AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್‌ನಲ್ಲಿ ನಡೆದಿದೆ. ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ
ಮೃತ ಯುವಕ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 30, 2023 | 7:53 AM

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್‌ನಲ್ಲಿ ನಡೆದಿದೆ. ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್‌ಲೈನ್ ಎನಿಮೇಶನ್ ಕೆಲಸ ಮಾಡುತ್ತಿದ್ದ ಮೃತ ಶಶಾಂಕ್, ಕೆಲಸದಲ್ಲಿ ಬಹಳಷ್ಟು ಒತ್ತಡ ಹಾಕಿಕೊಂಡಿದ್ದ. ಇದೀಗ ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

ಇದನ್ನೂಓದಿ:ಶಿವಮೊಗ್ಗ: ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ; ಒಂದೇ ವಾರದಲ್ಲಿ ಎರಡು ಖೈದಿಗಳ ಸಾವು

ಎಣ್ಣೆ ನಶೆಯಲ್ಲಿ ಕಿರಿಕ್: ಅತ್ತಿಗೆ, ಅಣ್ಣನ ಮಗನನ್ನ ಕತ್ತರಿಸಿ ಕೊಂದ ಬಾಮೈದ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲುಕಿನ ಹೆಗಡಹಳ್ಳಿ ಭೀಕರ ಡಬಲ್ ಮರ್ಡರ್​​ಗೆ ಸಾಕ್ಷಿಯಾಗಿದೆ. ಹೌದು ಏ.27 ರ ಮದ್ಯಾಹ್ನ ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದಾರೆ. ಇದೇ ವೇಳೆ ಗದ್ದೆ ಬಳಿ ಬಂದ ಮೈದುನ ಸತೀಶ್​ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ತೆಗೆದಿದ್ದಾನೆ. ಶಾಂತಮ್ಮ ಹಾಗೂ ಸತೀಶ್​ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಹೌದು ಶಾಂತಮ್ಮಳ ತಲೆ ಎದೆ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾನೆ. ಕುಡುಗೋಲಿನ ಏಟಿಗೆ ಶಾಂತಮ್ಮ ಅರಚಾಡುತ್ತ ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಅಮ್ಮನ ಚೀರಾಟ, ಕೂಗಾಟ ಕೇಳಿದ ಮಗ ಯಶವಂತ್ ಓಡೋಡಿ ಬಂದು, ತಾಯಿ ಸಹಾಯಕ್ಕೆ ಮುಂದಾಗಿದ್ದಾನೆ. ಈ ವೇಳೆ ಯಶವಂತ್ ಮೇಲೆಯೂ ದಾಳಿ ನಡೆಸಿದ ಸತೀಶ ಆತನನ್ನು ಕೊಚ್ಚಿ ಕೊಂದಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ