AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ಸಭೆಯಲ್ಲಿ ಟಿವಿ9ನ ಕಲಬುರಗಿ ಸೆಂಟ್ರಲ್​​ ಜೈಲಿ ವರದಿ ಪ್ರಸ್ತಾಪಿಸಿ ಅಧಿಕಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ತರಾಟೆ

ಕಲಬುರಗಿ ಸೆಂಟ್ರಲ್​​ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಟಿವಿ9 ವರದಿ ಪ್ರಸಾರ ಮಾಡಿತ್ತು. ಇಂದು ಕಲಬುರಗಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಟಿವಿ9 ವರದಿ ಪ್ರಸ್ತಾಪ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭೆಯಲ್ಲಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Tv9 Impact: ಸಭೆಯಲ್ಲಿ ಟಿವಿ9ನ ಕಲಬುರಗಿ ಸೆಂಟ್ರಲ್​​ ಜೈಲಿ ವರದಿ ಪ್ರಸ್ತಾಪಿಸಿ ಅಧಿಕಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ತರಾಟೆ
ಸಚಿವ ಪ್ರಿಯಾಂಕ್​ ಖರ್ಗೆ
TV9 Web
| Edited By: |

Updated on: Dec 20, 2023 | 2:22 PM

Share

ಕಲಬುರಗಿ, ಡಿ.20: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara), ಬೆಳಗಾವಿಯ ಹಿಂಡಲಗಾ ಜೈಲಿನ (Hindalga Jail) ಕರ್ಮಕಾಂಡದ ಬಗ್ಗೆ ಈ ಹಿಂದೆ ಟಿವಿ9 ವಿಸ್ತೃತ ವರದಿ (Tv9 Impact) ಮಾಡಿ ಅಕ್ರಮ ಬಯಲು ಮಾಡಿತ್ತು. ಸದ್ಯ ಈಗ ಅದೇ ರೀತಿಯಲ್ಲಿ ಕಲಬುರಗಿ ಸೆಂಟ್ರಲ್​​ ಜೈಲಿನಲ್ಲೂ (Kalaburagi Central jail) ಅಕ್ರಮ ನಡೆಯುತ್ತಿದ್ದು ಈ ಬಗ್ಗೆಯೂ ಟಿವಿ9 ಧ್ವನಿ ಎತ್ತಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ದುಡ್ಡೊಂದಿದ್ರೆ ಸಾಕು ಕೈದಿಗಳಿಗೂ ಅತಿಥಿ ಸತ್ಕಾರ ಮಾಡಲಾಗುತ್ತೆ. ಅದರಲ್ಲೂ ದೊಡ್ಡ ಹಗರಣ ಮಾಡಿದವರಿಗೆ, ನಟೋರಿಯಸ್‌ ಕೈದಿಗಳಿಗೂ ಇಲ್ಲಿ ರಾಜಮರ್ಯಾದೆ, ರಾಜವೈಭೋಗ ಸಿಗುತ್ತೆ ಎಂದು ವರದಿ ಮಾಡಿತ್ತು. ಇದೀಗ ಕಲಬುರಗಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಟಿವಿ9 ವರದಿ ಪ್ರಸ್ತಾಪ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಲಬುರಗಿ ಸೆಂಟ್ರಲ್​​ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಟಿವಿ9 ವರದಿ ಪ್ರಸಾರ ಮಾಡಿತ್ತು. ಇಂದು ಕಲಬುರಗಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಟಿವಿ9 ವರದಿ ಪ್ರಸ್ತಾಪ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭೆಯಲ್ಲಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೆ ತನಿಖೆ ನಡೆಸಿ ನಾಳೆಯೊಳಗೆ ವರದಿ ನೀಡುವಂತೆ ಕಲಬುರಗಿ ಕಮಿಷನರ್​, ಎಸ್​ಪಿಗೆ ಸೂಚನೆ ನೀಡಿದ್ದಾರೆ.

ನಿಮಗೆ ಕೈದಿಯನ್ನು ಕಾಯಲು ಆಗಲ್ಲ, ರಾಜಾತಿಥ್ಯ ನೀಡುತ್ತೀರಾ? ಎಂದು ಕೆಡಿಪಿ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಉತ್ತರಿಸಿದ ಮುಖ್ಯ ಅಧೀಕ್ಷಕ ರಂಗನಾಥ, ಇದು ಹಳೆಯ ವಿಡಿಯೋ ಎಂದಿದ್ದಾರೆ. ಹಾಗಾದರೆ ಅದಕ್ಕೆ ಸಾಕ್ಷಿ ಕೊಡಿ. ನಿಮ್ಮ ಜೈಲಿನ ಸಿಸಿಟಿವಿ ದೃಶ್ಯಾವಳಿ ಕೊಡಿ ಎಂದು ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿ ವಿರುದ್ಧ ಗರಂ ಆದರು.

ಇದನ್ನೂ ಓದಿ: PSI ಅಕ್ರಮದ ಕಿಂಗ್​ಪಿನ್​ಗೆ ರಾಜಾತಿಥ್ಯ! ಟಿವಿ9 ಸಾಕ್ಷ್ಯ ಸಮೇತ ಬಯಲು ಮಾಡ್ತಿದೆ ಕಲಬುರಗಿ ಜೈಲಿನ ಕರ್ಮಕಾಂಡ

ಮತ್ತೊಂದೆಡೆ ಈ ಬಗ್ಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಜೈಲಿನಲ್ಲಿ ಆ ರೀತಿ ಏನಾದರು ನಡೆದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.  ನಮ್ಮ ಸರ್ಕಾರ ಇಂತಹದ್ದಕ್ಕೆಲ್ಲ ಆಸ್ಪದ ನೀಡುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯ ಕಂಡು ಬಂದರೂ ಕಠಿಣ ಕ್ರಮ ಗ್ಯಾರಂಟಿ ಎಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ  

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ