ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು: KKRTC ಬಸ್ ಚಾಲಕನ ಉದ್ಧಟತನದ ಮಾತಿಗೆ ಆಕ್ರೋಶ

Kalaburagi News: ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ ಬಸ್​ ಚಾಲಕ ಹೇಳಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಸಂಬಂಧ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ವೈರಲ್ ಆಗುತ್ತಿದೆ.

Follow us
|

Updated on:Jul 27, 2023 | 3:47 PM

ಕಲಬುರಗಿ, ಜುಲೈ 27: ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ (KKRTC) ಬಸ್ ಚಾಲಕ ಹೇಳಿದ್ದಾಗಿ ಆರೋಪ ಕೇಳಿಬಂದಿದೆ. ಈ ಸಂಬಂಧ ಬಸ್ ನಿಲ್ದಾಣದಲ್ಲಿ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ನೀನು ಮುಸಲ್ಮಾನಳಾ ಎಂದು ಪ್ರಶ್ನಿಸಿ ಹೆಸರು ಹೇಳುವಂತೆ ಚಾಲಕ ಕೇಳಿದ್ದಾರೆ. ಆದರೆ ನಾವು ಹೆಸರು ಹೇಳಲಿಲ್ಲ. ಈ ವೇಳೆ ಚಾಲಕ, ನೀನು ಮುಸಲ್ಮಾನರಾಗಿದ್ದರೆ ಮೊದಲು ಬುರ್ಖಾ ಹಾಕಿಕೊಂಡು ಮಾತನಾಡು ಎಂದು ಹೇಳಿದ್ದಾರೆ. ಅದಾಗ್ಯೂ, ಬಸ್ ಹತ್ತಲು ಯತ್ನಿಸಿದಾಗ ಹತ್ತಲು ಬಿಡಲಿಲ್ಲ ಎಂದು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನು ಓದಿ: Viral Video: ಹರಿಯಾಣ; 13 ಗಂಟೆಗಳ ಕ್ಯಾಬ್​ರೈಡ್​; ಚಾಲಕನಿಗೆ ಹಣ ಕೊಡಲು ನಿರಾಕರಿಸಿದ ಮಹಿಳೆ

ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಿಕ್ಷಕರೊಬ್ಬರು ಬಸ್ ನಿಲ್ದಾಣದಲ್ಲಿ ಚಾಲಕನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಸ್ ಟೈರ್ ಪಂಕ್ಚರ್ ಆಗಿದ್ದರಿಂದ ವಿದ್ಯಾರ್ಥಿಗಳನ್ನು ದೂರ ಹೋಗುವಂತೆ ಹೇಳಿದ್ದಾಗಿ ಚಾಲಕ ಹೇಳಿರುವುದಾಗಿ ವಿಡಿಯೋದಲ್ಲಿ ಕೇಳಿಸಬಹುದು. ಅಲ್ಲದೆ, ಕೆಲವು ವಿದ್ಯಾರ್ಥಿಗಳು ಕೂಡ ಚಾಲಕನನ್ನು ಪ್ರಶ್ನಿಸುತ್ತಿರುವುದನ್ನು ಕೂಡ ಕಾಣಬಹುದು.

ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಶಾಲೆಯಿಂದ ಮನೆಗೆ ವಾಪಸ್ ಆಗಲು ಓಕಳಿ ಗ್ರಾಮದ ವಿದ್ಯಾರ್ಥಿಗಳು ಬಸ್ ಹತ್ತಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Thu, 27 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!