AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ VS ಸಿದ್ದಲಿಂಗ ಸ್ವಾಮೀಜಿ ವಾಕ್ಸಮರ: ‘ಕೈ’ ಶಾಸಕರ ಮನೆ ನೆಲಸಮಗೊಳಿಸಲು ಸ್ವಾಮೀಜಿ ಸವಾಲ್

ಕಲಬುರಗಿಯಲ್ಲಿ ಸ್ವಾಮೀಜಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ನಡುವೆ ಆಗಾಗ ವಾಕ್ಸಮರ ನಡೆಯುತ್ತಲೇ ಇರುತ್ತದೆ. ಸಧ್ಯ ಆ ಸ್ವಾಮೀಜಿ ಕಟ್ಟಿಸುತ್ತಿರುವ ಶಾಖಾ ಮಠಕ್ಕೆ ಪಾಲಿಕೆ ನೋಟಿಸ್ ನೀಡಿದೆ. ಇದಕ್ಕೆ ಸಿಡಿದೆದ್ದ ಸ್ವಾಮೀಜಿ, ತಾಕತ್ತಿದ್ದರೆ ಜಿಲ್ಲೆಯ ನಿಮ್ಮದೇ ಶಾಸಕರ ನಿಯಮ ಬಾಹಿರ ಮನೆಯನ್ನು ನೆಲಸಮಗೊಳಿಸಿ ಎಂದು ಸಾವಾಲ್ ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆ VS ಸಿದ್ದಲಿಂಗ ಸ್ವಾಮೀಜಿ ವಾಕ್ಸಮರ: ‘ಕೈ’ ಶಾಸಕರ ಮನೆ ನೆಲಸಮಗೊಳಿಸಲು ಸ್ವಾಮೀಜಿ ಸವಾಲ್
ಪ್ರಿಯಾಂಕ್ ಖರ್ಗೆ & ಸಿದ್ದಲಿಂಗ ಸ್ವಾಮೀಜಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 16, 2024 | 9:04 AM

Share

ಕಲಬುರಗಿ, ಆಗಸ್ಟ್ 16: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನಡುವೆ ಮತ್ತೊಂದು ಸುತ್ತಿನ ಮಾತಿನ ಯುದ್ಧ ಶುರುವಾಗಿದೆ. ಆದರೆ ಈ ಬಾರಿ ತಾರಕ್ಕೇರುವ‌ ಲಕ್ಷಣ ಕಾಣಿಸಿದೆ. ಸಿದ್ದಲಿಂಗ ಶ್ರೀಗಳ ಶಾಖಾ ಮಠದ ವಿಚಾರವಾಗಿ ಈ ವಾಕ್ಸಮರ ಆರಂಭವಾಗಿದೆ. ಈ ಮಠದ ಕಟ್ಟಡ ಪರವಾನಗಿ ಪಡೆಯುವಾಗ ಸ್ವಾಮೀಜಿ ಎರಡು ಅಂತಸ್ತಿನ ಕಟ್ಟಡ ಎಂದು ಉಲ್ಲೇಖಿಸಿದ್ದರು. ಆದರೆ ಮೂರು ಅಂತಸ್ತಿನ ಕಟ್ಟಡ ಕಟ್ಟಿಸಲಾಗುತ್ತಿದೆ ಎನ್ನಲಾಗಿದೆ.

ಹೀಗಾಗಿ, ನೀವು ನಿಯಮ‌ ಮೀರಿ ಕಟ್ಟಡ ನಿರ್ಮಾಣ ಮಾಡಿದ್ದೀರಿ ಎಂದಿರುವ ಕಲಬುರಗಿ ಮಹಾನಗರ ಪಾಲಿಕೆ, ಪರವಾನಗಿ ಯಾಕೆ ರದ್ದು ಮಾಡಬಾರದು ಎಂದು ನೋಸ್ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಅದರಲ್ಲಿ ತಪ್ಪೇನಿದೆ? ನಾವೇ ನೋಟಿಸ್ ನೀಡಿದ್ದೇವೆ ಎಂದಿದ್ದಾರೆ.

ಸಚಿವರು ಈ ರೀತಿ ಹೇಳಿಕೆ ನೀಡಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ ಸ್ವಾಮೀಜಿ ಸದ್ಯ ಸಚಿವರ ವಿರುದ್ಧ ಸಮರ ಸಾರಿದ್ದಾರೆ. ನನ್ನ ಕಟ್ಟಡ ನಿರ್ಮಾಣ ನಿಯಮ ಬಾಹಿರ ಎನ್ನುವುದಾದರೆ ಕಲಬುಗಿ ನಗರದಲ್ಲಿ ಅದೆಷ್ಟು ಕಟ್ಟಡಗಳಿವೆ? ಅವೆಲ್ಲಾ ನಿಯಮ ಪಾಲಿಸಿವೆಯಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ನಿಮ್ಮದೇ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಮನೆ ಕೂಡಾ ಪಾಲಿಕೆ ನಿಯಮ ಪಾಲಿಸಿಲ್ಲ. ಮೊದಲು ಅದನ್ನ ನೆಲಸಮ ಮಾಡಿ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

Sri Ram Sena State President Siddalinga Swamiji vs Priyank kharge war of words for Mutt, Kalaburagi Kannada news

ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸ್ವಾಮೀಜಿ, ‘ನಿಮ್ಮ ಒಡೆತನದ ಪೀಪಲ್ ಏಕಜುಕೇಷನ್ ಸೊಸೈಟಿಯ ದಾಖಲೆಗಳೇ ಪಾಲಿಕೆ ಬಳಿ ಇಲ್ಲ. ಇದಕ್ಕೆಲ್ಲ ಉತ್ತರ ಏನು ಎಂದು ಪ್ರಶ್ನೆ ಮಾಡಿದ್ದಾರೆ. ಮೊದಲು ನಿಮ್ಮ ನಿಯಮ ಬಾಹಿರ ಕಟ್ಟಡ ನೆಲಸಮ‌ ಮಾಡಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜನೌಷಧಿ ಕೇಂದ್ರಕ್ಕೆ ಅನುಮತಿ ಕೊಡದಿರಲು ಸಚಿವ ಶರಣಪ್ರಕಾಶ್ ಪಾಟೀಲ್ ಕೊಟ್ಟ ಕಾರಣವಿದು!

ಸಚಿವರು ಹಾಗೂ ಸ್ವಾಮೀಜಿ ಮಧ್ಯೆ ಮತ್ತೊಂದು ಸುತ್ತಿನ ಮಾತಿನ ಸಮರ ನಡೆಯುತ್ತಿದೆ. ಏನೇ ಇದ್ದರೂ ಕಾನೂನು ಎಲ್ಲರಿಗೂ ಅನ್ವಯವಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ