AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ VS ಸಿದ್ದಲಿಂಗ ಸ್ವಾಮೀಜಿ ವಾಕ್ಸಮರ: ‘ಕೈ’ ಶಾಸಕರ ಮನೆ ನೆಲಸಮಗೊಳಿಸಲು ಸ್ವಾಮೀಜಿ ಸವಾಲ್

ಕಲಬುರಗಿಯಲ್ಲಿ ಸ್ವಾಮೀಜಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ನಡುವೆ ಆಗಾಗ ವಾಕ್ಸಮರ ನಡೆಯುತ್ತಲೇ ಇರುತ್ತದೆ. ಸಧ್ಯ ಆ ಸ್ವಾಮೀಜಿ ಕಟ್ಟಿಸುತ್ತಿರುವ ಶಾಖಾ ಮಠಕ್ಕೆ ಪಾಲಿಕೆ ನೋಟಿಸ್ ನೀಡಿದೆ. ಇದಕ್ಕೆ ಸಿಡಿದೆದ್ದ ಸ್ವಾಮೀಜಿ, ತಾಕತ್ತಿದ್ದರೆ ಜಿಲ್ಲೆಯ ನಿಮ್ಮದೇ ಶಾಸಕರ ನಿಯಮ ಬಾಹಿರ ಮನೆಯನ್ನು ನೆಲಸಮಗೊಳಿಸಿ ಎಂದು ಸಾವಾಲ್ ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆ VS ಸಿದ್ದಲಿಂಗ ಸ್ವಾಮೀಜಿ ವಾಕ್ಸಮರ: ‘ಕೈ’ ಶಾಸಕರ ಮನೆ ನೆಲಸಮಗೊಳಿಸಲು ಸ್ವಾಮೀಜಿ ಸವಾಲ್
ಪ್ರಿಯಾಂಕ್ ಖರ್ಗೆ & ಸಿದ್ದಲಿಂಗ ಸ್ವಾಮೀಜಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma|

Updated on: Aug 16, 2024 | 9:04 AM

Share

ಕಲಬುರಗಿ, ಆಗಸ್ಟ್ 16: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನಡುವೆ ಮತ್ತೊಂದು ಸುತ್ತಿನ ಮಾತಿನ ಯುದ್ಧ ಶುರುವಾಗಿದೆ. ಆದರೆ ಈ ಬಾರಿ ತಾರಕ್ಕೇರುವ‌ ಲಕ್ಷಣ ಕಾಣಿಸಿದೆ. ಸಿದ್ದಲಿಂಗ ಶ್ರೀಗಳ ಶಾಖಾ ಮಠದ ವಿಚಾರವಾಗಿ ಈ ವಾಕ್ಸಮರ ಆರಂಭವಾಗಿದೆ. ಈ ಮಠದ ಕಟ್ಟಡ ಪರವಾನಗಿ ಪಡೆಯುವಾಗ ಸ್ವಾಮೀಜಿ ಎರಡು ಅಂತಸ್ತಿನ ಕಟ್ಟಡ ಎಂದು ಉಲ್ಲೇಖಿಸಿದ್ದರು. ಆದರೆ ಮೂರು ಅಂತಸ್ತಿನ ಕಟ್ಟಡ ಕಟ್ಟಿಸಲಾಗುತ್ತಿದೆ ಎನ್ನಲಾಗಿದೆ.

ಹೀಗಾಗಿ, ನೀವು ನಿಯಮ‌ ಮೀರಿ ಕಟ್ಟಡ ನಿರ್ಮಾಣ ಮಾಡಿದ್ದೀರಿ ಎಂದಿರುವ ಕಲಬುರಗಿ ಮಹಾನಗರ ಪಾಲಿಕೆ, ಪರವಾನಗಿ ಯಾಕೆ ರದ್ದು ಮಾಡಬಾರದು ಎಂದು ನೋಸ್ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಅದರಲ್ಲಿ ತಪ್ಪೇನಿದೆ? ನಾವೇ ನೋಟಿಸ್ ನೀಡಿದ್ದೇವೆ ಎಂದಿದ್ದಾರೆ.

ಸಚಿವರು ಈ ರೀತಿ ಹೇಳಿಕೆ ನೀಡಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ ಸ್ವಾಮೀಜಿ ಸದ್ಯ ಸಚಿವರ ವಿರುದ್ಧ ಸಮರ ಸಾರಿದ್ದಾರೆ. ನನ್ನ ಕಟ್ಟಡ ನಿರ್ಮಾಣ ನಿಯಮ ಬಾಹಿರ ಎನ್ನುವುದಾದರೆ ಕಲಬುಗಿ ನಗರದಲ್ಲಿ ಅದೆಷ್ಟು ಕಟ್ಟಡಗಳಿವೆ? ಅವೆಲ್ಲಾ ನಿಯಮ ಪಾಲಿಸಿವೆಯಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ನಿಮ್ಮದೇ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಮನೆ ಕೂಡಾ ಪಾಲಿಕೆ ನಿಯಮ ಪಾಲಿಸಿಲ್ಲ. ಮೊದಲು ಅದನ್ನ ನೆಲಸಮ ಮಾಡಿ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

Sri Ram Sena State President Siddalinga Swamiji vs Priyank kharge war of words for Mutt, Kalaburagi Kannada news

ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸ್ವಾಮೀಜಿ, ‘ನಿಮ್ಮ ಒಡೆತನದ ಪೀಪಲ್ ಏಕಜುಕೇಷನ್ ಸೊಸೈಟಿಯ ದಾಖಲೆಗಳೇ ಪಾಲಿಕೆ ಬಳಿ ಇಲ್ಲ. ಇದಕ್ಕೆಲ್ಲ ಉತ್ತರ ಏನು ಎಂದು ಪ್ರಶ್ನೆ ಮಾಡಿದ್ದಾರೆ. ಮೊದಲು ನಿಮ್ಮ ನಿಯಮ ಬಾಹಿರ ಕಟ್ಟಡ ನೆಲಸಮ‌ ಮಾಡಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜನೌಷಧಿ ಕೇಂದ್ರಕ್ಕೆ ಅನುಮತಿ ಕೊಡದಿರಲು ಸಚಿವ ಶರಣಪ್ರಕಾಶ್ ಪಾಟೀಲ್ ಕೊಟ್ಟ ಕಾರಣವಿದು!

ಸಚಿವರು ಹಾಗೂ ಸ್ವಾಮೀಜಿ ಮಧ್ಯೆ ಮತ್ತೊಂದು ಸುತ್ತಿನ ಮಾತಿನ ಸಮರ ನಡೆಯುತ್ತಿದೆ. ಏನೇ ಇದ್ದರೂ ಕಾನೂನು ಎಲ್ಲರಿಗೂ ಅನ್ವಯವಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ