AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್

ಕಾಲೇಜು ಕೋಣೆಗೆ ನುಗ್ಗಿ ಏರ್ ಗನ್ ತೋರಿಸಿ ಗುಂಡಾಗಿರಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಳಂದ ಪಟ್ಟಣದಲ್ಲಿ ಕೆಲ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಗಲಾಟೆ ಮಾಡಿದವರು ಡಾ.ರಾಮ್ ಮನೋಹರ ಲೋಹಿಯಾ ಕಾಲೇಜು ವಿದ್ಯಾರ್ಥಿಗಳು ಅಂತಾ ತಿಳಿದು ಕಾಲೇಜಿಗೆ ಬಂದ ಪುಂಡರು ಈ ಅವಾಂತರ ಮಾಡಿದ್ದಾರೆ.

ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
TV9 Web
| Edited By: |

Updated on: Oct 29, 2021 | 10:52 AM

Share

ಕಲಬುರಗಿ: ಅಮೆರಿಕ ಸೇರಿದಂತೆ ಇತರೆ ಕೆಲ ಮುಂದುವರಿದ ದೇಶಗಳಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅಥವಾ ಹೊರಗಿನ ದುಷ್ಕರ್ಮಿಗಳು ಕಾಲೇಜು ಕ್ಯಾಂಪಸ್​​ಗಳಿಗೆ ನುಗ್ಗಿ ಅಟ್ಟಹಾಸ ಮೆರೆಯುತ್ತಾ, ಯದ್ವಾತದ್ವಾ ಗುಂಡಿನ ಮಳೆಗೆರೆದು ಮಾರಣಹೋಮ ನಡೆಸುವುದು ಆಗಾಗ ಕೇಳುತ್ತಿರುತ್ತೇವೆ. ಆದರೆ ಇಲ್ಲೇ ನಮ್ಮ ಮಧ್ಯೆಯೇ ಇಂತಹ ಘಟನೆ ನಡೆಯಿತೆಂದರೆ ಜನ ಬೆಚ್ಚಿಬೀಳುವುದರ ಜೊತೆಗೆ ಆಶ್ಚರ್ಯಚಕಿತರೂ ಆಗಬೇಕಾದೀತು. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಕಾಲೇಜಿನಲ್ಲೂ ಇದೇ ಮಾದರಿಯ ಘಟನೆ ನಡೆದಿದೆ. ಇಲ್ಲಿನ ಡಾ. ರಾಮಮನೋಹರ ಲೋಹಿಯಾ ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಲಾಗಿದೆ.

ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಕೋಣೆಗೆ ನುಗ್ಗಿ, ಏರ್​​ ಗನ್ ತೋರಿಸಿ ಭೀತಿ ಹುಟ್ಟಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆಳಂದ ಪಟ್ಟಣದ ಅಮೀರ್ ಸೊಹೇಲ್, ಬಶೀರ್​ ಅಹ್ಮದ್ ಮತ್ತು ಅಮೇನ್ ಪಟೇಲ್ ಎಂಬ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ಕೋಣೆಗೆ ನುಗ್ಗಿ ಏರ್ ಗನ್ ತೋರಿಸಿ ಗುಂಡಾಗಿರಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಳಂದ ಪಟ್ಟಣದಲ್ಲಿ ಕೆಲ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಗಲಾಟೆ ಮಾಡಿದವರು ಡಾ.ರಾಮ್ ಮನೋಹರ ಲೋಹಿಯಾ ಕಾಲೇಜು ವಿದ್ಯಾರ್ಥಿಗಳು ಅಂತಾ ತಿಳಿದು ಕಾಲೇಜಿಗೆ ಬಂದ ಪುಂಡರು ಈ ಅವಾಂತರ ಮಾಡಿದ್ದಾರೆ. ಕಳೆದ ಬುಧವಾರ ಈ ಘಟನೆ ನಡೆದಿದೆ.

(three miscreants flashes airgun in Aland college arrested by kalaburagi aland police)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ