AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ ಕಾಂಗ್ರೆಸ್ ಪ್ರಚೋದನೆ; ಸಿಎಂ ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಪ್ರಚೋದನೆ ನೀಡಿ ಮಾಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ ಕಾಂಗ್ರೆಸ್ ಪ್ರಚೋದನೆ; ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗಣಪತಿ ಶರ್ಮಾ
|

Updated on:Mar 28, 2023 | 6:36 PM

Share

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ಮನೆ ಮೇಲೆ ನಡೆದ ಕಲ್ಲು ತೂರಾಟವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಪ್ರಚೋದನೆ ನೀಡಿ ಮಾಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಕುತಂತ್ರ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅಲ್ಲಿ ಕ್ಯಾಮರಾದಲ್ಲಿ ಸೆರೆಸಿಕ್ಕವರು ಕಾಂಗ್ರೆಸ್ ನಾಯಕರು. ಅವರು ಹಿಂದಿನ ದಿನ ಜನಾಂಗದವರನ್ನು ತಪ್ಪು ದಾರಿಗೆ ಎಳೆದು, ಎಸ್​​ಸಿ ಪಟ್ಟಿಯಿಂದ ಜನಾಂಗವನ್ನು ತೆಗೆಯುತ್ತಾರೆ ಎಂದು ಸುಳ್ಳು ಹೇಳಿ ಪ್ರಚೋದಿಸಿ, ರಾತ್ರಿ ಸಭೆ ಕರೆದು ವ್ಯವಸ್ಥಿತವಾಗಿ ಕಾಂಗ್ರೆಸ್ ಮಾಡಿರುವುದು. ಸಾಕ್ಷಿ ಸಮೇತವಾಗಿ ನಾನು ಹೇಳುತ್ತಿರುವುದು. ಸುಳ್ಳು ಹೇಳುವುದನ್ನು ಡಿ.ಕೆ.ಶಿವಕುಮಾರ್ ಬಿಡಬೇಕು ಎಂದರು.

ಕಾಂಗ್ರೆಸ್ ನವರಿಗೆ ಹೊಟ್ಟೆಕಿಚ್ಚು

ಜವಳಿ ಪಾರ್ಕ್ ಬಗ್ಗೆ ಒಂದೂವರೆ ವರ್ಷಗಳಿಂದ ಮಾತನಾಡುತ್ತಿದ್ದೇವೆ. ಜವಳಿ ಪಾರ್ಕ್ ನೂತನ ಜವಳಿ ನೀತಿಯಲ್ಲಿ ಬಂದಿದ್ದು, ಪ್ರಧಾನಿಗಳು ಜವಳಿ ಮೂಲಕ ಹೆಚ್ಚಿನ ಉದ್ಯೋಗ ಮತ್ತು ರಫ್ತು ಆಗಬೇಕೆಂಬ ಹಿನ್ನೆಲೆಯಲ್ಲಿ ಆಗಿದೆ. ಕಲಬುರಗಿಗೆ ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್ ನವರಿಗೆ ಹೊಟ್ಟೆಕಿಚ್ಚು. ಅವರು ಮಾಡಲು ಸಾಧ್ಯವಾಗದೆ ಇದ್ದುದನ್ನು ನಾವು ಮಾಡಿದ್ದೇವೆ ಎಂದು. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಶಿವಮೊಗ್ಗ: ಬಿಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟಕ್ಕೆ ಪೊಲೀಸರ ನಿರ್ಲಕ್ಷ್ಯ ಕಾರಣ

ಚೆಲುವ ನಾರಾಯಣಸ್ವಾಮಿ ಮಾತು ನಂಬಲಾಗುವುದಿಲ್ಲ

ಎಸ್.ಟಿ. ಸೋಮಶೇಖರ್ ಹಾಗೂ ಬಿ.ಎ. ಬಸವರಾಜ ಅವರು ಚುನಾವಣೆ ಘೋಷಣೆ ಯಾದ ನಂತರ ವಲಸೆ ಬರಲಿದ್ದಾರೆ ಎಂದು ಚೆಲುವ ನಾರಾಯಣಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರೇ ಒಬ್ಬ ವಲಸಿಗರು, ಅವರ ಮಾತು ನಂಬಲು ಆಗುತ್ತದೆಯೇ ಎಂದರು.

ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅವರು ಹೇಳಿರುವುದು ಸರಿಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಂದಾಣಿಕೆಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Tue, 28 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!