Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್

ಕಾಲೇಜು ಕೋಣೆಗೆ ನುಗ್ಗಿ ಏರ್ ಗನ್ ತೋರಿಸಿ ಗುಂಡಾಗಿರಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಳಂದ ಪಟ್ಟಣದಲ್ಲಿ ಕೆಲ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಗಲಾಟೆ ಮಾಡಿದವರು ಡಾ.ರಾಮ್ ಮನೋಹರ ಲೋಹಿಯಾ ಕಾಲೇಜು ವಿದ್ಯಾರ್ಥಿಗಳು ಅಂತಾ ತಿಳಿದು ಕಾಲೇಜಿಗೆ ಬಂದ ಪುಂಡರು ಈ ಅವಾಂತರ ಮಾಡಿದ್ದಾರೆ.

ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 29, 2021 | 10:52 AM

ಕಲಬುರಗಿ: ಅಮೆರಿಕ ಸೇರಿದಂತೆ ಇತರೆ ಕೆಲ ಮುಂದುವರಿದ ದೇಶಗಳಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅಥವಾ ಹೊರಗಿನ ದುಷ್ಕರ್ಮಿಗಳು ಕಾಲೇಜು ಕ್ಯಾಂಪಸ್​​ಗಳಿಗೆ ನುಗ್ಗಿ ಅಟ್ಟಹಾಸ ಮೆರೆಯುತ್ತಾ, ಯದ್ವಾತದ್ವಾ ಗುಂಡಿನ ಮಳೆಗೆರೆದು ಮಾರಣಹೋಮ ನಡೆಸುವುದು ಆಗಾಗ ಕೇಳುತ್ತಿರುತ್ತೇವೆ. ಆದರೆ ಇಲ್ಲೇ ನಮ್ಮ ಮಧ್ಯೆಯೇ ಇಂತಹ ಘಟನೆ ನಡೆಯಿತೆಂದರೆ ಜನ ಬೆಚ್ಚಿಬೀಳುವುದರ ಜೊತೆಗೆ ಆಶ್ಚರ್ಯಚಕಿತರೂ ಆಗಬೇಕಾದೀತು. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಕಾಲೇಜಿನಲ್ಲೂ ಇದೇ ಮಾದರಿಯ ಘಟನೆ ನಡೆದಿದೆ. ಇಲ್ಲಿನ ಡಾ. ರಾಮಮನೋಹರ ಲೋಹಿಯಾ ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಲಾಗಿದೆ.

ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಕೋಣೆಗೆ ನುಗ್ಗಿ, ಏರ್​​ ಗನ್ ತೋರಿಸಿ ಭೀತಿ ಹುಟ್ಟಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆಳಂದ ಪಟ್ಟಣದ ಅಮೀರ್ ಸೊಹೇಲ್, ಬಶೀರ್​ ಅಹ್ಮದ್ ಮತ್ತು ಅಮೇನ್ ಪಟೇಲ್ ಎಂಬ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ಕೋಣೆಗೆ ನುಗ್ಗಿ ಏರ್ ಗನ್ ತೋರಿಸಿ ಗುಂಡಾಗಿರಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಳಂದ ಪಟ್ಟಣದಲ್ಲಿ ಕೆಲ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಗಲಾಟೆ ಮಾಡಿದವರು ಡಾ.ರಾಮ್ ಮನೋಹರ ಲೋಹಿಯಾ ಕಾಲೇಜು ವಿದ್ಯಾರ್ಥಿಗಳು ಅಂತಾ ತಿಳಿದು ಕಾಲೇಜಿಗೆ ಬಂದ ಪುಂಡರು ಈ ಅವಾಂತರ ಮಾಡಿದ್ದಾರೆ. ಕಳೆದ ಬುಧವಾರ ಈ ಘಟನೆ ನಡೆದಿದೆ.

(three miscreants flashes airgun in Aland college arrested by kalaburagi aland police)

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್