AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್

ಸೆಪ್ಟೆಂಬರ್ 17 ರಂದು ರಾತ್ರಿ ನಡು ರಸ್ತೆಯಲ್ಲೇ ನೂರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಯುವಕನನ್ನು ಕೊಚ್ಚಿ ರಕ್ತದೋಕುಳಿ ಆಡುದ್ರು ಯಾರೂ ಅದನ್ನು ನಿಲ್ಲಿಸುವ ಕೆಲಸ ಮಾಡಿಲ್ಲ.

ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್
TV9 Web
| Edited By: |

Updated on:Sep 19, 2022 | 7:19 AM

Share

ಕಲಬುರಗಿ: ಜಿಲ್ಲೆಯ ಜನನಿಬಿಡ ಪ್ರದೇಶದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ(Murder). ಸಿನಿಮಾ ರೀತಿಯಲ್ಲಿ ಇಬ್ಬರು‌ ದುಷ್ಕರ್ಮಿಗಳು ಯುವಕನನ್ನು ಅಡ್ಡಾಡಿಸಿಕೊಂಡು ಹೋಗಿ ಕೊಲೆ ಮಾಡಿದ್ದಾರೆ. ಯುವಕನ ಕೊಲೆ ವೇಳೆ ಸ್ಥಳದಲ್ಲೇ ನೂರಾರು ಜನರು ಇದ್ರು ಯಾರು ಯುವಕನ ರಕ್ಷಣೆಗೆ ಬಂದಿಲ್ಲಾ. ಕಲಬುರಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಸಮೀರ್(23) ಕೊಲೆಯಾದ ಯುವಕ. ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದ ಕೊಲೆ ಬೆಚ್ಚಿಬೀಳಿಸುವಂತಿದೆ. ಸೆಪ್ಟೆಂಬರ್ 17 ರಂದು ರಾತ್ರಿ ನಡು ರಸ್ತೆಯಲ್ಲೇ ನೂರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಯುವಕನನ್ನು ಕೊಚ್ಚಿ ರಕ್ತದೋಕುಳಿ ಆಡುದ್ರು ಯಾರೂ ಅದನ್ನು ನಿಲ್ಲಿಸುವ ಕೆಲಸ ಮಾಡಿಲ್ಲ. ಕೊಲೆಯನ್ನು ನೋಡುತ್ತಾ ಸುಮ್ಮನೆ ನಿಂತಿದ್ದರು. ದುಷ್ಕರ್ಮಿಗಳ ಬಳಿಯಿದ್ದ ಮಾರಕಾಸ್ತ್ರಗಳನ್ನು ನೋಡಿ ಭಯದಿಂದ ದೂರ ನಿಂತಿದ್ರು. ಅನೇಕ ಬಾರಿ ಮಾರಕಾಸ್ತ್ರದಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಯುವಕನ ಬರ್ಬರ ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರು, ಬೈಕ್​​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು ಜಿಲ್ಲೆ ನಂಜನಗೂಡು ವಿದ್ಯಾಪೀಠದ ಬಳಿ ಕಾರು, ಬೈಕ್​​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಮಹೇಶ್, ಮಹದೇವ ಮೃತ ದುರ್ದೈವಿಗಳು. ಇವರು ಚಾಮರಾಜನಗರ ತಾಲೂಕಿನ ಹೆಗ್ಗೊಟರು ನಿವಾಸಿಗಳು. ಅಪಘಾತದ ಬಳಿಕ ಕಾರು ಚಾಲಕ ಪೊಲೀಸರಿಗೆ ಶರಣಾಗಿದ್ದಾರೆ.

ಮೈಸೂರಿನಲ್ಲಿ ಸರಣಿ ಕಳ್ಳತನ

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸರಣಿ ಕಳ್ಳತನ ನಡೆಯುತ್ತಿದೆ. ರೇಣುಕಾ, ಚಾಮುಂಡೇಶ್ವರಿ ಬಾರ್ & ರೆಸ್ಟೋರೆಂಟ್, ಟಿ.ಪಿ ಸ್ಟೋರ್, ಟೀ ಅಂಗಡಿ ಬೀಗ ಒಡೆದು ಕಳ್ಳತನ ಮಾಡಲಾಗಿದೆ. ಬೆಳ್ತೂರಿನಲ್ಲಿ ಐದು ಪಂಪ್​​ಸೆಟ್‌ನ ಕೇಬಲ್ ಕಳ್ಳತನವಾಗಿದೆ. ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 am, Mon, 19 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ