AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್

ಸೆಪ್ಟೆಂಬರ್ 17 ರಂದು ರಾತ್ರಿ ನಡು ರಸ್ತೆಯಲ್ಲೇ ನೂರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಯುವಕನನ್ನು ಕೊಚ್ಚಿ ರಕ್ತದೋಕುಳಿ ಆಡುದ್ರು ಯಾರೂ ಅದನ್ನು ನಿಲ್ಲಿಸುವ ಕೆಲಸ ಮಾಡಿಲ್ಲ.

ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್
TV9 Web
| Edited By: |

Updated on:Sep 19, 2022 | 7:19 AM

Share

ಕಲಬುರಗಿ: ಜಿಲ್ಲೆಯ ಜನನಿಬಿಡ ಪ್ರದೇಶದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ(Murder). ಸಿನಿಮಾ ರೀತಿಯಲ್ಲಿ ಇಬ್ಬರು‌ ದುಷ್ಕರ್ಮಿಗಳು ಯುವಕನನ್ನು ಅಡ್ಡಾಡಿಸಿಕೊಂಡು ಹೋಗಿ ಕೊಲೆ ಮಾಡಿದ್ದಾರೆ. ಯುವಕನ ಕೊಲೆ ವೇಳೆ ಸ್ಥಳದಲ್ಲೇ ನೂರಾರು ಜನರು ಇದ್ರು ಯಾರು ಯುವಕನ ರಕ್ಷಣೆಗೆ ಬಂದಿಲ್ಲಾ. ಕಲಬುರಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಸಮೀರ್(23) ಕೊಲೆಯಾದ ಯುವಕ. ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದ ಕೊಲೆ ಬೆಚ್ಚಿಬೀಳಿಸುವಂತಿದೆ. ಸೆಪ್ಟೆಂಬರ್ 17 ರಂದು ರಾತ್ರಿ ನಡು ರಸ್ತೆಯಲ್ಲೇ ನೂರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಯುವಕನನ್ನು ಕೊಚ್ಚಿ ರಕ್ತದೋಕುಳಿ ಆಡುದ್ರು ಯಾರೂ ಅದನ್ನು ನಿಲ್ಲಿಸುವ ಕೆಲಸ ಮಾಡಿಲ್ಲ. ಕೊಲೆಯನ್ನು ನೋಡುತ್ತಾ ಸುಮ್ಮನೆ ನಿಂತಿದ್ದರು. ದುಷ್ಕರ್ಮಿಗಳ ಬಳಿಯಿದ್ದ ಮಾರಕಾಸ್ತ್ರಗಳನ್ನು ನೋಡಿ ಭಯದಿಂದ ದೂರ ನಿಂತಿದ್ರು. ಅನೇಕ ಬಾರಿ ಮಾರಕಾಸ್ತ್ರದಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಯುವಕನ ಬರ್ಬರ ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರು, ಬೈಕ್​​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು ಜಿಲ್ಲೆ ನಂಜನಗೂಡು ವಿದ್ಯಾಪೀಠದ ಬಳಿ ಕಾರು, ಬೈಕ್​​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಮಹೇಶ್, ಮಹದೇವ ಮೃತ ದುರ್ದೈವಿಗಳು. ಇವರು ಚಾಮರಾಜನಗರ ತಾಲೂಕಿನ ಹೆಗ್ಗೊಟರು ನಿವಾಸಿಗಳು. ಅಪಘಾತದ ಬಳಿಕ ಕಾರು ಚಾಲಕ ಪೊಲೀಸರಿಗೆ ಶರಣಾಗಿದ್ದಾರೆ.

ಮೈಸೂರಿನಲ್ಲಿ ಸರಣಿ ಕಳ್ಳತನ

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸರಣಿ ಕಳ್ಳತನ ನಡೆಯುತ್ತಿದೆ. ರೇಣುಕಾ, ಚಾಮುಂಡೇಶ್ವರಿ ಬಾರ್ & ರೆಸ್ಟೋರೆಂಟ್, ಟಿ.ಪಿ ಸ್ಟೋರ್, ಟೀ ಅಂಗಡಿ ಬೀಗ ಒಡೆದು ಕಳ್ಳತನ ಮಾಡಲಾಗಿದೆ. ಬೆಳ್ತೂರಿನಲ್ಲಿ ಐದು ಪಂಪ್​​ಸೆಟ್‌ನ ಕೇಬಲ್ ಕಳ್ಳತನವಾಗಿದೆ. ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 am, Mon, 19 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ