AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ, ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣ; ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಆರೋಗ್ಯ ಇಲಾಖೆ ಸೂಚನೆ ನೀಡಿದರೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಳವಾಗಿದ್ದು, ಕುಡಿಯುವ ನೀರಿಗೆ ಚರಂಡಿ ನೀರು ಸೇರಿ ಕಾಲರಾ ಹೆಚ್ಚುತ್ತಿದೆ.

ಜ್ವರ, ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣ; ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಕಲುಷಿತ ನೀರು (ಸಂಗ್ರಹ ಚಿತ್ರ)
TV9 Web
| Updated By: preethi shettigar|

Updated on:Oct 05, 2021 | 12:18 PM

Share

ಕಲಬುರಗಿ: ಜ್ವರದಿಂದ ಮೂವರು ಬಾಲಕಿಯರು ಹಾಗೂ ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಆನೂರಿನಲ್ಲಿ ಸೆಪ್ಟೆಂಬರ್ 25ರಂದು ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವುದು, ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಹೇಳಿದ್ದ ಆರೋಗ್ಯ ಸಿಬ್ಬಂದಿ ಆ ಬಗ್ಗೆ ಈವರೆಗೂ ಕ್ರಮ ಕೈಗೊಂಡಿಲ್ಲ. ಇದು ಸಹಜವಾಗಿಯೇ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆರೋಗ್ಯ ಇಲಾಖೆ ಸೂಚನೆ ನೀಡಿದರೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಳವಾಗಿದ್ದು, ಕುಡಿಯುವ ನೀರಿಗೆ ಚರಂಡಿ ನೀರು ಸೇರಿ ಕಾಲರಾ ಹೆಚ್ಚುತ್ತಿದೆ. ದಸ್ತಾಪುರ ಗ್ರಾಮದಲ್ಲಿ ಕಾಲರಾಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ಅಲ್ಲದೆ ಆನೂರು ಗ್ರಾಮದಲ್ಲಿ ಚಿಕನ್‌ಗುನ್ಯಾ, ಡೇಂಗ್ಯೂ ರೋಗ ಉಲ್ಬಣವಾಗಿದೆ.

ವಿಜಯನಗರ: ಕಲುಷಿತ ನೀರು ಸೇವಿಸಿ 6 ಜನರ ಸಾವು ಪ್ರಕರಣ; ಆತಂಕಗೊಂಡು ಗ್ರಾಮ ತೊರೆದ ಕೆಲವು ಕುಟುಂಬಗಳು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಆತಂಕಗೊಂಡ ಗ್ರಾಮದ ಸದಸ್ಯರು, ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಇನ್ನು ಅಸ್ವಸ್ಥಗೊಂಡ ಕೆಲವರಿಗೆ ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಲ್ಲದೆ ಮಕರಬ್ಬಿ ಗ್ರಾಮದಲ್ಲಿ 7-8 ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.

ಟಿವಿ9ನಲ್ಲಿ ವರದಿ ಪ್ರಸಾರ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಆರು ಜನರು ಸಾವು ಹಿನ್ನಲೆ, ಟಿವಿ9 ನಿರಂತರ ವರದಿಗೆ ಕೊನೆಗೂ ಜಿಲ್ಲಾಡಳಿತ ಎಚ್ಛೆತ್ತುಕೊಂಡಿದೆ. ಬಳ್ಳಾರಿಯಿಂದ ಮಕರಬ್ಬಿ ಗ್ರಾಮಕ್ಕೆ ಡಿಹೆಚ್ ಒ ಡಾ.ಜನಾರ್ಧನ ನೇತೃತ್ವದ ವೈದ್ಯಾಧಿಕಾರಿಗಳ ತಂಡ ತೆರಳಿದೆ.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವನೆಯಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ; ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಜನರ ಆಕ್ರೋಶ

ವಿಜಯನಗರ: ಕಲುಷಿತ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥ; ನಾಲ್ವರ ಸಾವು

Published On - 7:20 am, Tue, 5 October 21