Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯೊಳಗಿನ ಕೆಲ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ ಸಂಭವಿಸುತ್ತಿದೆ -ತಜ್ಞರ ಅಧ್ಯಯನ

ನಿರಂತರ ಭೂ ಕಂಪನದಿಂದ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದರು. ಸದ್ಯ ತಜ್ಞರಿಂದ ಸಿಕ್ಕ ಮಾಹಿತಿ ಜನರನ್ನು ಆತಂಕದಿಂದ ಕೊಂಚ ದೂರ ಮಾಡಿದೆ. ಅಧ್ಯಯನ ನಡೆಸಿದ ತಜ್ಞರ ತಂಡ 5 ದಿನದಲ್ಲಿ ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡಲಿದೆ.

ಭೂಮಿಯೊಳಗಿನ ಕೆಲ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ ಸಂಭವಿಸುತ್ತಿದೆ -ತಜ್ಞರ ಅಧ್ಯಯನ
ಭೂಮಿಯೊಳಗಿನ ಕೆಲ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ ಸಂಭವಿಸುತ್ತಿದೆ -ತಜ್ಞರ ಅಧ್ಯಯನ
Follow us
TV9 Web
| Updated By: ಆಯೇಷಾ ಬಾನು

Updated on:Nov 10, 2021 | 10:46 AM

ಕಲಬುರಗಿ: ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ನಿರಂತರ ಭೂ ಕಂಪನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಜ್ಞರು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ಸದ್ಯ ಈಗ ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗ್ತಿದೆ. ಸಣ್ಣ ಪ್ರಮಾಣದ ಭೂಕಂಪದಿಂದ ಆತಂಕಕ್ಕೊಳಗಾಗಬೇಕಿಲ್ಲ ಎಂದು ತಿಳಿಸಿದ್ದಾರೆ.

ನಿರಂತರ ಭೂ ಕಂಪನದಿಂದ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದರು. ಸದ್ಯ ತಜ್ಞರಿಂದ ಸಿಕ್ಕ ಮಾಹಿತಿ ಜನರನ್ನು ಆತಂಕದಿಂದ ಕೊಂಚ ದೂರ ಮಾಡಿದೆ. ಅಧ್ಯಯನ ನಡೆಸಿದ ತಜ್ಞರ ತಂಡ 5 ದಿನದಲ್ಲಿ ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡಲಿದೆ. ಅಧ್ಯಯನ ನಡೆಸಿದ ತಜ್ಞರು, ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗ್ತಿದೆ. ಸಣ್ಣ ಪ್ರಮಾಣದ ಭೂಕಂಪದಿಂದ ಆತಂಕಕ್ಕೊಳಗಾಗಬೇಕಿಲ್ಲ. ರಾಜ್ಯದಲ್ಲಿ ಭಾರಿ ಪ್ರಮಾಣದ ಭೂಕಂಪ ಆಗುವುದಿಲ್ಲ. ಹೀಗಾಗಿ ರಾಜ್ಯದ ಜನರ ಭಯಪಡಬೇಕಾದ ಅಗತ್ಯವಿಲ್ಲ. ಜಗತ್ತಿನಲ್ಲಿ ಪ್ರತಿ ವರ್ಷ 20 ಲಕ್ಷ ಭೂಕಂಪಗಳು ಆಗುತ್ತವೆ ಎಂದು ಅಧ್ಯಯನ ಮಾಡಿದ ವಿಜ್ಞಾನಿಗಳ ತಂಡ ಮಾಹಿತಿ ನೀಡಿದೆ.

ಕಳೆದ ಕೆಲವು ದಿನಗಳಿಂದ ಭೂಕಂಪ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ತಜ್ಞರು ಅಧ್ಯಯನ ನಡೆಸಿದ್ದು ಜನರನ್ನು ಆತಂಕದಿಂದ ಪಾರು ಮಾಡಿದ್ದಾರೆ. ತಜ್ಞರ ಮಾಹಿತಿಯಿಂದ ಜನ ನಿಟ್ಟುಸಿರುಬಿಟ್ಟಿದ್ದಾರೆ. ಸದ್ಯ 5 ದಿನದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ತಜ್ಞರ ತಂಡ ಸರ್ಕಾರಕ್ಕೆ ವರದಿ ನೀಡಲಿದೆ.

ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂ ಕಂಪನ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಮಿಯಿಂದ ಸದ್ದು ಬಂದಿದೆ. ಬೆಳಗ್ಗೆ 9.55ರ ಸಮಯದಲ್ಲಿ ಎರಡು ಬಾರಿ ಸದ್ದು ಕೇಳಿಸಿದೆ. ಪದೇಪದೆ ಭೂಮಿಯಿಂದ ಬರುವ ಸದ್ದಿನಿಂದ ಜನ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಭೂಕಂಪನಕ್ಕೆ ತತ್ತರಿಸಿದ ಗ್ರಾಮಸ್ಥರು; ಎನ್​ಜಿಆರ್​ಐ ತಂಡದಿಂದ ಅಧ್ಯಯನ ಆರಂಭ

Published On - 8:31 am, Wed, 10 November 21

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ