ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ ರಜೆಯಲ್ಲಿದ್ದ ಕರ್ನಾಟಕದ ಹಲವು ಯೋಧರನ್ನು ಸೇನೆ ಮತ್ತೆ ಕರೆಸಿಕೊಂಡಿದೆ. ಕಲಬುರಗಿ ಮತ್ತು ಬೀದರ್‌ನ ಯೋಧರು ತಮ್ಮ ಕುಟುಂಬಗಳನ್ನು ಬಿಟ್ಟು ದೇಶ ಸೇವೆಗೆ ಮರಳಿದ್ದಾರೆ. ಒಬ್ಬ ಯೋಧ ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ಮರಳಿದ್ದು ಮಾತ್ರ ವಿಶೇಷ.

ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್
ದೇಶ ಸೇವೆಗೆ ಮರಳಿದ ಯೋಧರು
Edited By:

Updated on: May 11, 2025 | 1:25 PM

ಕಲಬುರಗಿ, ಮೇ 11: ಭಾರತದ ಏರ್​ಸ್ಟ್ರೈಕ್ ನೋಡಿ ಪಾಕಿಸ್ತಾನ (Pakistan) ಪತರಗುಟ್ಟಿದೆ. ಭಾರತ ಎದುರು ಹಾಕಿಕೊಂಡರೆ ನಮಗೆ ಉಳಿಗಾಲವಿಲ್ಲ ಅನ್ನೋದನ್ನ ಅರಿತ ಪಾಕಿಸ್ತಾನ, ಕೊನೆಗೂ ಭಾರತದ ಮುಂದೆ ಮಂಡಿಯೂರಿದೆ. ಕದನ ವಿರಾಮ ಘೋಷಣೆ ಮಾಡಲಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ದದ ಕಾರ್ಮೋಡ ಹಿನ್ನಲೆ ಇತ್ತ ರಜೆ ಮೇಲೆ ಬಂದಿದ್ದ ಕರ್ನಾಟಕದ ಯೋಧರನ್ನು (soldier) ಸೇನೆ ವಾಪಸ್ ಕರೆಸಿಕೊಳ್ಳುತ್ತಿದೆ. ಕಲಬುರಗಿಯ ಇಬ್ಬರು ಮತ್ತು ಬೀದರ್​ನ ಓರ್ವ ಯೋಧ ವಾಪಸ್​ ದೇಶ ಸೇವೆಗೆ ಮರಳಿದ್ದಾರೆ.

ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ತೆರಳಿದ ಯೋಧ

ಪತ್ನಿಗೆ ಹೆರಿಗೆ ಹಿನ್ನೆಲೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಧುತ್ತರಗಾವ್ ಗ್ರಾಮದ ಯೋಧ ಹಣಮಂತರಾಯ್ ಔಸೆ ಸ್ವಗ್ರಾಮಕ್ಕೆ ಬಂದಿದ್ದರು. 20 ವರ್ಷದಿಂದ ಸಿಆರ್​​ಪಿಫ್​​ನಲ್ಲಿ ಸೇವೆ ಸಲ್ಲಿಸುತ್ತಿರುವ ಹಣಮಂತರಾಯ್, ಪ್ರಸಕ್ತ ಶ್ರೀನಗರದಲ್ಲಿ ಸೇವೆಯಲ್ಲಿದ್ದಾರೆ. 1 ತಿಂಗಳು ರಜೆ ಪಡೆದು ಏ.25ರಂದು ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ತೆರಳಿದ್ದು, ಕಲಬುರಗಿ ನಿಲ್ದಾಣದಲ್ಲಿ ಹಣಮಂತರಾಯ್​ಗೆ ಕುಟುಂಬಸ್ಥರು‌ ಬಿಳ್ಕೋಟ್ಟಿದೆ.

ಇದನ್ನೂ ಓದಿ: ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ

ಅದೇ ರೀತಿಯಾಗಿ ವಿಜಯಪುರ ಬಿಲ್ಲೆಯ ಬಬಲೇಶ್ವರ ತಾಲೂಕಿನ ಬಿಎಸ್​ಎಫ್ ಯೋಧ ಸಿದ್ದಪ್ಪ ಕರ್ತವ್ಯಕ್ಕೆ ವಾಪಸ್​ ಆಗಿದ್ದಾರೆ. ಸೇನೆಯ ತುರ್ತು ಕರೆಯ ಮೇರೆಗೆ ಕಲಬುರಗಿ ರೈಲು ನಿಲ್ದಾಣದದಿಂದ ಹೈದ್ರಾಬಾದ್​ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್

ಇನ್ನು ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪುರ ಗ್ರಾಮದ ಬಸವಕಿರಣ ಸೇವೆಗೆ ವಾಪಸ್ ಆಗಿದ್ದಾರೆ. ಪಂಜಾಬ್‌ನ ಅಮೃತಸರದಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಬಸವಕಿರಣ, ಏಪ್ರಿಲ್ 27ರಂದು ರಜೆ ಮೇಲೆ ಊರಿಗೆ ಬಂದಿದ್ದರು. ಇದೀಗ ಸೇನೆಯ ತುರ್ತು ಕರೆಯ ಮೇರೆಗೆ ಕರ್ತವ್ಯಕ್ಕೆ ಮರಳಿದ್ದಾರೆ. ಸಹೋದರ ಬಸವಕಿರಣಗೆ ಅಕ್ಕ ವಚನಶ್ರೀ ಶುಭ ಹಾರೈಸಿದ್ದಾರೆ.

ಮಾಜಿ ಸೈನಿಕ ಮನೋಹರ್ ಸಿಂಗ್ ಹೇಳಿದ್ದಿಷ್ಟು 

ಭಾರತ ಮತ್ತು ಪಾಕ್ ನಡುವೆ ಯುದ್ಧದ ವಿಚಾರವಾಗಿ ರಾಯಚೂರಿನಲ್ಲಿ ಮಾಜಿ ಸೈನಿಕ ಮನೋಹರ್ ಸಿಂಗ್ ಟಿವಿ9 ಜೊತೆಗೆ ಮಾತನಾಡಿದ್ದು, ಪೂರ್ಣ ಪ್ರಮಾಣದ ಯುದ್ಧ ನಡೆದರೇ ಸಿದ್ಧರಾಗುವಂತೆ ಮಾಜಿ ಸೈನಿಕರಿಗೆ ಸೂಚನೆ ನೀಡಿದ್ದಾರೆ. ಯಾವಾಗ ಯುದ್ಧವಾದರೆ ಮಾಜಿ ಸೈನಿಕರು ತಯಾರಾಗಬೇಕು ಅಂತ ಹೇಳಿದ್ದಾರೆ. ಅಲ್ಲದೇ ಟೆರಿಟೋರಿ ಆರ್ಮಿ ರೆಡಿ ಇರಬೇಕು ಅಂತ ಹೇಳಿದ್ದಾರೆ. ಎಕ್ಸ್ ಸರ್ವಿಸ್ ಮ್ಯಾನ್​ಗಳಿಗೆ ಅನುಭವ ಹೆಚ್ಚಿರುತ್ತೆ. ಹೀಗಾಗಿ ಮೊದಲು ನಮಗೆ ಆದ್ಯತೆ ನೀಡಲಾಗುತ್ತೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us