AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Mutalik: ಶ್ರೀರಾಮಸೇನೆಯ ಪ್ರಮೋದ್​ ಮುತಾಲಿಕ್​ ಸೇರಿದಂತೆ ನಾಲ್ವರಿಗೆ ಸಮನ್ಸ್ ಜಾರಿ

2017ರಲ್ಲಿ ಯಾದಗಿರಿಯಲ್ಲಿ ನಡೆದಿದ್ದ ಹಿಂದೂ ಸಮಾವೇಶದಲ್ಲಿ ರಾಜಾಸಿಂಗ್​ ಅವರಿಗೆ ಖಡ್ಗ ನೀಡಿ ಸತ್ಕರಿಸಲಾಗಿತ್ತು.

Pramod Mutalik: ಶ್ರೀರಾಮಸೇನೆಯ ಪ್ರಮೋದ್​ ಮುತಾಲಿಕ್​ ಸೇರಿದಂತೆ ನಾಲ್ವರಿಗೆ ಸಮನ್ಸ್ ಜಾರಿ
ಶ್ರೀರಾಮಸೇನೆಯ ನಾಯಕ ಪ್ರಮೋದ್ ಮುತಾಲಿಕ್
TV9 Web
| Edited By: |

Updated on:Jun 08, 2022 | 5:14 PM

Share

ಕಲಬುರ್ಗಿ: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶ್ರೀರಾಮಸೇನೆಯ (Sri Rama Sene) ಸಂಸ್ಥಾಪಕ​ ಪ್ರಮೋದ್ ಮುತಾಲಿಕ್ (Pramod Mutalik) ಮತ್ತು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ತೆಲಂಗಾಣದ (Telangana) ಘೋಶಾಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಠಾಕೂರ್​​ ಸೇರಿದಂತೆ ನಾಲ್ವರಿಗೆ ಸಮನ್ಸ್ ಜಾರಿಗೊಳಿಸಿದೆ. ಜೂನ್ 9ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಇವರಿಗೆ ಸೂಚಿಸಲಾಗಿದೆ. 2017ರಲ್ಲಿ ಯಾದಗಿರಿಯಲ್ಲಿ ನಡೆದಿದ್ದ ಹಿಂದೂ ಸಮಾವೇಶದಲ್ಲಿ ರಾಜಾಸಿಂಗ್​ ಅವರಿಗೆ ಖಡ್ಗ ನೀಡಿ ಸತ್ಕರಿಸಲಾಗಿತ್ತು. ನಂತರದ ದಿನಗಳಲ್ಲಿ ಪ್ರಕರಣವನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದಿಂದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.

ಸ್ವಯಂಪ್ರೇರಿತ ದೂರು ದಾಖಲು

ಡಿಸೆಂಬರ್ 12, 2017ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ತೆಲಂಗಾಣ ಶಾಸಕ ರಾಜಾಸಿಂಗ್ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರೊಂದಿಗೆ ಸೇರಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಇವರಿಬ್ಬರ ವಿರುದ್ಧವೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಬಿಜೆಪಿ ನಾಯಕ ವಿಜಯ್ ಪಾಟೀಲ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ‘ಅಖಂಡ ಭಾರತ ಸಾಧಿಸುವವರೆಗೆ ಹಿಂದೂ ಯುವಕರು, ಹಿಂದೂ ಯೋಧರಾಗಬೇಕು’ ಎಂದು ರಾಜಾಸಿಂಗ್ ಕೈಲಿ ಖಡ್ಗ ಝಳಪಿಸಿದ್ದರು ಎಂದು ಪೊಲೀಸಲು ಹೇಳಿದ್ದಾರೆ.

ಈ ಕುರಿತು ಪಿಟಿಐ ಸುದ್ದಿಸಂಸ್ಥೆಗೆ ಡಿಸೆಂಬರ್ 17, 2017ರಂದು ಪ್ರತಿಕ್ರಿಯಿಸಿದ್ದ ಅಂದಿನ ಐಜಿಪಿ ಅಲೋಕ್ ಕುಮಾರ್, ‘ರಾಜಾಸಿಂಗ್ ಅವರು ಪ್ರಚೋದನಾಕಾರಿ ಮತ್ತು ವಿವಾದಾತ್ಮಕ ಭಾಷಣ ಮಾಡಿದ್ದಾರೆ. ಸಮಾರಂಭದಲ್ಲಿ ಸಿಂಗ್ ಅವರೊಂದಿಗೆ ಇನ್ನೂ ಇಬ್ಬರು ಖಡ್ಗ ಝಳಪಿಸಿದ್ದರು. ಕಾನೂನುಬಾಹಿರವಾಗಿ ಸಭೆ ನಡೆಸಿದ್ದು, ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶನ ಮತ್ತು ಸಮುದಾಯಗಳ ನಡುವೆ ವೈಷಮ್ಯ ಬಿತ್ತುವ ಪ್ರಯತ್ನಗಳನ್ನು ಗಮನಿಸಿ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Wed, 8 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ