ಮಹಿಳಾ ಪೇದೆಯ ಸಿಡಿಆರ್ ಕದ್ದು ಬೇರೆ ವ್ಯಕ್ತಿಗೆ ನೀಡಿದ್ದಕ್ಕೆ ಮದ್ವೆ ರದ್ದು: ಇದಕ್ಕೆ ಕಾರಣರಾದ ಇಬ್ಬರು ಕಾನ್ಸ್​ಟೇಬಲ್ ಸಸ್ಪೆಂಡ್

ಮಹಿಳಾ ಪೇದೆಯ ಸಿಡಿಆರ್ ಕದ್ದಿಲ್ಲದೇ ಬೇರೆ ವ್ಯಕ್ತಿಗೆ ನೀಡಿದ್ದು, ಆ ವ್ಯಕ್ತಿ ಮಹಿಳಾ ಪೇದೆಯ ಮದುವೆಯನ್ನೇ ನಿಲ್ಲಿಸಿದ್ದಾನೆ. ಇದಕ್ಕೆ ಮೂಲಕ ಕಾರಣರಾದ ಕಲಬುರಗಿಯ ಇಬ್ಬರು ಹೆಡ್​ ಕಾನ್ಸ್​ಟೇಬಲ್​ಗಳನ್ನು ಅಮಾನತು ಮಾಡಲಾಗಿದೆ.

ಮಹಿಳಾ ಪೇದೆಯ ಸಿಡಿಆರ್ ಕದ್ದು ಬೇರೆ ವ್ಯಕ್ತಿಗೆ ನೀಡಿದ್ದಕ್ಕೆ ಮದ್ವೆ ರದ್ದು: ಇದಕ್ಕೆ ಕಾರಣರಾದ ಇಬ್ಬರು ಕಾನ್ಸ್​ಟೇಬಲ್ ಸಸ್ಪೆಂಡ್
ಸಾಂದರ್ಭಿಕ ಚಿತ್ರ
Edited By:

Updated on: Dec 27, 2023 | 1:44 PM

ಕಲಬುರಗಿ, (ಡಿಸೆಂಬರ್ 27): ಮಹಿಳಾ ಪೇದೆಯೊಬ್ಬರ(Lady Police) ಸಿಡಿಆರ್ ಕದ್ದು ಬೇರೆ ಖಾಸಗಿ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ. ಬಳಿಕ ಖಾಸಗಿ ವ್ಯಕ್ತಿ ಮಹಿಳಾ ಪೇದೆಯನ್ನು ಮದುವೆಯಾಗಬೇಕಿದ್ದ ಹುಡುಗನಿಗೆ ಸಿಡಿಆರ್ ಕಳುಹಿಸಿದ್ದಾನೆ. ಇದರಿಂದ ಮಹಿಳಾ ಪೇದೆಯ ಮದುವೆ ರದ್ದಾಗಿದೆ. ಇದೀಗ ಇದಕ್ಕೆಲ್ಲ ಕಾರಣರಾದ ಕಲಬುರಗಿಯ (Kalaburagi) ಮಹಿಳಾ ಠಾಣೆ ಹೆಡ್ ಕಾನ್ಸಟೇಬಲ್ ತುಕಾರಾಂ ಹಾಗೂ ಸ್ಟೇಷನ್ ಬಜಾರ್ ಠಾಣೆ ಹೆಡ್ ಕಾನ್ಸಟೇಬಲ್ ವೇದರತ್ನ ಅವರನ್ನು ಪೊಲೀಸ್ ಆಯುಕ್ತ ಆರ್ ಚೇತನ್ ಅಮಾನತು ಮಾಡಿ ಆದೇಶ.

ಬೇರೆ ಕ್ರೈಂ ನಂಬರ್ ಹಾಕಿ ಮಹಿಳಾ ಕಾನ್ಸಟೇಬಲ್ ಸಿಡಿಆರ್ ಕದ್ದಿದ್ದರು. ಅಲ್ಲದೇ ಕದ್ದಿದ್ದಲ್ಲೇ ಅದನ್ನು ಖಾಸಗಿ ವ್ಯಕ್ತಿಗೆ ನೀಡಿದ್ದರು. ಇದನ್ನು ತೆಗೆದುಕೊಂಡಿದ್ದ ಖಾಸಗಿ ವ್ಯಕ್ತಿ, ಅವರನ್ನು (ಮಹಿಳಾ ಪೇದೆ) ನಾನು ಲವ್ ಮಾಡಿದ್ದೆನೆಂದು ಸಿಡಿಆರ್ ಕಳುಹಿಸಿ ಮದುವೆ ನಿಲ್ಲಿಸಿದ್ದಾನೆ. ಹೀಗಾಗಿ ಖಾಸಗಿ ವ್ಯಕ್ತಿಗೆ ಸಿಡಿಆರ್ ನೀಡಿದ ಆರೋಪದಡಿ ಮಹಿಳಾ ಠಾಣೆ ಹೆಡ್ ಕಾನ್ಸಟೇಬಲ್ ತುಕಾರಾಂ ಹಾಗೂ ಸ್ಟೇಷನ್ ಬಜಾರ್ ಠಾಣೆ ಹೆಡ್ ಕಾನ್ಸಟೇಬಲ್ ವೇದರತ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ಆರ್ ಚೇತನ್ ಅದೇಶ ಹೊರಡಿಸಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us