AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು: ದೂರು ದಾಖಲು

ಕಲಬುರಗಿಯ ಜನನಿಬಿಡ ಪ್ರದೇಶದಲ್ಲಿಯೇ ದುಷ್ಕರ್ಮಿಗಳು ಮಧ್ಯಾಹ್ನದ ಸಮಯದಲ್ಲಿಯೇ ಓರ್ವ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವಂತಹ ಘಟನೆ ಇಕ್ಬಾಲ್ ಕಾಲೋನಿಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು: ದೂರು ದಾಖಲು
ಚಾಕು ಇರಿತಕ್ಕೊಳಗಾದ ಯುವಕ ಮಹ್ಮದ್ ಹಸನ್
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 03, 2023 | 8:30 PM

Share

ಕಲಬುರಗಿ: ಗಾಂಜಾ ಮತ್ತು ಕುಡಿತದ ಮತ್ತಿನಲ್ಲಿ ಹಾಡಹಗಲೇ ಕೊಲೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿಮೀರಿದೆ. ದುಷ್ಕರ್ಮಿಗಳಿಗೆ ಕಾನೂನು ಮತ್ತು ಪೊಲೀಸರ ಮೇಲೆ ಭಯವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಅನೇಕ ಅಹಿತಕರ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಇಂದು ಕೂಡ ಜನನಿಬಿಡ ಪ್ರದೇಶದಲ್ಲಿಯೇ ದುಷ್ಕರ್ಮಿಗಳು ಮಧ್ಯಾಹ್ನದ ಸಮಯದಲ್ಲಿಯೇ ಚಾಕುವಿನಿಂದ ಇರಿದು (stabbed) ಪರಾರಿಯಾಗಿದ್ದಾರೆ. ಚಾಕು ಇರಿತಕ್ಕೊಳಗಾದ ಯುವಕ, ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾನೆ.

ಕಲಬುರಗಿ ನಗರದ ಇಕ್ಬಾಲ್ ಕಾಲೋನಿಯಲ್ಲಿ ಯುವಕನ ಮೇಲೆ ಇಬ್ಬರು ಪುಡಿ ರೌಡಿಗಳು ಚಾಕುವಿನಿಂದ ಇರಿದಿದ್ದಾರೆ. ಇಂದು ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿಯೇ ಹೊಟೆಲ್ ಮುಂದೆ ನಿಂತಿದ್ದ ಮಹ್ಮದ್ ಹಸನ್​ಗೆ ಚಾಕು ಇರಿದಿದ್ದಾರೆ. ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಹಸನ್​ ಇಂದು ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದ. ಮಧ್ಯಾಹ್ನದ ಮನೆಯ ಸಮೀಪದಲ್ಲಿಯೇ ಇರುವ ಹೋಟೆಲ್ ಬಳಿ ಸ್ನೇಹಿತರ ಜೊತೆ ನಿಂತಿದ್ದ. ಈ ಸಮಯದಲ್ಲಿ ಮಹ್ಮದ್ ಹಸಸ್​ಗೆ ಪರಿಚಿತರಿರುವ ಇಬ್ಬರು ಯುವಕರು ಬಂದು ಚಾಕುವಿನಿಂದ ಎದೆ ಸೇರಿದಂತೆ ದೇಹದ ವಿವಿಧಡೆ ಇರಿದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಪೊಲೀಸ್ ಠಾಣೆ ಬಳಿಯೇ ಕಳ್ಳರ ಕರಾಮತ್ತು, ಮೀನಿನ ವ್ಯಾಪಾರಿಯ ಮನೆ ಬೀಗ ಮುರಿದು ಕಳ್ಳತನ

ಚಾಕು ಇರಿತಕ್ಕೆ ಕಾರಣ ನಿಗೂಢ

ಮಹ್ಮದ್ ಹಸನ್​ ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡಿದ್ದಾತ. ಯಾರ ಜೊತೆ ವೈಷಮ್ಯವನ್ನು ಹೊಂದಿರಲ್ಲವಂತೆ. ಆದರೆ ಹಾಡಹಗಲೇ ದುಷ್ಕರ್ಮಿಗಳು ಯಾರ ಅಂಜಿಕೆ, ಅಳುಕಿಲ್ಲದೆ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಮಹ್ಮದ್ ಹಸನ್ ಮೇಲೆ ಚಾಕುವಿನಿಂದ ದಾಳಿ ಮಾಡಿದಾಗ, ಮಹ್ಮದ್ ಹಸನ್ ಸ್ನೇಹಿತರು ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅವರ ಮೇಲೆ ಕೂಡಾ ಚಾಕುವಿನಿಂದ ದಾಳಿ ಮಾಡಲು ಮುಂದಾಗಿದ್ದರಿಂದ ಅವರು ಓಡಿ ಹೋಗಿದ್ದಾರೆ.

ಇದನ್ನೂ ಓದಿ: ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್ ಮೇಲೆ ಹಲ್ಲೆ: ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿದ ಪೊಲೀಸ್​

ಆದರೆ ದುಷ್ಕರ್ಮಿಗಳು ಪರಾರಿಯಾದ ನಂತರ, ಸ್ನೇಹಿತರೇ, ಮಹ್ಮದ್ ಹಸನ್​ನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದಾರೆ. ಎದೆ ಭಾಗ ಸೇರಿದಂತೆ ಅನೇಕ ಕಡೆ ಇರದಿದ್ದರಿಂದ, ಮಹ್ಮದ್ ಹಸನ್, ಆರೋಗ್ಯ ಗಂಭೀರವಾಗಿದ್ದು, ತೀರ್ವ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಮಹ್ಮದ್ ಹಸನ್ ಮೇಲೆ ಚಾಕುವಿನಿಂದ ಇರಿದ ಘಟನೆ ಬಗ್ಗೆ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Mon, 3 July 23

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ