AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ ರಜೆಯಲ್ಲಿದ್ದ ಕರ್ನಾಟಕದ ಹಲವು ಯೋಧರನ್ನು ಸೇನೆ ಮತ್ತೆ ಕರೆಸಿಕೊಂಡಿದೆ. ಕಲಬುರಗಿ ಮತ್ತು ಬೀದರ್‌ನ ಯೋಧರು ತಮ್ಮ ಕುಟುಂಬಗಳನ್ನು ಬಿಟ್ಟು ದೇಶ ಸೇವೆಗೆ ಮರಳಿದ್ದಾರೆ. ಒಬ್ಬ ಯೋಧ ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ಮರಳಿದ್ದು ಮಾತ್ರ ವಿಶೇಷ.

ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್
ದೇಶ ಸೇವೆಗೆ ಮರಳಿದ ಯೋಧರು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: May 11, 2025 | 1:25 PM

Share

ಕಲಬುರಗಿ, ಮೇ 11: ಭಾರತದ ಏರ್​ಸ್ಟ್ರೈಕ್ ನೋಡಿ ಪಾಕಿಸ್ತಾನ (Pakistan) ಪತರಗುಟ್ಟಿದೆ. ಭಾರತ ಎದುರು ಹಾಕಿಕೊಂಡರೆ ನಮಗೆ ಉಳಿಗಾಲವಿಲ್ಲ ಅನ್ನೋದನ್ನ ಅರಿತ ಪಾಕಿಸ್ತಾನ, ಕೊನೆಗೂ ಭಾರತದ ಮುಂದೆ ಮಂಡಿಯೂರಿದೆ. ಕದನ ವಿರಾಮ ಘೋಷಣೆ ಮಾಡಲಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ದದ ಕಾರ್ಮೋಡ ಹಿನ್ನಲೆ ಇತ್ತ ರಜೆ ಮೇಲೆ ಬಂದಿದ್ದ ಕರ್ನಾಟಕದ ಯೋಧರನ್ನು (soldier) ಸೇನೆ ವಾಪಸ್ ಕರೆಸಿಕೊಳ್ಳುತ್ತಿದೆ. ಕಲಬುರಗಿಯ ಇಬ್ಬರು ಮತ್ತು ಬೀದರ್​ನ ಓರ್ವ ಯೋಧ ವಾಪಸ್​ ದೇಶ ಸೇವೆಗೆ ಮರಳಿದ್ದಾರೆ.

ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ತೆರಳಿದ ಯೋಧ

ಪತ್ನಿಗೆ ಹೆರಿಗೆ ಹಿನ್ನೆಲೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಧುತ್ತರಗಾವ್ ಗ್ರಾಮದ ಯೋಧ ಹಣಮಂತರಾಯ್ ಔಸೆ ಸ್ವಗ್ರಾಮಕ್ಕೆ ಬಂದಿದ್ದರು. 20 ವರ್ಷದಿಂದ ಸಿಆರ್​​ಪಿಫ್​​ನಲ್ಲಿ ಸೇವೆ ಸಲ್ಲಿಸುತ್ತಿರುವ ಹಣಮಂತರಾಯ್, ಪ್ರಸಕ್ತ ಶ್ರೀನಗರದಲ್ಲಿ ಸೇವೆಯಲ್ಲಿದ್ದಾರೆ. 1 ತಿಂಗಳು ರಜೆ ಪಡೆದು ಏ.25ರಂದು ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ತೆರಳಿದ್ದು, ಕಲಬುರಗಿ ನಿಲ್ದಾಣದಲ್ಲಿ ಹಣಮಂತರಾಯ್​ಗೆ ಕುಟುಂಬಸ್ಥರು‌ ಬಿಳ್ಕೋಟ್ಟಿದೆ.

ಇದನ್ನೂ ಓದಿ: ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ

ಅದೇ ರೀತಿಯಾಗಿ ವಿಜಯಪುರ ಬಿಲ್ಲೆಯ ಬಬಲೇಶ್ವರ ತಾಲೂಕಿನ ಬಿಎಸ್​ಎಫ್ ಯೋಧ ಸಿದ್ದಪ್ಪ ಕರ್ತವ್ಯಕ್ಕೆ ವಾಪಸ್​ ಆಗಿದ್ದಾರೆ. ಸೇನೆಯ ತುರ್ತು ಕರೆಯ ಮೇರೆಗೆ ಕಲಬುರಗಿ ರೈಲು ನಿಲ್ದಾಣದದಿಂದ ಹೈದ್ರಾಬಾದ್​ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್

ಇನ್ನು ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪುರ ಗ್ರಾಮದ ಬಸವಕಿರಣ ಸೇವೆಗೆ ವಾಪಸ್ ಆಗಿದ್ದಾರೆ. ಪಂಜಾಬ್‌ನ ಅಮೃತಸರದಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಬಸವಕಿರಣ, ಏಪ್ರಿಲ್ 27ರಂದು ರಜೆ ಮೇಲೆ ಊರಿಗೆ ಬಂದಿದ್ದರು. ಇದೀಗ ಸೇನೆಯ ತುರ್ತು ಕರೆಯ ಮೇರೆಗೆ ಕರ್ತವ್ಯಕ್ಕೆ ಮರಳಿದ್ದಾರೆ. ಸಹೋದರ ಬಸವಕಿರಣಗೆ ಅಕ್ಕ ವಚನಶ್ರೀ ಶುಭ ಹಾರೈಸಿದ್ದಾರೆ.

ಮಾಜಿ ಸೈನಿಕ ಮನೋಹರ್ ಸಿಂಗ್ ಹೇಳಿದ್ದಿಷ್ಟು 

ಭಾರತ ಮತ್ತು ಪಾಕ್ ನಡುವೆ ಯುದ್ಧದ ವಿಚಾರವಾಗಿ ರಾಯಚೂರಿನಲ್ಲಿ ಮಾಜಿ ಸೈನಿಕ ಮನೋಹರ್ ಸಿಂಗ್ ಟಿವಿ9 ಜೊತೆಗೆ ಮಾತನಾಡಿದ್ದು, ಪೂರ್ಣ ಪ್ರಮಾಣದ ಯುದ್ಧ ನಡೆದರೇ ಸಿದ್ಧರಾಗುವಂತೆ ಮಾಜಿ ಸೈನಿಕರಿಗೆ ಸೂಚನೆ ನೀಡಿದ್ದಾರೆ. ಯಾವಾಗ ಯುದ್ಧವಾದರೆ ಮಾಜಿ ಸೈನಿಕರು ತಯಾರಾಗಬೇಕು ಅಂತ ಹೇಳಿದ್ದಾರೆ. ಅಲ್ಲದೇ ಟೆರಿಟೋರಿ ಆರ್ಮಿ ರೆಡಿ ಇರಬೇಕು ಅಂತ ಹೇಳಿದ್ದಾರೆ. ಎಕ್ಸ್ ಸರ್ವಿಸ್ ಮ್ಯಾನ್​ಗಳಿಗೆ ಅನುಭವ ಹೆಚ್ಚಿರುತ್ತೆ. ಹೀಗಾಗಿ ಮೊದಲು ನಮಗೆ ಆದ್ಯತೆ ನೀಡಲಾಗುತ್ತೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ