AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಕಂಟೇನರ್‌ಗೆ ಕಾರು ಡಿಕ್ಕಿ: ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ!

Accident In Kalaburagi District: ಕಂಟೇನರ್​ಗೆ ಕಾರು ಡಿಕ್ಕಿಯಾಗಿ ವಿಜಯಪುರದ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ ಹೊಂದಿದ್ದಾರೆ.

ನಿಂತಿದ್ದ ಕಂಟೇನರ್‌ಗೆ ಕಾರು ಡಿಕ್ಕಿ: ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ!
ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 07, 2022 | 7:34 PM

ಕಲಬುರಗಿ: ರಸ್ತೆಬದಿ ನಿಂತಿದ್ದ ಕಂಟೇನರ್​ಗೆ (container) ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ದಂಪತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ (Kalaburagi District)ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಇಂದು(ಡಿಸೆಂಬರ್ 07) ನೆಲೋಗಿ ಕ್ರಾಸ್‍ನಲ್ಲಿ ನಿಂತಿದ್ದ ಕಂಟೇನರ್​ ಹಿಂಬದಿಗೆ​ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ಸಿಪಿಐ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ.

ವಿಜಯಪುರ ಸಿಪಿಐ ರವಿ ಉಕ್ಕುಂದ ಹಾಗೂ ಪತ್ನಿ ಮಧು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಂದಗಿಯಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ನಿಂತಿದ್ದ ಕಂಟೇನರ್​ಗೆ ಕಾರು ಡಿಕ್ಕಿ ಹೊಡೆದಿದೆ. ಹಿಂಬದಿಗೆ ಹೋಗಿ ಗುದ್ದಿದ್ದರಿಂದ ಕಾರಿನ ಅರ್ಧ ಭಾಗ ಕಂಟೇನರ್​ ಒಳ ಹೊಕ್ಕಿದೆ.

ಘಟನೆಯಲ್ಲಿ ದಂಪತಿ ದುರ್ಮರಣ ಹೊಂದಿದ್ದು, ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಇನ್ನು ಈ ಬಗ್ಗೆ ನಲೋಗಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಮೃತ ದಂಪತಿಗೆ ಕೊಪ್ಪಳದಲ್ಲಿ ಶ್ರದ್ಧಾಂಜಲಿ ರಸ್ತೆ ಅಪಘಾತದಲ್ಲಿ ಸಿಂದಗಿ ಸಿಪಿಐ ರವಿ ಉಕ್ಕುಂದ ಹಾಗೂ ಪತ್ನಿ ಮೃತ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಮೃತ ದಂಪತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ನಗರದ ಬಸ್ ನಿಲ್ದಾಣದಿಂದ ಅಶೋಕ ವೃತ್ತದವರೆಗೆ ಸಾರ್ವಜನಿಕರು ಹಾಗೂ ಪೊಲೀಸರು ಮೆಣದ ಬತ್ತಿ ಹಿಡಿದು ಮೆರವಣಿಗೆ ಮಾಡುವ ಮೂಲಕ ಸಂತಾಪ ಸೂಚಿಸಿದರು. ಈ ವೇಳೆ ಅಮರ್ ಹೇ,ಅಮರ್ ಹೇ ರವಿ ಉಕ್ಕುಂದ ಅಮರ್ ಹೇ ಎಂದರು.

ಈ‌ ಮೊದಲು ರವಿ ಉಕ್ಕುಂದ ಕೊಪ್ಪಳದಲ್ಲಿ ಕಾರ್ಯನಿರ್ವಹಿಸಿದ್ದರು. 6 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ರವಿ ಉಕ್ಕುಂದ, ಜನಸ್ನೇಹಿ ಅಧಿಕಾರಿಯಾಗಿ ಹೆಸರು ಮಾಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:53 pm, Wed, 7 December 22

ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ