AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371 ಜೆ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿದೆ. ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಅಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ್ದು, ಪ್ರತಿ ವರ್ಷ ಸರ್ಕಾರ ಐದು ಸಾವಿರ ಕೋಟಿ ಅನುಧಾನ ನೀಡುತ್ತಿದೆ.

ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 19, 2023 | 7:32 PM

Share

ಕಲಬುರಗಿ, ಜುಲೈ 19: ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸಂವಿಧಾನದ 371 ಜೆ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿದೆ. ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಅಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ್ದು, ಪ್ರತಿ ವರ್ಷ ಸರ್ಕಾರ ಐದು ಸಾವಿರ ಕೋಟಿ ರೂ. ಅನುದಾನ ನೀಡುತ್ತಿದೆ. ಜೊತೆಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೂಡಾ ನೀಡಿದೆ. ಆದರೆ ಮೀಸಲಾತಿ ಸರಿಯಾಗಿ ಸಿಗ್ತಿಲ್ಲಾ, ಅನುದಾನ ಸದ್ಭಳಕೆ ಆಗ್ತಿಲ್ಲಾ ಎನ್ನುವ ಅನೇಕ ಆರೋಪಗಳಿದ್ದವು. ಇದೀಗ ಕಲ್ಯಾಣ ಕರ್ನಾಟಕ ಭಾಗದ ಅನುಷ್ಠಾನದ ಪ್ರಗತಿ ಪರಿಶೀಲನೆಗೆ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕಾಗಿ ಸರ್ಕಾರ ಹೊರಡಿಸಲಾದ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಸೋರುತ್ತಿರುವ ಸರ್ಕಾರಿ ಶಾಲೆ ಕೊಠಡಿಗಳು; ಪ್ರಾಣ ಭಯದಲ್ಲಿಯೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಈ ಹಿನ್ನೆಲೆಯಲ್ಲಿ ಸರ್ಕಾರದ ಜಂಟಿ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ. ಸಂಪುಟ ಉಪ ಸಮಿತಿ ಸದಸ್ಯರನ್ನಾಗಿ, ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಡಾ ಶರಣಪ್ರಕಾಶ ಪಾಟೀಲ್, ಡಿ. ಸುಧಾಕರ್, ಬಿ.ನಾಗೇಂದ್ರ ಹಾಗೂ ಎನ್ ಎಸ್ ಬೋಸರಾಜ್ ನೇಮಿಸಲಾಗಿದೆ.

ಇದನ್ನೂ ಓದಿ: ಹೆಡ್ ಕಾನ್​ಸ್ಟೇಬಲ್ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು, ಸಾಧ್ಯವಿಲ್ಲ ಎಂದ ಪರಮೇಶ್ವರ

ಭಾರತದ ಸಂವಿಧಾನದ ಅನುಚ್ಛೇದ 371 ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಸಚಿವ ಸಂಪುಟದ ಉಪ ಸಮಿತಿ ಪರಿಶೀಲಿಸಲಿದೆ. ಸದರಿ ಸಮಿತಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಈ ಸಮಿತಿಗೆ ಅಗತ್ಯ ನೆರವು ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?