ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕಲಬುರಗಿ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವ ಘಟನೆ ಕಮಲಾಪುರ‌ ತಾಲೂಕಿನ ಬೆಳಕೋಟಾ‌ ಗ್ರಾಮದ ಬಳಿ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಾಗು 8ನೇ ತರಗತಿಯ ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು ಕಮಲಾಪುರದ ಸತ್ಯಸಾಯಿ‌ ಶಾಲೆಗೆ ಪ್ರವಾಸ ಬಂದಿದ್ದರು. ಶಾಲಾ ಪ್ರವಾಸ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಈಜಾಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಹಾಗಾಂವ​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

Updated on: Jan 01, 2020 | 8:19 AM

ಕಲಬುರಗಿ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವ ಘಟನೆ ಕಮಲಾಪುರ‌ ತಾಲೂಕಿನ ಬೆಳಕೋಟಾ‌ ಗ್ರಾಮದ ಬಳಿ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಾಗು 8ನೇ ತರಗತಿಯ ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು ಕಮಲಾಪುರದ ಸತ್ಯಸಾಯಿ‌ ಶಾಲೆಗೆ ಪ್ರವಾಸ ಬಂದಿದ್ದರು. ಶಾಲಾ ಪ್ರವಾಸ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಈಜಾಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಹಾಗಾಂವ​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.