AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಎಸಿಬಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದ್ದು ಹೀಗೆ

ಎಸಿಬಿ ಅಧಿಕಾರಿಗಳ ದಾಳಿ ವೇಳೆ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ವಾಟರ್ ಪೈಪ್​ನಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿತ್ತು. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ ಅವರ ಮನೆಯ ಪೈಪ್​ನಲ್ಲಿ ಸುಮಾರು 54.5 ಲಕ್ಷ ಹಣ ಪತ್ತೆಯಾಗಿದೆ.

ಕಲಬುರಗಿ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಎಸಿಬಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದ್ದು ಹೀಗೆ
ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಸಿಕ್ಕ ಹಣ
TV9 Web
| Edited By: |

Updated on:Nov 25, 2021 | 9:41 AM

Share

ಕಲಬುರಗಿ: ನಿನ್ನೆ (ನ.24) ಒಂದೇ ದಿನ ರಾಜ್ಯದಲ್ಲಿ ಸುಮಾರು 15 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಭ್ರಷ್ಟ ಅಧಿಕಾರಿಗಳು ಬೇನಾಮಿ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಭ್ರಷ್ಟರಿಗೆ ಎಸಿಬಿ ನಿನ್ನೆ ಶಾಕ್ ಕೊಟ್ಟು, ದಾಖಲೆಗಳು ಸೇರಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಕಲಬುರಗಿಯ ಶಾಂತಗೌಡ ಬಿರಾದರ್ ಮನೆಯ ಪೈಪ್ನಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿ ಪೈಪ್ನಲ್ಲಿ ಇದ್ದ ಹಣವನ್ನು ಪತ್ತೆ ಮಾಡಿದ್ದೇ ರೋಚಕವಾಗಿದೆ.

ಎಸಿಬಿ ಅಧಿಕಾರಿಗಳ ದಾಳಿ ವೇಳೆ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ವಾಟರ್ ಪೈಪ್​ನಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿತ್ತು. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ ಅವರ ಮನೆಯ ಪೈಪ್​ನಲ್ಲಿ ಸುಮಾರು 54.5 ಲಕ್ಷ ಹಣ ಪತ್ತೆಯಾಗಿದೆ. ಆದರೆ ಪೈಪ್​ನಲ್ಲಿ ಇದ್ದ ಹಣವನ್ನ ಪತ್ತೆ ಮಾಡಿದ್ದೇ ರೋಚಕವಾಗಿದೆ. ಹಣ ಸಿಕ್ಕಿದ್ದ ಪೈಪ್ ವಾಷಿಂಗ್ ಮಷಿನ್ನಿಂದ ನೀರು ಹೊರ ಹೋಗಲು ಸಂಪರ್ಕ ಹೊಂದಿದೆ. ಕಳೆದ ಎರಡು ತಿಂಗಳಿಂದ ವಾಷಿಂಗ್ ಮಷಿನ್ ಬಳಸಿರಲಿಲ್ಲ. ಎಸಿಬಿ ಅಧಿಕಾರಿಗಳು ಬಂದ ತಕ್ಷಣ ಶಾಂತಗೌಡ ಬಿರಾದರ್ ಕಂತೆ ಕಂತೆ ಹಣವನ್ನು ಪೈಪ್​ನಲ್ಲಿ ಹಾಕಿದ್ದಾರೆ. ಹಣ ಹಾಕಿದ ನಂತರ ಪ್ಲೇಟ್ ಬದಲಾಗಿ ಅದರ ಮೇಲೆ ಕಲ್ಲು ಇಟ್ಟಿದ್ದರು.

ಶಾಂತಗೌಡ ಬಿರಾದರ್ ಮನೆಯ ಟಾಯ್ಲೇಟ್ ಬಳಿ ವಾಷಿಂಗ್ ಮಷಿನ್ ಇಟ್ಟಿದ್ದಾರೆ. ಎಸಿಬಿ ದಾಳಿ ನಡೆಸಿದ ವೇಳೆ ಪದೇ ಪದೇ ಟಾಯ್ಲೇಟ್​ಗೆ ಹೋಗಿ ಬರೋದಾಗಿ ಹೇಳುತ್ತಿದ್ದರು. ಹಣ ಸಿಕ್ಕಿದ ಪೈಪ್ ಬಳಿ ಶಾಂತಗೌಡ ಮತ್ತು ಅವರ ಪುತ್ರ ಹೋಗುತ್ತಿದ್ದರು. ತಂದೆ ಮಗ ಪೈಪ್ ಬಳಿಯೇ ಹೆಚ್ಚು ಓಡಾಟ ನಡೆಸುತ್ತಿದ್ದರು. ಅನುಮಾನಗೊಂಡ ಎಸಿಬಿ ಸಿಬ್ಬಂದಿ ಪೈಪ್ ಮೇಲಿನ ಕಲ್ಲು ತಳ್ಳಿದ್ದಾರೆ. ಆಗ ಪೈಪ್​ನಲ್ಲಿ ಹಣ ಇರುವುದು ಕಣ್ಣಿಗೆ ಬಿದ್ದಿದೆ. ಮನೆ ಹೊರಗಡೆಯಿಂದ ಪೈಪ್ ಕತ್ತರಿಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದೆ.

ಇದನ್ನೂ ಓದಿ

ಕೇವಲ 30 ನಿಮಿಷಗಳ ವಾಕಿಂಗ್; ನಿಮ್ಮಲ್ಲಿ ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಹರಿಸಿ

ಮೇಘಾಲಯದಲ್ಲಿ ಕಾಂಗ್ರೆಸ್​​ಗೆ ಬಿಗ್​ ಶಾಕ್​; ಮಾಜಿ ಸಿಎಂ ಸೇರಿ 12 ಶಾಸಕರು ತೃಣಮೂಲ ಕಾಂಗ್ರೆಸ್​​ಗೆ

Published On - 9:34 am, Thu, 25 November 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ