ಬಾಬಾ ಎಂದೇ ಖ್ಯಾತರಾಗಿದ್ದ ಇವರು, ಅಪಾರ ಅನುಯಾಯಿಗಳನ್ನು ಹೊಂದಿದ್ದರು. ಜುಮಾ ನಮಾಝ್​ ಬಳಿಕ ಕಲಬುರ್ಗಿಯ ಜುನೈದೇ ದರ್ಬಾರ್​ನಲ್ಲಿ ದಫನ್ ಕಾರ್ಯ ನಡೆಯಲಿದೆ. ಸುನ್ನಿಗಳ ಅಧ್ಯಾತ್ಮಿಕ ಮಾರ್ಗದರ್ಶಕರು ಎಂದೇ ಇವರು ಹೆಸರುವಾಸಿಯಾಗಿದ್ದರು.

ತಾಜುದ್ದೀನ್ ಜುನೈದಿ ನಿಧನಕ್ಕೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ಮುಸ್ಲಿಂ ಸಮುದಾಯದಲ್ಲಿ ಅಧ್ಯಾತ್ಮ, ಶಿಕ್ಷಣ, ಸಮಾಜಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಶ್ರೀಯುತರು, ಕಲಬುರಗಿಯಲ್ಲಿ ಹುಟ್ಟಿದರೂ, ಕೋಲಾರವನ್ನು ತಮ್ಮ ಸೇವಾನೆಲೆಯನ್ನಾಗಿ ಮಾಡಿಕೊಂಡಿದ್ದರು. ಹಝ್ರತ್‌ ಶೈಖ್‌ ತಾಜುದ್ದೀನ್‌ ಜುನೈದೀ ಅವರು ನಮ್ಮನ್ನಗಲಿರುವುದು ಅಪಾರ ದುಃಖ ಉಂಟು ಮಾಡಿದೆ’ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ಶ್ರೀ ಜುನೈದಿ ಅವರು ಹಾಕಿಕೊಟ್ಟ ಸೇವಾಮಾರ್ಗ ಎಲ್ಲರಿಗೂ ಪ್ರೇರಣೆಯಾಗಲಿ ಹಾಗೂ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ದಯಪಾಲಿಸಲಿ ಮತ್ತೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಶಿಷ್ಯಕೋಟಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಎಚ್​ಡಿಕೆ ಹೇಳಿದ್ದಾರೆ.

Published On - 10:40 am, Fri, 12 August 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ