AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳಲಿ -ಮಧು ಬಂಗಾರಪ್ಪ

ಕಲಬುರಗಿಯಲ್ಲಿ ಸಚಿವ ಮಧು ಬಂಗಾರಪ್ಪ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ಅನಂತಕುಮಾರ್ ಹೆಗಡೆ ಹಾಗೂ ಆರ್. ಅಶೋಕ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರ ಮನೆಯಲ್ಲಿ ಕೆಲಸ ಮಾಡೋರು ಕೂಡಾ ನಮ್ಮ ಗ್ಯಾರೆಂಟಿ ತೆಗೆದು ಕೊಳ್ತಿದ್ದಾರೆ. ಮೋದಿಯವರು ಇದನ್ನೂ ಕಾಪಿ ಮಾಡಿದ್ದಾರೆ‌ ಎಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.

ಯತ್ನಾಳ್​ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳಲಿ -ಮಧು ಬಂಗಾರಪ್ಪ
ಮಧು ಬಂಗಾರಪ್ಪ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 08, 2024 | 3:01 PM

Share

ಕಲಬುರಗಿ, ಮಾರ್ಚ್​.08: ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ (Madhu Bangarappa) ವಾಗ್ದಾಳಿ ನಡೆಸಿದ್ದಾರೆ. ಯತ್ನಾಳ್​ಗೆ (Basanagouda Patil Yatnal) ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳೋಕೆ ಹೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಗೂ ಇದೇ ವೇಳೆ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ವಿರುದ್ಧವೂ ಕಿಡಿಕಾರಿದ್ದು ಹೆಗಡೆ ದೊಡ್ಡ ಹುಚ್ಚ, ಏಲೆಕ್ಷನ್ ಬರೋವರೆಗೂ ಮಲ್ಕೊಂಡಿರುತ್ತಾನೆ, ಏಲೆಕ್ಷನ್ ಬಂದ ತಕ್ಷಣ ಎದ್ದು ಬರ್ತಾನೆ ಎಂದಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಕಾಂಗ್ರೆಸ್ ಜನರನ್ನ ಹುಚ್ಚರನ್ನಾಗಿ ಮಾಡ್ತಿದೆ ಎಂಬ ಸಂಸದ ಹೆಗೆಡೆ ಹೇಳಿಕೆಗೆ ತಿರುಗೇಟು ನೀಡಿದ ಮಧು ಬಂಗಾರಪ್ಪ, ಹೆಗಡೆ ದೊಡ್ಡ ಹುಚ್ಚ, ಏಲೆಕ್ಷನ್ ಬರೋವರೆಗೂ ಮಲ್ಕೊಂಡಿರುತ್ತಾನೆ, ಏಲೆಕ್ಷನ್ ಬಂದ ತಕ್ಷಣ ಎದ್ದು ಬರ್ತಾನೆ. ಈ ಭಾರಿ ಆತನನ್ನ ರಾಜಕೀಯವಾಗಿ ಪರ್ಮನೆಂಟ್ ಆಗಿ ಮಲಗಿಸುತ್ತೇವೆ. ಏಕವಚನದಲ್ಲಿ ಮಾತನಾಡೋದೆ ಅವರ ಮನೆ ಸಂಸ್ಕೃತಿ ಎಂದು ಹೆಗಡೆ ವಿರುದ್ದ ಮಧುಬಂಗಾರಪ್ಪ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಹೆಡ್ ಲೆಸ್ ಬಿಜೆಪಿಯಿತ್ತು. ಇವಾಗ ಆರ್​. ಅಶೋಕ್ ಅವರನ್ನು ಹೆಡ್ ಮಾಡಿದ್ದಾರೆ. ಆ ಮನುಷ್ಯನಿಗೆ ತಲೆ ಎಲ್ಲಿದೆ ಎನ್ನೋದೆ ಗೊತ್ತಿಲ್ಲ. ಏನೇನೋ ಹೇಳಿಕೆ ಕೊಡ್ತಾರೆ. ಎನ್​ಡಿಆರ್​ಎಫ್ ಪರಿಹಾರಕ್ಕೋಸ್ಕರ ಕಾಯಬಾರದು. ಹಾಗಿದ್ರೆ NDRF ತೆಗೆದುಬಿಡೋಕೆ ಹೇಳಿ‌‌. ರಾಜ್ಯದ ಬಡಜನರಿಗೆ ನಮ್ಮ ಗ್ಯಾರೆಂಟಿ ಅನೂಕುಲ ಆಗಿವೆ‌. ಬಿಜೆಪಿ ನಾಯಕರ ಮನೆಯಲ್ಲಿ ಕೆಲಸ ಮಾಡೋರು ಕೂಡಾ ನಮ್ಮ ಗ್ಯಾರೆಂಟಿ ತೆಗೆದು ಕೊಳ್ತಿದ್ದಾರೆ. ಮೋದಿಯವರು ಇದನ್ನೂ ಕಾಪಿ ಮಾಡಿದ್ದಾರೆ‌. ಮೊದಲು ಗ್ಯಾರೆಂಟಿಗೆ ವಾರೆಂಟಿ ಇಲ್ಲ ಅಂದ್ರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕರು ಕರಿಮಣಿ ಮಾಲೀಕ ನಾನಲ್ಲ ಅಂತಿದ್ದಾರೆ: ಅನಂತ್ ಕುಮಾರ್ ಹೆಗಡೆ ವ್ಯಂಗ್ಯ

ಇನ್ನು ಬಿಜೆಪಿ ಆಪರೇಷನ್ ಕಮಲ ವಿಚಾರ ಸಂಬಂಧ ಮಾತನಾಡಿದ ಸಚಿವರು, ಅವರ ಆಪರೇಷನ್ ನಾವು ಫೇಲ್ ಮಾಡ್ತೇವೆ. ಅವರು ಯಾವತ್ತೋ ಸಂವಿಧಾನಾತ್ಮಕವಾಗಿ ಅಧಿಕಾರಕ್ಕೆ ಬಂದಿಲ್ಲ. ಕಳೆದ ಭಾರಿ ಹೀಗ್ ಮಾಡೇ 67ಕ್ಕೆ ಬಂದಿದ್ದಾರೆ. ಮುಂದೆ ಹೀಗೆ ಮಾಡಿದ್ರೆ 37 ಕ್ಕೆ ಬರ್ತಾರೆ‌ ಎಂದರು.

ಪಾಕಿಸ್ತಾನ ಪರ ಘೋಷಣೆ ವಿಚಾರ ಸಂಬಂಧ ಮಾತನಾಡಿದ ಮಧು ಬಂಗಾರಪ್ಪ ಎಲ್ಲಾ ಕೂಗಲಿ, ಯಾರೇ ಕೂಗಲಿ ಅದು ತಪ್ಪು ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಬಾಂಬ್ ಬ್ಲಾಸ್ಟ್ ಆಯ್ತು, ಮುಂದೆ ಏನ್ ಮಾಡಬೇಕು ಎನ್ನೋದು ನೋಡಬೇಕು. ಅದು ಬಿಟ್ಟು ನಮ್ಮ ಮೇಲೆ ಆರೋಪ ಮಾಡಿದ್ರೆ. ಕರ್ನಾಟಕ ಏನು ಪಾಕಿಸ್ತಾನದಲ್ಲಿದಿಯಾ? ನಮ್ಮ ದೇಶದಲ್ಲೆ ಇರೋದು ತಾನೇ. ಹಾಗಿದ್ರೆ ಕೇಂದ್ರದ ಏಜೆನ್ಸಿಯವರು ಏನ್ ಮಾಡ್ತಿದ್ರು. ಅವನು ಎಲ್ಲಿಂದ ಬಂದ ಎನ್ನೋದು ಗೊತ್ತಿಲ್ವಾ? ಹಾಗಿದ್ರೆ ಅವರು ಏನ್ ಮಾಡ್ತಿದ್ರು?ಸುಮ್ನೆ ಆರೋಪ ಮಾಡೋದು ಬಿಡಬೇಕು. ಮಣಿಪುರದಲ್ಲಿ ಏನ್ ಆಗಿತ್ತು, ಬಿಜೆಪಿಯವರು ಒಬ್ಬರಾದ್ರು ಅಲ್ಲಿಗೆ ಹೋಗಿದ್ರಾ? ಎಂದು ಕಲಬುರಗಿಯಲ್ಲಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:36 pm, Fri, 8 March 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?