AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭವಾಗಿ ಎರಡು ತಿಂಗಳಾದ್ರೂ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಬರಿಗಾಲಲ್ಲೇ ಶಾಲೆಗೆ ಬರುತ್ತಿರುವ ಮಕ್ಕಳು

Shoe Bhagya Delay: ಕಲಬುರಗಿ ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿ ಎರಡು ತಿಂಗಳಾದರೂ ಮಕ್ಕಳಿಗೆ ಉಚಿತ ಶೂ, ಸಾಕ್ಸ್ ವಿತರಣೆಯಾಗಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಬರಿಗಾಲಿನಲ್ಲಿ ಶಾಲೆಗೆ ಬರುತ್ತಿದ್ದಾರೆ. ಟೆಂಡರ್ ಪ್ರಕ್ರಿಯೆಯ ವಿಳಂಬವೇ ಇದಕ್ಕೆ ಕಾರಣ ಎನ್ನಲಾಗಿದ್ದು, ಕೂಡಲೇ ಶೂ ವಿತರಿಸುವಂತೆ ಒತ್ತಾಯಿ ಕೇಳಿಬಂದಿದೆ.

ಶಾಲೆ ಆರಂಭವಾಗಿ ಎರಡು ತಿಂಗಳಾದ್ರೂ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಬರಿಗಾಲಲ್ಲೇ ಶಾಲೆಗೆ ಬರುತ್ತಿರುವ ಮಕ್ಕಳು
ಶೂ ಭಾಗ್ಯ Image Credit source: tv9 kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 29, 2026 | 9:06 PM

Share

ಕಲಬುರಗಿ, ಜುಲೈ 29: ಬಡ‌ ಮಕ್ಕಳಿಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಉಚಿತ ಶೂ ಹಾಗೂ ಸಾಕ್ಸ್ ನೀಡುತ್ತದೆ. ಆದರೆ ಪ್ರಸಕ್ತ ವರ್ಷ ಶಾಲೆ ಆರಂಭವಾಗಿ ಎರಡು ತಿಂಗಳು‌ ಕಳೆದರೂ ಸಹ ಕಲಬುರಗಿ (kalaburagi) ಜಿಲ್ಲೆಯ ಶಾಲಾ‌ ಮಕ್ಕಳಿಗೆ ಶೂ ಭಾಗ್ಯ (Shoe Bhagya) ಸಿಕಿಲ್ಲ. ಹೀಗಾಗಿ ಕೆಲ ವಿದ್ಯಾರ್ಥಿಗಳು ಚಪ್ಪಲಿ ಹಾಕಿಕೊಂಡು ಬಂದರೆ, ಇನ್ನು ಕೆಲ ವಿದ್ಯಾರ್ಥಿಗಳು ಬರಿಗಾಲಿನಲ್ಲಿ ಶಾಲೆಗೆ ಬರುತ್ತಿದ್ದಾರೆ. ಶೂ ಖರೀದಿಗೆ ಹಣವಿಲ್ಲ, ಇನ್ನಾದರೂ ನಮಗೆ ಶೂ ನೀಡಿ ಎಂದು ಮಕ್ಕಳು ಟಿವಿ9 ಎದುರು ಅಳಲು ತೋಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಬರಿಗಾಲಿನಲ್ಲಿ ಶಾಲೆಗೆ ಬರುವ ಪ್ರತಿಸ್ಥಿತಿ ನಿರ್ಮಾಣ

ರಾಜ್ಯದಲ್ಲಿ ಕಾಂಗ್ರೆಸ್ ನೈತೃತ್ವದ ಸರ್ಕಾರ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಶೂ ಭಾಗ್ಯ ಯೋಜನೆ ಜಾರಿಗೆ ತಂದಿದ್ದರು. ಆ ಮೂಲಕ 1 ರಿಂದ 10ನೇ ತರಗತಿವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಸರ್ಕಾರ ಉಚಿತವಾಗಿ 2 ಜೊತೆ ಶೂ ಮತ್ತು ಸಾಕ್ಸ್​ಗಳನ್ನು ನೀಡಲಾಗುತ್ತಿತ್ತು. ಆದರೆ ಪ್ರಸಕ್ತ ವರ್ಷ ಶಾಲೆಗಳು ಆರಂಭವಾಗಿ ಇದೀಗ ಎರಡು ತಿಂಗಳು ಕಳೆದರೂ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯ ಒಂದೇ ಒಂದು‌ ವಿದ್ಯಾರ್ಥಿಗೆ ಶೂ ಮತ್ತು ಸಾಕ್ಸ್ ವಿತರಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಬರಿಗಾಲಿನಲ್ಲಿ ಶಾಲೆಗೆ ಬರುವ ಪ್ರತಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಚಡ್ಡಿ’ ಮುಜುಗರ! 7ನೇ ತರಗತಿ ಬಾಲಕರಿಗೂ ಹಾಫ್ ಪ್ಯಾಂಟ್ ಬಟ್ಟೆ ವಿತರಣೆ, ಪೋಷಕರಿಗೆ ಇಕ್ಕಟ್ಟು

ಲಕ್ಷಾಂತರ ಬಡ ಮ್ಕಕಳಿಗೆ ಅನುಕೂಲವಾಗಬೇಕಿದ್ದ ಯೋಜನೆ ಹಳ್ಳ ಹಿಡಿಯಿತಾ ಎಂಬ ಅನುಮಾನ ಶುರುವಾಗಿದೆ. ಇನ್ನು ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಶೂ ಭಾಗ್ಯ ಯೋಜನೆಯಡಿ ಇನ್ನು ಶೂ ವಿತರಣೆಯಾಗಿಲ್ಲ ಎನ್ನುವುದು ಬಯಲಾಗಿದೆ. ‘ಶೂ ಸಾಕ್ಸ್ ಖರೀದಿ ಮಾಡುವುದಕ್ಕೆ ನಮ್ಮ ಬಳಿ ಹಣವಿಲ್ಲ, ಹೀಗಾಗಿ ಸರ್ಕಾರ ಕೂಡಲೇ ಶೂ ವಿತರಿಸಬೇಕು’ ಎನ್ನುತ್ತಿದ್ದಾರೆ ವಿದ್ಯಾರ್ಥಿಗಳು.

ಟೆಂಡರ್‌ ಕರೆದು ವಿತರಿಸಲು ಮುಂದಾದ ಸರ್ಕಾರ

ಇನ್ನು ಕಳೆದ ವರ್ಷ ಇಷ್ಟೋತ್ತಿಗಾಗಲೇ ಎಲ್ಲಾ ಶಾಲೆಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಲಾಗಿತ್ತು. ಆಯಾ ಶಾಲೆಯ ಮಕ್ಕಳ ಶಾಲಾ ದಾಖಲಾತಿ ಅನುಸಾರ ಮುಖ್ಯೋಪಾಧ್ಯಾರ ಖಾತೆಗಳಿಗೆ ಸರ್ಕಾರ ಹಣ ಹಾಕುತ್ತಿದ್ದರು. ಆ ಹಣದಿಂದ ಆಯಾ ತಾಲ್ಲೂಕು ಹಾಗೂ ಜಿಲ್ಲೆಯ ಸ್ಥಳೀಯ ಅಂಗಡಿಗಳಲ್ಲಿ ಶಾಲೆಯ ಮುಖ್ಯೋಪಾಧ್ಯಾರು ಶೂ ಮತ್ತು ಸಾಕ್ಸ್ ಖರೀದಿಸಿ ವಿತರಣೆ ಮಾಡುತ್ತಿದ್ದರು. ಆದರೆ ಪ್ರಸಕ್ತ ವರ್ಷ ಆ ಯೋಜನೆ ಕೈ ಬಿಟ್ಟು ರಾಜ್ಯ ಸರ್ಕಾರವೇ ಟೆಂಡರ್‌ ಕರೆದು ವಿತರಿಸಲು ಮುಂದಾಗಿರುವುದರಿಂದ ಇಲ್ಲಿಯವರೆಗೆ ಶೂ ಮತ್ತು ಸಾಕ್ಸ್ ವಿತರಣೆಯಾಗಿಲ್ಲ.

ಡಿಡಿಪಿಐ ಶಂಕ್ರಮ್ಮ ಢವಳಗಿ ಹೇಳಿದ್ದಿಷ್ಟು 

‘ಸದ್ಯ ಕಲಬುರಗಿ ಜಿಲ್ಲೆಯಲ್ಲಿ 1 ಲಕ್ಷ 94 ಸಾವಿರ 850 ಮಕ್ಕಳು ಶೂ ಮತ್ತು ಸಾಕ್ಸ್​ಗಾಗಿ ಈಗಾಗಲೇ ನೋಂದಣಿ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಎಲ್ಲಾ ಶಾಲಾ ಮಕ್ಕಳಿಗೆ ವಿತರಣೆ ಮಾಡುವುದಾಗಿ ಕಲಬುರಗಿ ಡಿಡಿಪಿಐ ಶಂಕ್ರಮ್ಮ ಢವಳಗಿ’ ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ

ಒಟ್ಟಿನಲ್ಲಿ ರಾಜ್ಯ ಸರ್ಕಾರ ಶೂ ಟೆಂಡರ್ ಕರೆದ ಪರಿಣಾಮ ಮಕ್ಕಳಿಗೆ ಶೂ ಭಾಗ್ಯ ವಿತರಣೆ ವಿಳಂಬಕ್ಕೆ ಕಾರಣವಾಗಿದೆ. ಹೀಗಾಗಿ ಆದಷ್ಟು ಬೇಗ ರಾಜ್ಯ ಸರ್ಕಾರ ಕಲಬುರಗಿ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ಶೂ ವಂಚಿತ ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಕಲ್ಪಿಸಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!