AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು: KKRTC ಬಸ್ ಚಾಲಕನ ಉದ್ಧಟತನದ ಮಾತಿಗೆ ಆಕ್ರೋಶ

Kalaburagi News: ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ ಬಸ್​ ಚಾಲಕ ಹೇಳಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಸಂಬಂಧ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ವೈರಲ್ ಆಗುತ್ತಿದೆ.

Rakesh Nayak Manchi
|

Updated on:Jul 27, 2023 | 3:47 PM

Share

ಕಲಬುರಗಿ, ಜುಲೈ 27: ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ (KKRTC) ಬಸ್ ಚಾಲಕ ಹೇಳಿದ್ದಾಗಿ ಆರೋಪ ಕೇಳಿಬಂದಿದೆ. ಈ ಸಂಬಂಧ ಬಸ್ ನಿಲ್ದಾಣದಲ್ಲಿ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ನೀನು ಮುಸಲ್ಮಾನಳಾ ಎಂದು ಪ್ರಶ್ನಿಸಿ ಹೆಸರು ಹೇಳುವಂತೆ ಚಾಲಕ ಕೇಳಿದ್ದಾರೆ. ಆದರೆ ನಾವು ಹೆಸರು ಹೇಳಲಿಲ್ಲ. ಈ ವೇಳೆ ಚಾಲಕ, ನೀನು ಮುಸಲ್ಮಾನರಾಗಿದ್ದರೆ ಮೊದಲು ಬುರ್ಖಾ ಹಾಕಿಕೊಂಡು ಮಾತನಾಡು ಎಂದು ಹೇಳಿದ್ದಾರೆ. ಅದಾಗ್ಯೂ, ಬಸ್ ಹತ್ತಲು ಯತ್ನಿಸಿದಾಗ ಹತ್ತಲು ಬಿಡಲಿಲ್ಲ ಎಂದು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನು ಓದಿ: Viral Video: ಹರಿಯಾಣ; 13 ಗಂಟೆಗಳ ಕ್ಯಾಬ್​ರೈಡ್​; ಚಾಲಕನಿಗೆ ಹಣ ಕೊಡಲು ನಿರಾಕರಿಸಿದ ಮಹಿಳೆ

ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಿಕ್ಷಕರೊಬ್ಬರು ಬಸ್ ನಿಲ್ದಾಣದಲ್ಲಿ ಚಾಲಕನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಸ್ ಟೈರ್ ಪಂಕ್ಚರ್ ಆಗಿದ್ದರಿಂದ ವಿದ್ಯಾರ್ಥಿಗಳನ್ನು ದೂರ ಹೋಗುವಂತೆ ಹೇಳಿದ್ದಾಗಿ ಚಾಲಕ ಹೇಳಿರುವುದಾಗಿ ವಿಡಿಯೋದಲ್ಲಿ ಕೇಳಿಸಬಹುದು. ಅಲ್ಲದೆ, ಕೆಲವು ವಿದ್ಯಾರ್ಥಿಗಳು ಕೂಡ ಚಾಲಕನನ್ನು ಪ್ರಶ್ನಿಸುತ್ತಿರುವುದನ್ನು ಕೂಡ ಕಾಣಬಹುದು.

ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಶಾಲೆಯಿಂದ ಮನೆಗೆ ವಾಪಸ್ ಆಗಲು ಓಕಳಿ ಗ್ರಾಮದ ವಿದ್ಯಾರ್ಥಿಗಳು ಬಸ್ ಹತ್ತಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Thu, 27 July 23

ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ