ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ
ತ್ರಿವಳಿ ಕೊಲೆಗೆ ಕಲಬುರಗಿ ಬೆಚ್ಚಿಬಿದ್ದಿದೆ. ಮಂಗಳವಾರ ತಡರಾತ್ರಿ ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು, ಅಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸದ್ಯ, ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕಲಬುರಗಿ, ಜೂನ್ 25: ಕಲಬುರಗಿ (Kalaburagi) ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಮೂವರನ್ನು ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಕೊಲೆಯಾದವರನ್ನು ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಹತ್ಯೆಯಾದವರು ಸಂಬಂಧಿಕರಾಗಿದ್ದಾರೆ. ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆ ಮಾಡಿದ ಬಳಿಕ ಹಂತಕರು ಡಾಬಾದಲ್ಲಿನ ಸಿಸಿಟಿವಿಯ ಹಾರ್ಡ್ ಡಿಸ್ಕ್ ಕದ್ದೊಯ್ದಿರುವುದು ತಿಳಿದುಬಂದಿದೆ. ಸಿಸಿಟಿವಿಯಲ್ಲಿ ಹಂತಕರ ಸಂಪೂರ್ಣ ಚಲನವಲನ ರೇಕಾರ್ಡ್ ಆಗಿತ್ತು. ಹೀಗಾಗಿ ಸಾಕ್ಷ್ಯ ಸಿಗಬಾರದು ಎಂದು ಸಿಸಿಟಿವಿಯ ಹಾರ್ಡ್ ಡಿಸ್ಕ್ ಅನ್ನೇ ಕದ್ದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ, ಘಟನೆ ನಡೆದ ಸ್ಥಳದ ಅಕ್ಕ ಪಕ್ಕದಲ್ಲಿರುವ ಸಿಸಿಟಿವಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
7 ಮಂದಿ ಆರೋಪಿಗಳು ಪೊಲೀಸ್ ಬಲೆಗೆ
ಕಲಬುರಗಿ ಹೊರವಲಯದ ಪಟ್ನಾ ಬಳಿ ನಡೆದ ತ್ರಿವಳಿ ಕೊಲೆ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ತಾಳಕೋಟಿ, ರಾಚಣ್ಣ ಸೇರಿ 7 ಆರೋಪಿಗಳನ್ನು ಕಲಬುರಗಿಯ ಸಬ್ಅರ್ಬನ್ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪರಿಂದಲೂ ವಿಚಾರಣೆ ನಡೆದಿದೆ.
ಇದನ್ನೂ ಓದಿ: ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು!
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:12 am, Wed, 25 June 25