ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ವ್ಯಕ್ತಿಯೋರ್ವ ಹಾಡಹಗಲೇ ಪತ್ನಿಯ ಕತ್ತು ಕೊಯ್ದು ಬಳಿಕ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕಾರಿನಲ್ಲಿ ಕರೆದುಕೊಂಡು ಬಂದು ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದಿದ್ದಾನೆ. ಬಳಿಕ ರಕ್ತಸಿಕ್ತದಲ್ಲಿ ತಪ್ಪಿಸಿಕೊಂಡು ಜಮೀನಿನಲ್ಲಿ ಓಡುತ್ತಿದ್ದ ಪತ್ನಿಗೆ ಕಾರಿನಿಂದ ಗುದ್ದಿ ಮೇಲೆ ಹಾಯಿಸಿ ಕೊಂದು ವಿಕೃತಿ ಮೆರೆದಿದ್ದಾನೆ. ಅಷ್ಟಕ್ಕೂ ಈ ರೀತಿ ವಿಕೃತವಾಗಿ ಸಾಯಿಸುವಷ್ಟು ಆಗಿದ್ದೇನು? ಎನ್ನುವ ವಿವರ ಇಲ್ಲಿದೆ.

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ
Afzalpur Murder
Edited By:

Updated on: Mar 26, 2026 | 6:10 PM

ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್‌ ಕೊಲೆ ಮಾಡಿದ ಆರೋಪಿ.  ಶೈಲಾಳನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ ಹೋಗಿದ್ದಾಳೆ. ಆದರೂ ಬಿಡಿದ ಪಾಪಿ ಪತಿ ಆಕೆ ಮೇಲೆ ಕಾರು ಹಾಯಿಸಿ ಭೀಕರವಾಗಿ ಕೊಂದಿದ್ದಾನೆ. ಪತಿಯ ಪೈಶಾಚಿಕ ಕೃತ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎದೆ ಝಲ್ ಎನ್ನಿಸುವಂತಿದೆ.

ಅನೈತಿಕ ಸಂಬಂಧವೇ ಕೊಲೆಗೆ ಕಾರಣನಾ?

ಅಕ್ಷಯ್​, ಶೈಲಾ ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ರೊಚ್ಚಿಗೆದ್ದು ಅಕ್ಷಯ್, ಶೈಲಾಳನ್ನ ಕೊಲೆ ಮಾಡಲು ಪಕ್ಕಾ ಪ್ಲ್ಯಾನ್ ಮಾಡಿದ್ದ. ಅದರಂತೆ ಗಾಣಗಾಪುರಕ್ಕೆ ಹೋಗೊಣ ಬಾ ಅಂತ ತಂದೆ ತಾಯಿ ಸಮೇತ ಪತ್ನಿಯನ್ನು ಕರೆದುಕೊಂಡು ಹೋಗಿದ್ದಾನೆ. ಬಳಿಕ ಮಾರ್ಗ ಮಧ್ಯೆ ಕಾರು ನಿಲ್ಲಿಸಿ ಪತ್ನಿಯನ್ನು ಹೊರಗೆ ಎಳೆದು ತನ್ನ ತಂದೆ ತಾಯಿ ಸಮ್ಮುಖದಲ್ಲೇ ಆಕೆಯ ಕುತ್ತಿಗೆಯನ್ನು ಕೊಯ್ದಿದ್ದಾನೆ. ಬಳಿಕ ಶೈಲಾ ಪ್ರಾಣ ಉಳಿಸಿಕೊಳ್ಳಲು ರಕ್ತಸಿಕ್ತದಲ್ಲೇ ಜಮೀನಿನಲ್ಲಿ ಓಡಿ ಹೋಗಿದ್ದಾಲೆ. ಆದರೂ ಬಿಡಿದ ಹಂತಕ ಪತಿ ಕಾರಿನಿಂದ ಗುದ್ದಿ ಬಳಿಕ ಆಕೆಯ ಮೇಲೆ ಹಾಯಿಸಿ ಕೊಂದಿದ್ದಾನೆ.

ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ

ಕೊಲೆ ಮಾಡುವ ದೃಶ್ಯ ಮೊಬೈಲ್​ನಲ್ಲಿ ಸೆರೆ

ಮಹಿಳೆಯನ್ನ ಕೊಲೆ ಮಾಡುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹತ್ಯೆಗೈಯ್ಯುತ್ತಿರುವ ಘೋರ ದೃಶ್ಯವನ್ನು ಜನ ನೋಡುತ್ತಲೇ ನಿಂತಿದ್ದರು. ಆದರೆ ಆಕೆಯನ್ನು ಕಾಪಾಡದ ಸ್ಥಿತಿಯಲ್ಲಿ ಎಲ್ಲರೂ ಗಾಬರಿಯಾಗಿದ್ದರು. ಇನ್ನು ಕೆಲವರು ಹಂತಕನ ಮೇಲೆ ಕಲ್ಲುಗಳನ್ನ ಎಸೆದು ಆಕೆಯ ಪ್ರಾಣವನ್ನು ಉಳಿಸುವ ಪ್ರಯತ್ನಿಸಿದ್ದಾರೆ. ಆದ್ರೆ, ಪ್ರಯೋಜನವಾಗಿಲ್ಲ. ಕೊಲೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನ್ನಿಸುವಂತಿದೆ.

ಸ್ಥಳಕ್ಕೆ ಕಲಬುರಗಿ ಎಸ್​ಪಿ ಅಡ್ಡೂರು ಶ್ರೀನಿವಾಸುಲು ಭೇಟಿ, ಪರಿಶೀಲನೆ ನಡೆಸಿದ್ದು, ಸದ್ಯ ಶೈಲಾ ಪತಿ ಹಂತಕ ಅಕ್ಷಯ್ ಹಾಗೂ ಆತನ ತಂದೆ ತಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಎಸ್ಪಿ ಹೇಳಿದ್ದೇನು?

ಈ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಪ್ರತಿಕ್ರಿಯಿಸಿದ್ದು, ಇಂದು (ಮಾರ್ಚ್ 26) ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ನಡೆದಿದೆ. ಕೊಲೆ ಮಾಡೋದನ್ನ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಗಾಣಗಾಪುರಕ್ಕೆ ಹೋಗೊಣ ಅಂತ ಒತ್ನಿಯನ್ನ ಕರೆತಂದಿದ್ದಾರೆ. ಅಲ್ಲಿಗೆ ಹೋಗುವ ಮಾರ್ಗ ಮಧ್ಯ ಕೊಲೆ ಮಾಡಿದ್ದಾರೆ. ಸದ್ಯ ಮೂವರನ್ನ ವಶಕ್ಕೆ ಪಡೆದಿದ್ದೆವೆ. ಮೂವರು ಮಹಾರಷ್ಟ್ರದ ಬಾರಮತಿ ಜಿಲ್ಲೆಯವರು. ಮದುವೆಯಾಗಿ ನಾಲ್ಕು ವರ್ಷ ಆಗಿತ್ತು. ಪತ್ನಿಯ ಅನೈತಿಕ ಸಂಬಂಧದ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೆವೆ‌ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Thu, 26 March 26

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us