AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 12 ರಿಂದ ಕಲಬುರಗಿ – ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ

ಬೆಂಗಳೂರು- ಕಲಬುರಗಿ ಮಧ್ಯೆ ಪ್ರತ್ಯೇಕ ರೈಲಿಗಾಗಿ ಬೇಡಿಕೆ ಹಾಗೂ ವಂದೇ ಭಾರತ್ ರೈಲು ಗಾಡಿಗಾಗಿ ಸಂಸತ್ತಿನಲ್ಲಿ ಹಲವು ಬಾರಿ ಗಮನ ಸೆಳೆಯಲಾಗಿತ್ತು. ಜನತೆಯ ಬೇಡಿಕೆಗೆ ಸ್ಪಂದಿಸಿ ಮೊನ್ನೆಯಷ್ಟೇ ಕಲಬುರಗಿ - ಬೆಂಗಳೂರು (ಬೈಯಪ್ಪನಹಳ್ಳಿ) ವಿಶೇಷ ರೈಲು ಘೋಷಣೆ ಮಾಡಲಾಗಿದ್ದು, ಮಾರ್ಚ್ 9, ಶನಿವಾರದಿಂದ ಸಂಚಾರ ಪ್ರಾರಂಭವಾಗಲಿದೆ. ಜೊತೆಗೆ ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ.

ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ
ಮಾರ್ಚ್ 12 ರಿಂದ ಕಲಬುರಗಿ - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Mar 07, 2024 | 7:31 PM

Share

ಕಲಬುರಗಿ, ಮಾ.07: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಲಬುರಗಿ(Kalaburagi) ಜನತೆಗೆ ನೂತನ ವಂದೇ ಭಾರತ್ ರೈಲು(Vande Bharat Train) ಘೋಷಣೆ ಮಾಡಿದ್ದು, ಮಾರ್ಚ್ 12 ರಿಂದ ಸಂಚಾರ ಪ್ರಾರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಿ. ಜಾಧವ್ ಮಾಹಿತಿ ನೀಡಿದ್ದಾರೆ. ಕೇಂದ್ರ ರೈಲ್ವೆ ಇಲಾಖೆಯಿಂದ ಇಂದು(ಮಾ.07) ಈ ಬಗ್ಗೆ ಮಾಹಿತಿ ಕೈ ಸೇರಿದ್ದು, ಮಾರ್ಚ್ 12ರಂದು ಪ್ರಧಾನ ಮಂತ್ರಿಗಳು ವಂದೇ ಭಾರತ್ ರೈಲುಗಾಡಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಬೆಂಗಳೂರು- ಕಲಬುರಗಿ ಮಧ್ಯೆ ಪ್ರತ್ಯೇಕ ರೈಲುಗಾಡಿ ಬೇಡಿಕೆ ಹಾಗೂ ವಂದೇ ಭಾರತ್ ರೈಲು ಗಾಡಿಗಾಗಿ ಸಂಸತ್ತಿನಲ್ಲಿ ಹಲವು ಬಾರಿ ಗಮನ ಸೆಳೆಯಲಾಗಿತ್ತು. ಜನತೆಯ ಬೇಡಿಕೆಗೆ ಸ್ಪಂದಿಸಿ ಮೊನ್ನೆಯಷ್ಟೇ ಕಲಬುರಗಿ – ಬೆಂಗಳೂರು (ಬೈಯಪ್ಪನಹಳ್ಳಿ) ವಿಶೇಷ ರೈಲು ಘೋಷಣೆ ಮಾಡಿ ನಾಡಿದ್ದು (ಮಾರ್ಚ್ 9 ರಂದು ಶನಿವಾರ) ಸಂಚಾರ ಪ್ರಾರಂಭವಾಗಲಿದೆ. ಹಲವು ಭಾರಿ ಮನವಿ ಸಲ್ಲಿಸಿ ಒತ್ತಾಯಿಸಿದ ಫಲವಾಗಿ ಪ್ರಧಾನ ಮಂತ್ರಿಯವರು ಕಲಬುರಗಿ ಜನತೆಗೆ ವಿಶೇಷವಾಗಿ ವಂದೇ ಭಾರತ್ ರೈಲು ಘೋಷಣೆ ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ.

ಇದನ್ನೂ ಓದಿ:Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​

ಇದು ನನ್ನ ಜೀವನದ ಧನ್ಯತೆಯ ಕ್ಷಣ- ಉಮೇಶ್ ಜಿ. ಜಾಧವ್

ಇದು ನನ್ನ ಜೀವನದ ಧನ್ಯತೆಯ ಕ್ಷಣವಾಗಿದೆ. ಕೇಳಿದ್ದು ಒಂದು ರೈಲು ಪ್ರಧಾನಿಯವರು ಕೊಟ್ಟದ್ದು ಎರಡು ರೈಲು. ಇದು ಕಲಬುರಗಿ ಜನತೆಯ ಮೇಲೆ ಪ್ರಧಾನಿಯವರಿಗೆ ಇರುವ ಪ್ರೀತಿಗೆ ಸಾಕ್ಷಿಯಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಜನತೆಗೆ ನೀಡಿದ ವಾಗ್ದಾನವನ್ನು ಈಡೇರಿಸಿದ್ದು ಈ ಭಾಗದ ಅಭಿವೃದ್ಧಿಯಲ್ಲಿಯೇ  ಮೈಲಿಗಲ್ಲಾಗಲಿದೆ ಎಂದು ಜಾಧವ್ ಹೇಳಿದರು. ಇಂತಹ ಮಹಾನ್ ಕೊಡುಗೆಯನ್ನು ನೀಡಿದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಕಲಬುರಗಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಆಸೆ ಕೈಗೂಡಿದೆ. ಜನರು ಪ್ರಧಾನಿ ಅವರ ಕೆಲಸವನ್ನು ಮೆಚ್ಚಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್