AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 12 ರಿಂದ ಕಲಬುರಗಿ – ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ

ಬೆಂಗಳೂರು- ಕಲಬುರಗಿ ಮಧ್ಯೆ ಪ್ರತ್ಯೇಕ ರೈಲಿಗಾಗಿ ಬೇಡಿಕೆ ಹಾಗೂ ವಂದೇ ಭಾರತ್ ರೈಲು ಗಾಡಿಗಾಗಿ ಸಂಸತ್ತಿನಲ್ಲಿ ಹಲವು ಬಾರಿ ಗಮನ ಸೆಳೆಯಲಾಗಿತ್ತು. ಜನತೆಯ ಬೇಡಿಕೆಗೆ ಸ್ಪಂದಿಸಿ ಮೊನ್ನೆಯಷ್ಟೇ ಕಲಬುರಗಿ - ಬೆಂಗಳೂರು (ಬೈಯಪ್ಪನಹಳ್ಳಿ) ವಿಶೇಷ ರೈಲು ಘೋಷಣೆ ಮಾಡಲಾಗಿದ್ದು, ಮಾರ್ಚ್ 9, ಶನಿವಾರದಿಂದ ಸಂಚಾರ ಪ್ರಾರಂಭವಾಗಲಿದೆ. ಜೊತೆಗೆ ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ.

ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ
ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Mar 07, 2024 | 7:31 PM

Share

ಕಲಬುರಗಿ, ಮಾ.07: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಲಬುರಗಿ(Kalaburagi) ಜನತೆಗೆ ನೂತನ ವಂದೇ ಭಾರತ್ ರೈಲು(Vande Bharat Train) ಘೋಷಣೆ ಮಾಡಿದ್ದು, ಮಾರ್ಚ್ 12 ರಿಂದ ಸಂಚಾರ ಪ್ರಾರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಿ. ಜಾಧವ್ ಮಾಹಿತಿ ನೀಡಿದ್ದಾರೆ. ಕೇಂದ್ರ ರೈಲ್ವೆ ಇಲಾಖೆಯಿಂದ ಇಂದು(ಮಾ.07) ಈ ಬಗ್ಗೆ ಮಾಹಿತಿ ಕೈ ಸೇರಿದ್ದು, ಮಾರ್ಚ್ 12ರಂದು ಪ್ರಧಾನ ಮಂತ್ರಿಗಳು ವಂದೇ ಭಾರತ್ ರೈಲುಗಾಡಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಬೆಂಗಳೂರು- ಕಲಬುರಗಿ ಮಧ್ಯೆ ಪ್ರತ್ಯೇಕ ರೈಲುಗಾಡಿ ಬೇಡಿಕೆ ಹಾಗೂ ವಂದೇ ಭಾರತ್ ರೈಲು ಗಾಡಿಗಾಗಿ ಸಂಸತ್ತಿನಲ್ಲಿ ಹಲವು ಬಾರಿ ಗಮನ ಸೆಳೆಯಲಾಗಿತ್ತು. ಜನತೆಯ ಬೇಡಿಕೆಗೆ ಸ್ಪಂದಿಸಿ ಮೊನ್ನೆಯಷ್ಟೇ ಕಲಬುರಗಿ – ಬೆಂಗಳೂರು (ಬೈಯಪ್ಪನಹಳ್ಳಿ) ವಿಶೇಷ ರೈಲು ಘೋಷಣೆ ಮಾಡಿ ನಾಡಿದ್ದು (ಮಾರ್ಚ್ 9 ರಂದು ಶನಿವಾರ) ಸಂಚಾರ ಪ್ರಾರಂಭವಾಗಲಿದೆ. ಹಲವು ಭಾರಿ ಮನವಿ ಸಲ್ಲಿಸಿ ಒತ್ತಾಯಿಸಿದ ಫಲವಾಗಿ ಪ್ರಧಾನ ಮಂತ್ರಿಯವರು ಕಲಬುರಗಿ ಜನತೆಗೆ ವಿಶೇಷವಾಗಿ ವಂದೇ ಭಾರತ್ ರೈಲು ಘೋಷಣೆ ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ.

ಇದನ್ನೂ ಓದಿ:Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​

ಇದು ನನ್ನ ಜೀವನದ ಧನ್ಯತೆಯ ಕ್ಷಣ- ಉಮೇಶ್ ಜಿ. ಜಾಧವ್

ಇದು ನನ್ನ ಜೀವನದ ಧನ್ಯತೆಯ ಕ್ಷಣವಾಗಿದೆ. ಕೇಳಿದ್ದು ಒಂದು ರೈಲು ಪ್ರಧಾನಿಯವರು ಕೊಟ್ಟದ್ದು ಎರಡು ರೈಲು. ಇದು ಕಲಬುರಗಿ ಜನತೆಯ ಮೇಲೆ ಪ್ರಧಾನಿಯವರಿಗೆ ಇರುವ ಪ್ರೀತಿಗೆ ಸಾಕ್ಷಿಯಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಜನತೆಗೆ ನೀಡಿದ ವಾಗ್ದಾನವನ್ನು ಈಡೇರಿಸಿದ್ದು ಈ ಭಾಗದ ಅಭಿವೃದ್ಧಿಯಲ್ಲಿಯೇ  ಮೈಲಿಗಲ್ಲಾಗಲಿದೆ ಎಂದು ಜಾಧವ್ ಹೇಳಿದರು. ಇಂತಹ ಮಹಾನ್ ಕೊಡುಗೆಯನ್ನು ನೀಡಿದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಕಲಬುರಗಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಆಸೆ ಕೈಗೂಡಿದೆ. ಜನರು ಪ್ರಧಾನಿ ಅವರ ಕೆಲಸವನ್ನು ಮೆಚ್ಚಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್