ಮಾರ್ಚ್ 12 ರಿಂದ ಕಲಬುರಗಿ – ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ

ಬೆಂಗಳೂರು- ಕಲಬುರಗಿ ಮಧ್ಯೆ ಪ್ರತ್ಯೇಕ ರೈಲಿಗಾಗಿ ಬೇಡಿಕೆ ಹಾಗೂ ವಂದೇ ಭಾರತ್ ರೈಲು ಗಾಡಿಗಾಗಿ ಸಂಸತ್ತಿನಲ್ಲಿ ಹಲವು ಬಾರಿ ಗಮನ ಸೆಳೆಯಲಾಗಿತ್ತು. ಜನತೆಯ ಬೇಡಿಕೆಗೆ ಸ್ಪಂದಿಸಿ ಮೊನ್ನೆಯಷ್ಟೇ ಕಲಬುರಗಿ - ಬೆಂಗಳೂರು (ಬೈಯಪ್ಪನಹಳ್ಳಿ) ವಿಶೇಷ ರೈಲು ಘೋಷಣೆ ಮಾಡಲಾಗಿದ್ದು, ಮಾರ್ಚ್ 9, ಶನಿವಾರದಿಂದ ಸಂಚಾರ ಪ್ರಾರಂಭವಾಗಲಿದೆ. ಜೊತೆಗೆ ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ.

ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ
ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 07, 2024 | 7:31 PM

ಕಲಬುರಗಿ, ಮಾ.07: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಲಬುರಗಿ(Kalaburagi) ಜನತೆಗೆ ನೂತನ ವಂದೇ ಭಾರತ್ ರೈಲು(Vande Bharat Train) ಘೋಷಣೆ ಮಾಡಿದ್ದು, ಮಾರ್ಚ್ 12 ರಿಂದ ಸಂಚಾರ ಪ್ರಾರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಿ. ಜಾಧವ್ ಮಾಹಿತಿ ನೀಡಿದ್ದಾರೆ. ಕೇಂದ್ರ ರೈಲ್ವೆ ಇಲಾಖೆಯಿಂದ ಇಂದು(ಮಾ.07) ಈ ಬಗ್ಗೆ ಮಾಹಿತಿ ಕೈ ಸೇರಿದ್ದು, ಮಾರ್ಚ್ 12ರಂದು ಪ್ರಧಾನ ಮಂತ್ರಿಗಳು ವಂದೇ ಭಾರತ್ ರೈಲುಗಾಡಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಬೆಂಗಳೂರು- ಕಲಬುರಗಿ ಮಧ್ಯೆ ಪ್ರತ್ಯೇಕ ರೈಲುಗಾಡಿ ಬೇಡಿಕೆ ಹಾಗೂ ವಂದೇ ಭಾರತ್ ರೈಲು ಗಾಡಿಗಾಗಿ ಸಂಸತ್ತಿನಲ್ಲಿ ಹಲವು ಬಾರಿ ಗಮನ ಸೆಳೆಯಲಾಗಿತ್ತು. ಜನತೆಯ ಬೇಡಿಕೆಗೆ ಸ್ಪಂದಿಸಿ ಮೊನ್ನೆಯಷ್ಟೇ ಕಲಬುರಗಿ – ಬೆಂಗಳೂರು (ಬೈಯಪ್ಪನಹಳ್ಳಿ) ವಿಶೇಷ ರೈಲು ಘೋಷಣೆ ಮಾಡಿ ನಾಡಿದ್ದು (ಮಾರ್ಚ್ 9 ರಂದು ಶನಿವಾರ) ಸಂಚಾರ ಪ್ರಾರಂಭವಾಗಲಿದೆ. ಹಲವು ಭಾರಿ ಮನವಿ ಸಲ್ಲಿಸಿ ಒತ್ತಾಯಿಸಿದ ಫಲವಾಗಿ ಪ್ರಧಾನ ಮಂತ್ರಿಯವರು ಕಲಬುರಗಿ ಜನತೆಗೆ ವಿಶೇಷವಾಗಿ ವಂದೇ ಭಾರತ್ ರೈಲು ಘೋಷಣೆ ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ.

ಇದನ್ನೂ ಓದಿ:Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​

ಇದು ನನ್ನ ಜೀವನದ ಧನ್ಯತೆಯ ಕ್ಷಣ- ಉಮೇಶ್ ಜಿ. ಜಾಧವ್

ಇದು ನನ್ನ ಜೀವನದ ಧನ್ಯತೆಯ ಕ್ಷಣವಾಗಿದೆ. ಕೇಳಿದ್ದು ಒಂದು ರೈಲು ಪ್ರಧಾನಿಯವರು ಕೊಟ್ಟದ್ದು ಎರಡು ರೈಲು. ಇದು ಕಲಬುರಗಿ ಜನತೆಯ ಮೇಲೆ ಪ್ರಧಾನಿಯವರಿಗೆ ಇರುವ ಪ್ರೀತಿಗೆ ಸಾಕ್ಷಿಯಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಜನತೆಗೆ ನೀಡಿದ ವಾಗ್ದಾನವನ್ನು ಈಡೇರಿಸಿದ್ದು ಈ ಭಾಗದ ಅಭಿವೃದ್ಧಿಯಲ್ಲಿಯೇ  ಮೈಲಿಗಲ್ಲಾಗಲಿದೆ ಎಂದು ಜಾಧವ್ ಹೇಳಿದರು. ಇಂತಹ ಮಹಾನ್ ಕೊಡುಗೆಯನ್ನು ನೀಡಿದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಕಲಬುರಗಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಆಸೆ ಕೈಗೂಡಿದೆ. ಜನರು ಪ್ರಧಾನಿ ಅವರ ಕೆಲಸವನ್ನು ಮೆಚ್ಚಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು